<p><strong>ಬಳ್ಳಾರಿ:</strong> ಆಶಾ ಕಾರ್ಯಕರ್ತರಿಗೆ ಸರ್ಕಾರ ಮಾತು ಕೊಟ್ಟಂತೆ ಮಾಸಿಕ ₹10 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಮತ್ತು ಎಐಯುಟಿಯುಸಿ ಸದಸ್ಯರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು. </p>.<p>ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಘಟಕದ ಉಪಾಧ್ಯಕ್ಷೆ ಎ.ಶಾಂತಾ, ‘ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಕಾನೂನುಗಳನ್ನು ಜಾರಿಗೆ ತರಲು ಹೊರಟಿಸಿದೆ. ಅವುಗಳನ್ನು ಹಿಂಪಡೆಯಬೇಕು. ಮಹಿಳಾ ಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಎಲ್ಲ ವಿಷಯಗಳೊಂದಿಗೆ ಜುಲೈ 9ರಂದು ಸಾರ್ವತ್ರಿಕ ಮುಷ್ಕರ ನಡೆಸಲಿದ್ದೇವೆ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳಲ್ಲಿ ಹೋರಾಟಗಳು ನಡೆದಿವೆ’ ಎಂದರು. </p>.<p>‘ಆಶಾ ಕಾರ್ಯಕರ್ತರಿಗೆ ₹10 ಸಾವಿರ ವೇತನ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಆದರೆ, ಆದೇಶ ಇನ್ನೂ ಹೊರಬಿದ್ದಿಲ್ಲ. ಆಶಾ ಕಾರ್ಯಕರ್ತರ ಗೌರವಧನವನ್ನು ತಿಂಗಳಿಗೆ ₹1,500ರಷ್ಟು ಹೆಚ್ಚಿಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಹೇಳಿದ್ದರು. ಅದನ್ನೂ ಜಾರಿಗೆ ತರಬೇಕು ಎಂದು ಆಗ್ರಹಿಸುತ್ತಿದ್ದೇವೆ’ ಎಂದು ತಿಳಿಸಿದರು. </p>.<p>‘ಕಾರ್ಮಿಕರ, ಮಹಿಳೆಯರ, ರೈತರ ಹಿತವನ್ನು ಸರ್ಕಾರಗಳು ಕಾಯಬೇಕು. 12 ಗಂಟೆ ದುಡಿಮೆಯ ಅವಧಿಯ ಬದಲು 8 ಗಂಟೆಗಳ ದುಡಿಮೆಯ ಅವಧಿಯನ್ನು ಪಾಲಿಸಬೇಕು’ ಎಂದು ಒತ್ತಾಯಿಸಿದರು. </p>.<p>ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು, ಎಐಯುಟಿಯುಸಿ ಸಂಘಟನೆಯ ಕಾರ್ಯಕರ್ತರು ಹೋರಾಟದಲ್ಲಿದ್ದರು. ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಆಶಾ ಕಾರ್ಯಕರ್ತರಿಗೆ ಸರ್ಕಾರ ಮಾತು ಕೊಟ್ಟಂತೆ ಮಾಸಿಕ ₹10 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಮತ್ತು ಎಐಯುಟಿಯುಸಿ ಸದಸ್ಯರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು. </p>.<p>ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಘಟಕದ ಉಪಾಧ್ಯಕ್ಷೆ ಎ.ಶಾಂತಾ, ‘ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಕಾನೂನುಗಳನ್ನು ಜಾರಿಗೆ ತರಲು ಹೊರಟಿಸಿದೆ. ಅವುಗಳನ್ನು ಹಿಂಪಡೆಯಬೇಕು. ಮಹಿಳಾ ಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಎಲ್ಲ ವಿಷಯಗಳೊಂದಿಗೆ ಜುಲೈ 9ರಂದು ಸಾರ್ವತ್ರಿಕ ಮುಷ್ಕರ ನಡೆಸಲಿದ್ದೇವೆ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳಲ್ಲಿ ಹೋರಾಟಗಳು ನಡೆದಿವೆ’ ಎಂದರು. </p>.<p>‘ಆಶಾ ಕಾರ್ಯಕರ್ತರಿಗೆ ₹10 ಸಾವಿರ ವೇತನ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಆದರೆ, ಆದೇಶ ಇನ್ನೂ ಹೊರಬಿದ್ದಿಲ್ಲ. ಆಶಾ ಕಾರ್ಯಕರ್ತರ ಗೌರವಧನವನ್ನು ತಿಂಗಳಿಗೆ ₹1,500ರಷ್ಟು ಹೆಚ್ಚಿಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಹೇಳಿದ್ದರು. ಅದನ್ನೂ ಜಾರಿಗೆ ತರಬೇಕು ಎಂದು ಆಗ್ರಹಿಸುತ್ತಿದ್ದೇವೆ’ ಎಂದು ತಿಳಿಸಿದರು. </p>.<p>‘ಕಾರ್ಮಿಕರ, ಮಹಿಳೆಯರ, ರೈತರ ಹಿತವನ್ನು ಸರ್ಕಾರಗಳು ಕಾಯಬೇಕು. 12 ಗಂಟೆ ದುಡಿಮೆಯ ಅವಧಿಯ ಬದಲು 8 ಗಂಟೆಗಳ ದುಡಿಮೆಯ ಅವಧಿಯನ್ನು ಪಾಲಿಸಬೇಕು’ ಎಂದು ಒತ್ತಾಯಿಸಿದರು. </p>.<p>ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು, ಎಐಯುಟಿಯುಸಿ ಸಂಘಟನೆಯ ಕಾರ್ಯಕರ್ತರು ಹೋರಾಟದಲ್ಲಿದ್ದರು. ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>