ಘಟನೆಯಲ್ಲಿ ತಿಪ್ಪೇಸ್ವಾಮಿ (38) ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಕೋಮಾಕ್ಕೆ ಜಾರಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಘು, ಅನಿಲ್ ಕುಮಾರ್, ಮುತ್ತು, ಭಾಸ್ಕರ್, ರಾಜಶೇಖರ್, ಬಾಲು, ರಾಜು ಎಂಬುವವರ ಬಂಧನವಾಗಿದೆ. ಇನ್ನು ನಾಲ್ಕು ಜನರು ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.