<p><strong>ಕಂಪ್ಲಿ</strong>: ‘ಇಲ್ಲಿನ ಸಕ್ಕರೆ ಕಾರ್ಖಾನೆ ಬೆನಾಮಿ ಹೆಸರಿಗೆ ಹಸ್ತಾಂತರವಾಗಿದ್ದು, ಮರಳಿ ಪಡೆಯುವ ಎಲ್ಲ ಪ್ರಯತ್ನಗಳನ್ನು ಸರ್ಕಾರ ಮುಂದುವರಿಸಿದೆ’ ಎಂದು ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.</p>.<p>ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶನಿವಾರ ನಡೆದ ಅಧ್ಯಕ್ಷ, ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಸಕ್ಕರೆ ಕಾರ್ಖಾನೆ ಮತ್ತು ಭೂಮಿಯು ರೈತರ ಆಸ್ತಿಯಾಗಿದ್ದು, ಹೋರಾಟ ಮಾಡಿಯಾದರು ಕಾರ್ಖಾನೆ ಪುನರಾರಂಭಕ್ಕೆ ಪ್ರಯತ್ನಿಸಲಾಗುತ್ತದೆ’ ಎಂದು ಭರವಸೆ ನೀಡಿದರು.</p>.<p>‘ಕಂಪ್ಲಿ ವಿಧಾನಸಭಾಕ್ಷೇತ್ರ ಎಸ್.ಟಿ. ಮೀಸಲು ಕ್ಷೇತ್ರವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸ್ಪರ್ಧಿಸಲು ಅವಕಾಶ ಮಾಡಿಕೊಡುತ್ತೇನೆ. ಗೆಲುವಿಗೂ ಶ್ರಮಿಸುತ್ತೇನೆ. ರೈತರ ವಿರುದ್ಧದ ಎಲ್ಲ ಪ್ರಕರಣಗಳನ್ನು ಕೈಬಿಡುವಂತೆ ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಲಾಗಿದೆ’ ಎಂದರು.</p>.<p>ಎಪಿಎಂಸಿ ಅಧ್ಯಕ್ಷ ಎನ್. ಹಬೀಬ್ ರೆಹಮಾನ್ ಮಾತನಾಡಿ, ‘ಶಾಸಕರ ಸಹಕಾರದಿಂದ ಈಗಾಗಲೇ ₹2.50 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಎಪಿಎಂಸಿಯಲ್ಲಿ ನಡೆಯುತ್ತಿವೆ. ಗ್ರಾಮೀಣ ಮಾರುಕಟ್ಟೆ, ಉಪ ಮಾರುಕಟ್ಟೆ ಸ್ಥಾಪನೆಗೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಇಸ್ಲಾಂ ಧರ್ಮಗುರು ಸೈಯ್ಯದ್ ಷಾಹ್ ನೂರ್ಸಾಹೇಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಎಪಿಎಂಸಿ ಉಪಾಧ್ಯಕ್ಷ ಶರಣಬಸವ, ಸದಸ್ಯರಾದ ಗೌಡ್ರು ಅಂಜಿನಪ್ಪ, ಜಿ. ದೊಡ್ಡ ಯರಿಸ್ವಾಮಿ, ಪಿ. ಪಂಪಾಪತಿ, ಕೆ. ಖಾಸಿಂಸಾಬ್, ಚನ್ನಬಸಪ್ಪ, ಎಚ್. ತಿಪ್ಪಯ್ಯ, ಯಲ್ಲಮ್ಮ, ಮುಖಂಡಕೆ.ಎಂ. ಹೇಮಯ್ಯಸ್ವಾಮಿ, ಪಿ. ಮೂಕಯ್ಯಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ‘ಇಲ್ಲಿನ ಸಕ್ಕರೆ ಕಾರ್ಖಾನೆ ಬೆನಾಮಿ ಹೆಸರಿಗೆ ಹಸ್ತಾಂತರವಾಗಿದ್ದು, ಮರಳಿ ಪಡೆಯುವ ಎಲ್ಲ ಪ್ರಯತ್ನಗಳನ್ನು ಸರ್ಕಾರ ಮುಂದುವರಿಸಿದೆ’ ಎಂದು ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.</p>.<p>ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶನಿವಾರ ನಡೆದ ಅಧ್ಯಕ್ಷ, ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಸಕ್ಕರೆ ಕಾರ್ಖಾನೆ ಮತ್ತು ಭೂಮಿಯು ರೈತರ ಆಸ್ತಿಯಾಗಿದ್ದು, ಹೋರಾಟ ಮಾಡಿಯಾದರು ಕಾರ್ಖಾನೆ ಪುನರಾರಂಭಕ್ಕೆ ಪ್ರಯತ್ನಿಸಲಾಗುತ್ತದೆ’ ಎಂದು ಭರವಸೆ ನೀಡಿದರು.</p>.<p>‘ಕಂಪ್ಲಿ ವಿಧಾನಸಭಾಕ್ಷೇತ್ರ ಎಸ್.ಟಿ. ಮೀಸಲು ಕ್ಷೇತ್ರವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸ್ಪರ್ಧಿಸಲು ಅವಕಾಶ ಮಾಡಿಕೊಡುತ್ತೇನೆ. ಗೆಲುವಿಗೂ ಶ್ರಮಿಸುತ್ತೇನೆ. ರೈತರ ವಿರುದ್ಧದ ಎಲ್ಲ ಪ್ರಕರಣಗಳನ್ನು ಕೈಬಿಡುವಂತೆ ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಲಾಗಿದೆ’ ಎಂದರು.</p>.<p>ಎಪಿಎಂಸಿ ಅಧ್ಯಕ್ಷ ಎನ್. ಹಬೀಬ್ ರೆಹಮಾನ್ ಮಾತನಾಡಿ, ‘ಶಾಸಕರ ಸಹಕಾರದಿಂದ ಈಗಾಗಲೇ ₹2.50 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಎಪಿಎಂಸಿಯಲ್ಲಿ ನಡೆಯುತ್ತಿವೆ. ಗ್ರಾಮೀಣ ಮಾರುಕಟ್ಟೆ, ಉಪ ಮಾರುಕಟ್ಟೆ ಸ್ಥಾಪನೆಗೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಇಸ್ಲಾಂ ಧರ್ಮಗುರು ಸೈಯ್ಯದ್ ಷಾಹ್ ನೂರ್ಸಾಹೇಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಎಪಿಎಂಸಿ ಉಪಾಧ್ಯಕ್ಷ ಶರಣಬಸವ, ಸದಸ್ಯರಾದ ಗೌಡ್ರು ಅಂಜಿನಪ್ಪ, ಜಿ. ದೊಡ್ಡ ಯರಿಸ್ವಾಮಿ, ಪಿ. ಪಂಪಾಪತಿ, ಕೆ. ಖಾಸಿಂಸಾಬ್, ಚನ್ನಬಸಪ್ಪ, ಎಚ್. ತಿಪ್ಪಯ್ಯ, ಯಲ್ಲಮ್ಮ, ಮುಖಂಡಕೆ.ಎಂ. ಹೇಮಯ್ಯಸ್ವಾಮಿ, ಪಿ. ಮೂಕಯ್ಯಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>