<p><strong>ಕುರುಗೋಡು</strong>: ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ಬಿ.ಆರ್. ಅಂಬೇಡ್ಕರ್ ಸಂಘದ ವತಿಯಿಂದ ಆಚರಿಸಿದ ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಅಂಗವಾಗಿ ಚಿತ್ರ ಮೆರವಣಿಗೆ ಸೋಮವಾರ ಜರುಗಿತು.</p>.<p>ಪಟ್ಟಣದ ದೊಡ್ಡಬಸವೇಶ್ವರ ದೇವಸ್ಥಾನದಿಂದ ಪ್ರಾರಂಭಗೊ0ಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಮಾವೇಶಗೊಂಡಿತು.</p>.<p>ಮಹಿಳೆಯರಿಂದ ಕಳಸ, ಪೂರ್ಣಕುಂಭ, ತಾಸಿರಾಮ್, ರಾಮಡೋಲ್, ಹಗಲು ವೇಶ ಕಲಾವಿದರ ತಂಡ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದ್ದವು.</p>.<p>ವಿವಿಧ ಸಂಘಟನೆಗಳ ಮುಖಂಡರು, ತಹಶೀಲ್ದಾರ್ ಕಚೇರಿ ಮತ್ತು ಪುರಸಭೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ಹೆಜ್ಜೆಹಾಕಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ನರಸಪ್ಪ ತಹಶೀಲ್ದಾರ್ ಮಾತನಾಡಿ, ‘ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಬಿ.ಆರ್.ಅಂಬೇಡ್ಕರ್ ಅವರನ್ನು ಜಾತಿಬೇಧವಿಲ್ಲದೆ ಎಲ್ಲರೂ ಅಪ್ಪಿಕೊಳ್ಳಬೇಕು ಮತ್ತು ಅವರ ವಿಚಾರಧಾರೆಗಳನ್ನು ಒಪ್ಪಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಪುರಸಭೆ ಅಧ್ಯಕ್ಷ ಟಿ. ಶೇಖಣ್ಣ ಮಾತನಾಡಿ, ‘ಬಿ.ಆರ್.ಅಂಬೇಡ್ಕರ್ ಅವರ ಚಿತ್ರಕ್ಕೆ ಪೂಜೆ ಸಲ್ಲಿಸಿದರೆ ಪ್ರಯೋಜನವಿಲ್ಲ. ಅವರ ವಿಚಾರಧಾರೆಗಳನ್ನು ಎಲ್ಲೆಡೆ ಪಸರಿಸುವ ಕೆಲಸ ಮಾಡಬೇಕು’ ಎಂದರು.</p>.<p>ಉಪನ್ಯಾಸಕ ಹುಲುಗಪ್ಪ ಬಿ.ಆರ್.ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು.</p>.<p>ಪುರಸಭೆ ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಗ್ರೇಡ್-2 ತಹಶೀಲ್ದಾರ್ ಮಲ್ಲೇಶಪ್ಪ, ಪ್ರಾಚಾರ್ಯ ಎಚ್. ರಾಮಕೃಷ್ಣ, ಪುರಸಭೆ ಮುಖ್ಯಾಧಿಕಾರಿ ಹರ್ಷವರ್ಧನ ರೆಡ್ಡಿ, ಉಪನೋಂದಣಾಧಿಕಾರಿ ಕಿರಣ್, ಬಿ.ಆರ್.ಅಂಬೇಡ್ಕರ್ ಸಂಘದ ತಾಲ್ಲೂಕು ಅಧ್ಯಕ್ಷ ಟಿ. ಸಿದ್ದಪ್ಪ, ಗೌರವಾಧ್ಯಕ್ಷ ಎಂ.ರುದ್ರಪ್ಪ, ಬಾಬು ಜಗಜೀನವ್ ರಾಂ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು</strong>: ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ಬಿ.ಆರ್. ಅಂಬೇಡ್ಕರ್ ಸಂಘದ ವತಿಯಿಂದ ಆಚರಿಸಿದ ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಅಂಗವಾಗಿ ಚಿತ್ರ ಮೆರವಣಿಗೆ ಸೋಮವಾರ ಜರುಗಿತು.</p>.<p>ಪಟ್ಟಣದ ದೊಡ್ಡಬಸವೇಶ್ವರ ದೇವಸ್ಥಾನದಿಂದ ಪ್ರಾರಂಭಗೊ0ಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಮಾವೇಶಗೊಂಡಿತು.</p>.<p>ಮಹಿಳೆಯರಿಂದ ಕಳಸ, ಪೂರ್ಣಕುಂಭ, ತಾಸಿರಾಮ್, ರಾಮಡೋಲ್, ಹಗಲು ವೇಶ ಕಲಾವಿದರ ತಂಡ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದ್ದವು.</p>.<p>ವಿವಿಧ ಸಂಘಟನೆಗಳ ಮುಖಂಡರು, ತಹಶೀಲ್ದಾರ್ ಕಚೇರಿ ಮತ್ತು ಪುರಸಭೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ಹೆಜ್ಜೆಹಾಕಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ನರಸಪ್ಪ ತಹಶೀಲ್ದಾರ್ ಮಾತನಾಡಿ, ‘ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಬಿ.ಆರ್.ಅಂಬೇಡ್ಕರ್ ಅವರನ್ನು ಜಾತಿಬೇಧವಿಲ್ಲದೆ ಎಲ್ಲರೂ ಅಪ್ಪಿಕೊಳ್ಳಬೇಕು ಮತ್ತು ಅವರ ವಿಚಾರಧಾರೆಗಳನ್ನು ಒಪ್ಪಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಪುರಸಭೆ ಅಧ್ಯಕ್ಷ ಟಿ. ಶೇಖಣ್ಣ ಮಾತನಾಡಿ, ‘ಬಿ.ಆರ್.ಅಂಬೇಡ್ಕರ್ ಅವರ ಚಿತ್ರಕ್ಕೆ ಪೂಜೆ ಸಲ್ಲಿಸಿದರೆ ಪ್ರಯೋಜನವಿಲ್ಲ. ಅವರ ವಿಚಾರಧಾರೆಗಳನ್ನು ಎಲ್ಲೆಡೆ ಪಸರಿಸುವ ಕೆಲಸ ಮಾಡಬೇಕು’ ಎಂದರು.</p>.<p>ಉಪನ್ಯಾಸಕ ಹುಲುಗಪ್ಪ ಬಿ.ಆರ್.ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು.</p>.<p>ಪುರಸಭೆ ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಗ್ರೇಡ್-2 ತಹಶೀಲ್ದಾರ್ ಮಲ್ಲೇಶಪ್ಪ, ಪ್ರಾಚಾರ್ಯ ಎಚ್. ರಾಮಕೃಷ್ಣ, ಪುರಸಭೆ ಮುಖ್ಯಾಧಿಕಾರಿ ಹರ್ಷವರ್ಧನ ರೆಡ್ಡಿ, ಉಪನೋಂದಣಾಧಿಕಾರಿ ಕಿರಣ್, ಬಿ.ಆರ್.ಅಂಬೇಡ್ಕರ್ ಸಂಘದ ತಾಲ್ಲೂಕು ಅಧ್ಯಕ್ಷ ಟಿ. ಸಿದ್ದಪ್ಪ, ಗೌರವಾಧ್ಯಕ್ಷ ಎಂ.ರುದ್ರಪ್ಪ, ಬಾಬು ಜಗಜೀನವ್ ರಾಂ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>