<p><strong>ಬಳ್ಳಾರಿ</strong>: ‘ಶ್ರೀರಾಮುಲು ಅವರನ್ನು ಕೊಲ್ಲುವ ಉದ್ದೇಶದಿಂದ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಜ.1ರಂದು ಬ್ಯಾನರ್ ವಿಚಾರ್ ಮುಂದಿಟ್ಟುಕೊಂಡು ದಾಳಿ ಮಾಡಿದ್ದ’ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು. </p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು, ಶ್ರೀರಾಮುಲು ಅವರನ್ನು ಸತೀಶ್ ರೆಡ್ಡಿ ನಿಂದಿಸಿ, ಹಲ್ಲೆಗೆ ಸೂಚಿಸಿದ್ದಾರೆ ಎನ್ನಲಾದ ವಿಡಿಯೊ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ಬ್ಯಾನರ್ ಅಳವಡಿಕೆ ಮಾಡುವ ವೇಳೆ ಶ್ರೀರಾಮುಲು ಅವರ ಜಾತಿ ಉಲ್ಲೇಖಿಸಿ ಸತೀಶ್ ರೆಡ್ಡಿ ತೆಲುಗಿನಲ್ಲಿ ನಿಂದಿಸಿ, ಹಲ್ಲೆ ಮಾಡಲು ಬೆಂಬಲಿಗರಿಗೆ ಸೂಚಿಸಿದ್ದಾರೆ. ‘ಈಗ ಬಿಟ್ಟರೆ ಮುಂದೆ ಸಿಗುವುದಿಲ್ಲ, ಹೊಡೆಯಿರಿ’ ಎಂದಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂಬುದು ಈ ಮೂಲಕ ಸಾಬೀತಾಗಿದೆ’ ಎಂದರು. </p>.<p>‘ಘರ್ಷಣೆ ಪ್ರಕರಣದಲ್ಲಿ ಸ್ಥಳ ಮಹಜರು, ಕೆಲ ಬುಲೆಟ್ಗಳ ವಶ ಬಿಟ್ಟರೆ ಬೇರೇನೂ ಆಗಿಲ್ಲ. ಎಎಸ್ಪಿ ರವಿಕುಮಾರ್, ಡಿವೈಎಸ್ಪಿ ಚಂದ್ರಕಾಂತ ನಂದಾರೆಡ್ಡಿ ಅವರನ್ನು ಈ ಪ್ರಕರಣದಲ್ಲಿ ಸೇರಿಸಿಲ್ಲ. ಆದ್ದರಿಂದ ನ್ಯಾಯಾಲಯದಲ್ಲಿ ರಿಟ್ ಸಲ್ಲಿಸಲು ತೀರ್ಮಾನಿಸಲಾಗಿದೆ’ ಎಂದು ಜನಾರ್ದನ ರೆಡ್ಡಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಶ್ರೀರಾಮುಲು ಅವರನ್ನು ಕೊಲ್ಲುವ ಉದ್ದೇಶದಿಂದ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಜ.1ರಂದು ಬ್ಯಾನರ್ ವಿಚಾರ್ ಮುಂದಿಟ್ಟುಕೊಂಡು ದಾಳಿ ಮಾಡಿದ್ದ’ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು. </p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು, ಶ್ರೀರಾಮುಲು ಅವರನ್ನು ಸತೀಶ್ ರೆಡ್ಡಿ ನಿಂದಿಸಿ, ಹಲ್ಲೆಗೆ ಸೂಚಿಸಿದ್ದಾರೆ ಎನ್ನಲಾದ ವಿಡಿಯೊ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ಬ್ಯಾನರ್ ಅಳವಡಿಕೆ ಮಾಡುವ ವೇಳೆ ಶ್ರೀರಾಮುಲು ಅವರ ಜಾತಿ ಉಲ್ಲೇಖಿಸಿ ಸತೀಶ್ ರೆಡ್ಡಿ ತೆಲುಗಿನಲ್ಲಿ ನಿಂದಿಸಿ, ಹಲ್ಲೆ ಮಾಡಲು ಬೆಂಬಲಿಗರಿಗೆ ಸೂಚಿಸಿದ್ದಾರೆ. ‘ಈಗ ಬಿಟ್ಟರೆ ಮುಂದೆ ಸಿಗುವುದಿಲ್ಲ, ಹೊಡೆಯಿರಿ’ ಎಂದಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂಬುದು ಈ ಮೂಲಕ ಸಾಬೀತಾಗಿದೆ’ ಎಂದರು. </p>.<p>‘ಘರ್ಷಣೆ ಪ್ರಕರಣದಲ್ಲಿ ಸ್ಥಳ ಮಹಜರು, ಕೆಲ ಬುಲೆಟ್ಗಳ ವಶ ಬಿಟ್ಟರೆ ಬೇರೇನೂ ಆಗಿಲ್ಲ. ಎಎಸ್ಪಿ ರವಿಕುಮಾರ್, ಡಿವೈಎಸ್ಪಿ ಚಂದ್ರಕಾಂತ ನಂದಾರೆಡ್ಡಿ ಅವರನ್ನು ಈ ಪ್ರಕರಣದಲ್ಲಿ ಸೇರಿಸಿಲ್ಲ. ಆದ್ದರಿಂದ ನ್ಯಾಯಾಲಯದಲ್ಲಿ ರಿಟ್ ಸಲ್ಲಿಸಲು ತೀರ್ಮಾನಿಸಲಾಗಿದೆ’ ಎಂದು ಜನಾರ್ದನ ರೆಡ್ಡಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>