<p><strong>ಬಳ್ಳಾರಿ</strong>: ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮೇ 2ರಿಂದ 2025ರ ಫೆ.28ರವರೆಗೆ ಒಟ್ಟು 24 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.</p>.<p>ಅಭ್ಯರ್ಥಿಗಳು ಕನಿಷ್ಠ ಕನ್ನಡ ವಿಷಯಗಳೊಂದಿಗೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬಳ್ಳಾರಿ, ಕಚೇರಿಯಲ್ಲಿ ಪಡೆಯಬಹುದು ಅಥವಾ ಇಲಾಖಾ ವೆಬ್ ಸೈಟ್ https://horticulturedir. karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. </p>.<p>ಅರ್ಜಿ ಸಲ್ಲಿಸಲು ಏ.1 ಕೊನೆ ದಿನ. ಏ.6ರಂದು ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂ.08392-278588ಗೆ ಸಂಪರ್ಕಿಸಬಹುದು.</p>.<p><strong>ಅಂತಾರಾಷ್ಟ್ರೀಯ ಸಮ್ಮೇಳನ</strong></p>.<p>ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ವತಿಯಿಂದ ‘ಸಮಾಜ ವಿಜ್ಞಾನದಲ್ಲಿ ಬಹುಶಿಸ್ತೀಯ ಪ್ರಚಲಿತ ಸಂಶೋಧನೆಗಳು’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಫೆ.28 ಮತ್ತು 29ರಂದು ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.</p>.<p>ಫೆ.28ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ</strong></p>.<p>ಬಳ್ಳಾರಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ 2024ರ ಜೂನ್ 1ರಂದು ನಡೆಯಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳು 13 ವರ್ಷದೊಳಗಿರಬೇಕು. ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಸರ್ವ ರೀತಿಯ ವಿದ್ಯಾಭ್ಯಾಸ, ತರಬೇತಿ ನೀಡುವುದಾಗಿದೆ.</p>.<p>ಹೆಚ್ಚಿನ ಮಾಹಿತಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಜಂಟಿ ನಿರ್ದೇಶಕರು ಅಥವಾ ದೂ.0836-2440176 ಸಂಪರ್ಕಿಸಬಹುದು ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮೇ 2ರಿಂದ 2025ರ ಫೆ.28ರವರೆಗೆ ಒಟ್ಟು 24 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.</p>.<p>ಅಭ್ಯರ್ಥಿಗಳು ಕನಿಷ್ಠ ಕನ್ನಡ ವಿಷಯಗಳೊಂದಿಗೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬಳ್ಳಾರಿ, ಕಚೇರಿಯಲ್ಲಿ ಪಡೆಯಬಹುದು ಅಥವಾ ಇಲಾಖಾ ವೆಬ್ ಸೈಟ್ https://horticulturedir. karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. </p>.<p>ಅರ್ಜಿ ಸಲ್ಲಿಸಲು ಏ.1 ಕೊನೆ ದಿನ. ಏ.6ರಂದು ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂ.08392-278588ಗೆ ಸಂಪರ್ಕಿಸಬಹುದು.</p>.<p><strong>ಅಂತಾರಾಷ್ಟ್ರೀಯ ಸಮ್ಮೇಳನ</strong></p>.<p>ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ವತಿಯಿಂದ ‘ಸಮಾಜ ವಿಜ್ಞಾನದಲ್ಲಿ ಬಹುಶಿಸ್ತೀಯ ಪ್ರಚಲಿತ ಸಂಶೋಧನೆಗಳು’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಫೆ.28 ಮತ್ತು 29ರಂದು ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.</p>.<p>ಫೆ.28ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ</strong></p>.<p>ಬಳ್ಳಾರಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ 2024ರ ಜೂನ್ 1ರಂದು ನಡೆಯಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳು 13 ವರ್ಷದೊಳಗಿರಬೇಕು. ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಸರ್ವ ರೀತಿಯ ವಿದ್ಯಾಭ್ಯಾಸ, ತರಬೇತಿ ನೀಡುವುದಾಗಿದೆ.</p>.<p>ಹೆಚ್ಚಿನ ಮಾಹಿತಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಜಂಟಿ ನಿರ್ದೇಶಕರು ಅಥವಾ ದೂ.0836-2440176 ಸಂಪರ್ಕಿಸಬಹುದು ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>