<p><strong>ಕೊಟ್ಟೂರು</strong>: ಪಟ್ಟಣದಲ್ಲಿ ಇತ್ತೀಚಿಗೆ ನಕಲಿ ಪತ್ರಕರ್ತರ ಹಾವಳಿ ಮಿತಿ ಮೀರಿದ್ದು, ಅವರನ್ನು ಕೂಡಲೇ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕಾರ್ಯನಿರತ ಪತ್ರಕರ್ತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಜಿ.ಕೆ. ಅಮರೀಶ್ ಮತ್ತು ಪಿಎಸ್ಐ ಗೀತಾಂಜಲಿ ಶಿಂಧೆ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>ಮನವಿ ಸಲ್ಲಿಸಿ ಮಾತನಾಡಿದ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದೇವರಮನಿ ಸುರೇಶ್, ‘ನಕಲಿ ಪತ್ರಕರ್ತರು ಸರ್ಕಾರಿ ಇಲಾಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ನೈಜ ಪತ್ರಕರ್ತರ ಗೌರವಕ್ಕೆ ಧಕ್ಕೆಯಾಗುತ್ತಿದೆ’ ಎಂದರು.</p>.<p>‘ವಾರ್ತೆ ಮತ್ತು ಪ್ರಚಾರ ಇಲಾಖೆಯಲ್ಲಿ ನೋಂದಣಿಯಾಗದ ಪತ್ರಿಕೆಯ ಪತ್ರಕರ್ತರನ್ನು ಪರಿಶೀಲಿಸಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಅನಧಿಕೃತವಾಗಿ ವಾಹನಗಳ ಮೇಲೆ ಪ್ರೆಸ್ ಎಂದು ನಮೂದಿಸಿ ಓಡಾಡುತ್ತಿರುವುದು ಕಂಡು ಬಂದಿದ್ದು, ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಘದ ಪದಾಧಿಕಾರಿಗಳಾದ ಉಜ್ಜಿನಿ ರುದ್ರಪ್ಪ, ಜಿ.ಸೋಮಶೇಖರ, ಎಸ್.ಎಂ.ಗುರುಪ್ರಸಾದ್, ಬದ್ದಿ ಮಂಜುನಾಥ್, ಎಚ್.ನಾಗರಾಜ್, ಚಿಗಟೇರಿ ಕೊಟ್ರೇಶ್, ಬಂದಾತರ ಪ್ರಕಾಶ, ರವಿಕುಮಾರ, ಹ್ಯಾಳ್ಯಾ ಕೊಟ್ರೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ಪಟ್ಟಣದಲ್ಲಿ ಇತ್ತೀಚಿಗೆ ನಕಲಿ ಪತ್ರಕರ್ತರ ಹಾವಳಿ ಮಿತಿ ಮೀರಿದ್ದು, ಅವರನ್ನು ಕೂಡಲೇ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕಾರ್ಯನಿರತ ಪತ್ರಕರ್ತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಜಿ.ಕೆ. ಅಮರೀಶ್ ಮತ್ತು ಪಿಎಸ್ಐ ಗೀತಾಂಜಲಿ ಶಿಂಧೆ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>ಮನವಿ ಸಲ್ಲಿಸಿ ಮಾತನಾಡಿದ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದೇವರಮನಿ ಸುರೇಶ್, ‘ನಕಲಿ ಪತ್ರಕರ್ತರು ಸರ್ಕಾರಿ ಇಲಾಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ನೈಜ ಪತ್ರಕರ್ತರ ಗೌರವಕ್ಕೆ ಧಕ್ಕೆಯಾಗುತ್ತಿದೆ’ ಎಂದರು.</p>.<p>‘ವಾರ್ತೆ ಮತ್ತು ಪ್ರಚಾರ ಇಲಾಖೆಯಲ್ಲಿ ನೋಂದಣಿಯಾಗದ ಪತ್ರಿಕೆಯ ಪತ್ರಕರ್ತರನ್ನು ಪರಿಶೀಲಿಸಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಅನಧಿಕೃತವಾಗಿ ವಾಹನಗಳ ಮೇಲೆ ಪ್ರೆಸ್ ಎಂದು ನಮೂದಿಸಿ ಓಡಾಡುತ್ತಿರುವುದು ಕಂಡು ಬಂದಿದ್ದು, ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಘದ ಪದಾಧಿಕಾರಿಗಳಾದ ಉಜ್ಜಿನಿ ರುದ್ರಪ್ಪ, ಜಿ.ಸೋಮಶೇಖರ, ಎಸ್.ಎಂ.ಗುರುಪ್ರಸಾದ್, ಬದ್ದಿ ಮಂಜುನಾಥ್, ಎಚ್.ನಾಗರಾಜ್, ಚಿಗಟೇರಿ ಕೊಟ್ರೇಶ್, ಬಂದಾತರ ಪ್ರಕಾಶ, ರವಿಕುಮಾರ, ಹ್ಯಾಳ್ಯಾ ಕೊಟ್ರೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>