ದೇವಸ್ಥಾನಗಳು ಪ್ರಾಚ್ಯವಸ್ತು ಮತ್ತು ಪುರಾತತ್ವ ಇಲಾಖೆಗೆ ಒಳಪಟ್ಟಿದ್ದರೂ ಮೂಲಸೌಕರ್ಯವಿಲ್ಲದೆ ಹಲವಾರು ಪ್ರವಾಸಿಗರಿಂದ ದೂರವೇ ಉಳಿದಿವೆ. ಕೆಲ ವರ್ಷಗಳ ಹಿಂದೆ ನಿಧಿ ಆಸೆಗೆ ದುಷ್ಕರ್ಮಿಗಳು ತ್ರಿಕೂಟೇಶ್ವರ ದೇವಸ್ಥಾನದಲ್ಲಿನ ಶಿವಲಿಂಗವೊಂದನ್ನು ಭಗ್ನಗೊಳಿಸಿದ್ದರು. ಈ ದೇವಸ್ಥಾನಗಳ ಕುರಿತು ಪ್ರವಾಸಿಗರಿಗೆ ಮಾಹಿತಿ ನೀಡುವ ಫಲಕವಾಗಲೀ, ಮಾಹಿತಿ ಕೇಂದ್ರವಾಗಲೀ ಇಲ್ಲ. ಸರಿಯಾದ ರಸ್ತೆ ಇಲ್ಲದ ಕಾರಣ ಹೆಚ್ಚು ಪ್ರವಾಸಿಗಳು ಇಲ್ಲಿಗೆ ಭೇಟಿ ನೀಡುತ್ತಿಲ್ಲ ಎಂದು ಗ್ರಾಮಸ್ಥರು ತಿಳಿಸಿದರು.