<p><strong>ಕಂಪ್ಲಿ:</strong> ತಾಲ್ಲೂಕಿನ ಜವುಕು ಗ್ರಾಮದ ಆರಾಧ್ಯದೈವ ಆಂಜನೇಯಸ್ವಾಮಿ ಮಹಾರಥೋತ್ಸವ ಸೋಮವಾರ ಸಂಜೆ ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ಜರುಗಿತು.</p>.<p>ರಥೋತ್ಸವ ಪ್ರಯುಕ್ತ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಅಗ್ನಿಕುಂಡೋತ್ಸವದಲ್ಲಿ ಅಗ್ನಿ ತುಳಿದ ಪೂಜಾರಿ ಸಣ್ಣ ಬಸವರಾಜ ನುಡಿದ ಭವಿಷ್ಯವಾಣಿಯನ್ನು ನೆರೆದಿದ್ದ ಭಕ್ತರು ಕಾತರದಿಂದ ಆಲಿಸಿದರು.</p>.<p>‘ಈ ಬಾರಿ ಮಳೆ, ಬೆಳೆ ಉತ್ತಮವಾಗಿರುತ್ತದೆ. ರೋಗರುಜಿನ ಇಲ್ಲದೇ ಜನ ಸುಖವಾಗಿರುತ್ತಾರೆ’ ಎಂದು ಭವಿಷ್ಯ ನುಡಿದು, ‘ಮುಂದಿನ ಐದು ಅಮಾವಾಸ್ಯೆ ಗ್ರಾಮ ದೇವತೆ ಸುಂಕ್ಲಮ್ಮ, ಮಾರೆಮ್ಮದೇವಿಗೆ ಗ್ರಾಮಸ್ಥರು ಎಡೆ ಕೊಡಬೇಕು’ ಎಂದು ಸೂಚಿಸಿದರು.</p>.<p>ರಥೋತ್ಸವದಲ್ಲಿ ಶಾಸಕ ಜೆ.ಎನ್. ಗಣೇಶ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಸೇರಿದಂತೆ ಸುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ತಾಲ್ಲೂಕಿನ ಜವುಕು ಗ್ರಾಮದ ಆರಾಧ್ಯದೈವ ಆಂಜನೇಯಸ್ವಾಮಿ ಮಹಾರಥೋತ್ಸವ ಸೋಮವಾರ ಸಂಜೆ ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ಜರುಗಿತು.</p>.<p>ರಥೋತ್ಸವ ಪ್ರಯುಕ್ತ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಅಗ್ನಿಕುಂಡೋತ್ಸವದಲ್ಲಿ ಅಗ್ನಿ ತುಳಿದ ಪೂಜಾರಿ ಸಣ್ಣ ಬಸವರಾಜ ನುಡಿದ ಭವಿಷ್ಯವಾಣಿಯನ್ನು ನೆರೆದಿದ್ದ ಭಕ್ತರು ಕಾತರದಿಂದ ಆಲಿಸಿದರು.</p>.<p>‘ಈ ಬಾರಿ ಮಳೆ, ಬೆಳೆ ಉತ್ತಮವಾಗಿರುತ್ತದೆ. ರೋಗರುಜಿನ ಇಲ್ಲದೇ ಜನ ಸುಖವಾಗಿರುತ್ತಾರೆ’ ಎಂದು ಭವಿಷ್ಯ ನುಡಿದು, ‘ಮುಂದಿನ ಐದು ಅಮಾವಾಸ್ಯೆ ಗ್ರಾಮ ದೇವತೆ ಸುಂಕ್ಲಮ್ಮ, ಮಾರೆಮ್ಮದೇವಿಗೆ ಗ್ರಾಮಸ್ಥರು ಎಡೆ ಕೊಡಬೇಕು’ ಎಂದು ಸೂಚಿಸಿದರು.</p>.<p>ರಥೋತ್ಸವದಲ್ಲಿ ಶಾಸಕ ಜೆ.ಎನ್. ಗಣೇಶ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಸೇರಿದಂತೆ ಸುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>