<p><strong>ಕುರುಗೋಡು</strong>: ‘ಅಂಬೇಡ್ಕರ್ ಅವರನ್ನು ಒಂದು ಜಾತಿಗೆ, ಒಂದು ಕೇರಿಗೆ ಸೀಮಿತಗೊಳಿಸಬಾರದು’ ಎಂದು ವೆಂಕಟಾಪುರದ ಬಸವರಾಜ ಶರಣರು ಹೇಳಿದರು.</p>.<p>ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಶನಿವಾರ ನಡೆದ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ರಾಂ ಜಯಂತಿ ಉದ್ಘಾಟಿಸಿ ಮಾತನಾಡಿದರು.</p>.<p>‘ಅಂಬೇಡ್ಕರ್ ಚಿತ್ರಕ್ಕೆ ಪೂಜೆ ಸಲ್ಲಿಸಿದರೆ ಸಾಲದು ಅವರು ಸೂಚಿಸಿದ ಮಾರ್ಗದಲ್ಲಿ ಸಾಗಿ ಅವರಿಗೆ ಗೌರವ ಸಲ್ಲಿಸಬೇಕು’ ಎಂದರು.</p>.<p>ಚರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್ ಮಾತನಾಡಿ, ‘ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಹಾದಿಯಲ್ಲಿ ನಾವು ಸಾಗಿ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಎಲ್ಲರೂ ಅವರ ತತ್ವ ಮತ್ತು ಆರ್ದಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಬಿ.ಎಂ ಸತೀಶ್ ಬಸವಭೂಷಣಶ್ರೀ ಧರಪ್ಪ ನಾಯಕ ಮಾತನಾಡಿದರು. ಅಪ್ಪು ಕಲಾ ಟ್ರಸ್ಟ್, ಜೈ ಭೀಮ್ ಸ್ನೇಹ ಜೀವಿ ಬಳ್ಳಾರಿ ಈರೇಶ್ ತಂಡದಿಂದ ನೃತ್ಯ ರೂಪಕ ಪ್ರದರ್ಶನವಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೊಳಗುಂದಿ ಲಕ್ಷ್ಮಿ ದ್ಯಾವಣ್ಣ, ಉಪಾಧ್ಯಕ್ಷೆ ರಾಜಮ್ಮ ಹುಲುಗಪ್ಪ, ಟಿ.ಶೇಖಣ್ಣ, ಕೊಡ್ಲೆ ಮಲ್ಲಿಕಾರ್ಜುನ, ಬಿ.ಉಮೇಶ್, ವಿ.ಶೇಖರ್, ರಾರಾವಿ ವೆಂಕಟೇಶ್, ಡೀಸೆಲ್ ಶಶಿ, ಅನ್ವರ್ ಬಾಷ, ವಿ.ಹನುಮೇಶ್, ಆಲಂ ಬಾಷ ಮತ್ತು ಹಳ್ಳಿ ಮರದ ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು</strong>: ‘ಅಂಬೇಡ್ಕರ್ ಅವರನ್ನು ಒಂದು ಜಾತಿಗೆ, ಒಂದು ಕೇರಿಗೆ ಸೀಮಿತಗೊಳಿಸಬಾರದು’ ಎಂದು ವೆಂಕಟಾಪುರದ ಬಸವರಾಜ ಶರಣರು ಹೇಳಿದರು.</p>.<p>ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಶನಿವಾರ ನಡೆದ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ರಾಂ ಜಯಂತಿ ಉದ್ಘಾಟಿಸಿ ಮಾತನಾಡಿದರು.</p>.<p>‘ಅಂಬೇಡ್ಕರ್ ಚಿತ್ರಕ್ಕೆ ಪೂಜೆ ಸಲ್ಲಿಸಿದರೆ ಸಾಲದು ಅವರು ಸೂಚಿಸಿದ ಮಾರ್ಗದಲ್ಲಿ ಸಾಗಿ ಅವರಿಗೆ ಗೌರವ ಸಲ್ಲಿಸಬೇಕು’ ಎಂದರು.</p>.<p>ಚರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್ ಮಾತನಾಡಿ, ‘ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಹಾದಿಯಲ್ಲಿ ನಾವು ಸಾಗಿ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಎಲ್ಲರೂ ಅವರ ತತ್ವ ಮತ್ತು ಆರ್ದಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಬಿ.ಎಂ ಸತೀಶ್ ಬಸವಭೂಷಣಶ್ರೀ ಧರಪ್ಪ ನಾಯಕ ಮಾತನಾಡಿದರು. ಅಪ್ಪು ಕಲಾ ಟ್ರಸ್ಟ್, ಜೈ ಭೀಮ್ ಸ್ನೇಹ ಜೀವಿ ಬಳ್ಳಾರಿ ಈರೇಶ್ ತಂಡದಿಂದ ನೃತ್ಯ ರೂಪಕ ಪ್ರದರ್ಶನವಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೊಳಗುಂದಿ ಲಕ್ಷ್ಮಿ ದ್ಯಾವಣ್ಣ, ಉಪಾಧ್ಯಕ್ಷೆ ರಾಜಮ್ಮ ಹುಲುಗಪ್ಪ, ಟಿ.ಶೇಖಣ್ಣ, ಕೊಡ್ಲೆ ಮಲ್ಲಿಕಾರ್ಜುನ, ಬಿ.ಉಮೇಶ್, ವಿ.ಶೇಖರ್, ರಾರಾವಿ ವೆಂಕಟೇಶ್, ಡೀಸೆಲ್ ಶಶಿ, ಅನ್ವರ್ ಬಾಷ, ವಿ.ಹನುಮೇಶ್, ಆಲಂ ಬಾಷ ಮತ್ತು ಹಳ್ಳಿ ಮರದ ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>