<figcaption>""</figcaption>.<p><strong>ಹೊಸಪೇಟೆ: </strong>ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮ ಮಂದಿರದ ಶಿಲಾನ್ಯಾಸದ ಪ್ರಯುಕ್ತ ರಾಮನ ಭಕ್ತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ಇಲ್ಲಿನ ಹಂಪಿಯಲ್ಲಿ ಹಮ್ಮಿಕೊಂಡಿರುವ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.</p>.<p>ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನ, ಕೋದಂಡರಾಮ ದೇವಸ್ಥಾನ, ಉದ್ದಾನ ವೀರಭದ್ರೇಶ್ವರ ದೇವಸ್ಥಾನ, ಚಕ್ರತೀರ್ಥದ ರಾಮ–ಲಕ್ಷ್ಮಣ ದೇವಸ್ಥಾನ, ಹಂಪಿಗೆ ಹೊಂದಿಕೊಂಡಿರುವ ಅಂಜನಾದ್ರಿ ಬೆಟ್ಟದಲ್ಲಿ ಹೋಮ, ಹವನ, ಪೂಜೆ ಹಾಗೂ ವಿಶೇಷ ಪ್ರಾರ್ಥನೆಗಳು ಜರುಗುತ್ತಿವೆ.</p>.<p>ಸ್ಥಳೀಯರು ಸೇರಿದಂತೆ ಅನ್ಯ ಜಿಲ್ಲೆಯವರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಶ್ರೀರಾಮ ಸೇನೆ ಕಾರ್ಯಕರ್ತರೂ ಇದ್ದಾರೆ. ಜಿಲ್ಲಾ ಬಿಜೆಪಿಯಿಂದ ನಗರದ ಎಲ್ಲ ವಾರ್ಡ್ಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೂತ್ ಮಟ್ಟದ ಕಾರ್ಯಕರ್ತರು ಭಾಗವಹಿಸಿದ್ದಾರೆ.</p>.<p>ರಾಮಾಯಣದಲ್ಲಿ ಹಂಪಿಯ ಕಿಷ್ಕಿಂದೆ, ಅಂಜನಾದ್ರಿ ಬೆಟ್ಟ, ಪಂಪಾ ಸರೋವರ, ರಘುನಾಥ ಮಾಲ್ಯವಂತ ಪರ್ವತ, ಸುಗ್ರೀವ ಗುಹೆ, ಸೀತೆಯ ಸೆರಗು, ಋಷಿಮುಖ ಪರ್ವತದ ಉಲ್ಲೇಖವಿದೆ. ರಾಮ–ಲಕ್ಷ್ಮಣ ಓಡಾಡಿದ ಪವಿತ್ರ ಜಾಗ ಎನ್ನುವುದು ಭಕ್ತರ ನಂಬಿಕೆ. ಈ ಸ್ಥಳಗಳನ್ನು ಕಣ್ತುಂಬಿಕೊಳ್ಳುವುದಕ್ಕಾಗಿಯೇ ನಿತ್ಯವೂ ವಿವಿಧ ಕಡೆಗಳಿಂದ ನೂರಾರು ಜನ ಬಂದು ಹೋಗುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಹೊಸಪೇಟೆ: </strong>ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮ ಮಂದಿರದ ಶಿಲಾನ್ಯಾಸದ ಪ್ರಯುಕ್ತ ರಾಮನ ಭಕ್ತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ಇಲ್ಲಿನ ಹಂಪಿಯಲ್ಲಿ ಹಮ್ಮಿಕೊಂಡಿರುವ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.</p>.<p>ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನ, ಕೋದಂಡರಾಮ ದೇವಸ್ಥಾನ, ಉದ್ದಾನ ವೀರಭದ್ರೇಶ್ವರ ದೇವಸ್ಥಾನ, ಚಕ್ರತೀರ್ಥದ ರಾಮ–ಲಕ್ಷ್ಮಣ ದೇವಸ್ಥಾನ, ಹಂಪಿಗೆ ಹೊಂದಿಕೊಂಡಿರುವ ಅಂಜನಾದ್ರಿ ಬೆಟ್ಟದಲ್ಲಿ ಹೋಮ, ಹವನ, ಪೂಜೆ ಹಾಗೂ ವಿಶೇಷ ಪ್ರಾರ್ಥನೆಗಳು ಜರುಗುತ್ತಿವೆ.</p>.<p>ಸ್ಥಳೀಯರು ಸೇರಿದಂತೆ ಅನ್ಯ ಜಿಲ್ಲೆಯವರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಶ್ರೀರಾಮ ಸೇನೆ ಕಾರ್ಯಕರ್ತರೂ ಇದ್ದಾರೆ. ಜಿಲ್ಲಾ ಬಿಜೆಪಿಯಿಂದ ನಗರದ ಎಲ್ಲ ವಾರ್ಡ್ಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೂತ್ ಮಟ್ಟದ ಕಾರ್ಯಕರ್ತರು ಭಾಗವಹಿಸಿದ್ದಾರೆ.</p>.<p>ರಾಮಾಯಣದಲ್ಲಿ ಹಂಪಿಯ ಕಿಷ್ಕಿಂದೆ, ಅಂಜನಾದ್ರಿ ಬೆಟ್ಟ, ಪಂಪಾ ಸರೋವರ, ರಘುನಾಥ ಮಾಲ್ಯವಂತ ಪರ್ವತ, ಸುಗ್ರೀವ ಗುಹೆ, ಸೀತೆಯ ಸೆರಗು, ಋಷಿಮುಖ ಪರ್ವತದ ಉಲ್ಲೇಖವಿದೆ. ರಾಮ–ಲಕ್ಷ್ಮಣ ಓಡಾಡಿದ ಪವಿತ್ರ ಜಾಗ ಎನ್ನುವುದು ಭಕ್ತರ ನಂಬಿಕೆ. ಈ ಸ್ಥಳಗಳನ್ನು ಕಣ್ತುಂಬಿಕೊಳ್ಳುವುದಕ್ಕಾಗಿಯೇ ನಿತ್ಯವೂ ವಿವಿಧ ಕಡೆಗಳಿಂದ ನೂರಾರು ಜನ ಬಂದು ಹೋಗುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>