ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದ ತೀರ್ಮಾನ ಪುನರ್ ಪರಿಶೀಲಿಸಲು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಜಿಂದಾಲ್ಗೆ ಭೂಮಿ ಮಾರಾಟದ ಬದಲು ಷರತ್ತುಗಳನ್ನು ವಿಧಿಸಿ, ಗುತ್ತಿಗೆ ನೀಡಬಹುದು ಎಂದು ತಿಳಿಸಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಮತ್ತೆ ಚರ್ಚೆಗೆ ಬರಲಿದೆ. ಆಗ ನನ್ನ ಅಭಿಪ್ರಾಯವನ್ನು ತಿಳಿಸಲಿದ್ದೇನೆ’ ಎಂದು ಹೇಳಿದರು.