<p>ಹೊಸಪೇಟೆ (ವಿಜಯನಗರ): ಕರ್ನಾಟಕ ಪ್ರದೇಶ ಬಲಿಜ ಸಂಘ ತಾಲ್ಲೂಕು ಘಟಕದಿಂದ ಗುರುವಾರ ನಗರದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆಗೆ ಆಮ್ಲಜನಕ ಸಾಂದ್ರಕ ಯಂತ್ರ ಹಾಗೂ ₹2 ಲಕ್ಷ ಮೊತ್ತದ ಔಷಧ ನೀಡಲಾಯಿತು.</p>.<p>ಸಂಘದ ಮುಖಂಡರಾದ ಆರ್.ಕೆ. ರವಿಕುಮಾರ್, ಮಧುಸೂದನ್ ಅವರು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್ ಅವರಿಗೆ ಆಮ್ಲಜನಕ ಸಾಂದ್ರಕ ಯಂತ್ರ, ಔಷಧ, ಮಾಸ್ಕ್, ಸ್ಯಾನಿಟೈಸರ್ ಹಸ್ತಾಂತರಿಸಿದರು.</p>.<p>ಮಧುಸೂದನ್ ಮಾತನಾಡಿ, ‘ಬಲಿಜ ಸಂಘದಿಂದ ಇಡೀ ರಾಜ್ಯದಾದ್ಯಂತ ಎಲ್ಲ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸಾಧನ, ಔಷಧ ವಿತರಿಸಲಾಗುತ್ತಿದೆ. ಅದರ ಭಾಗವಾಗಿ ತಾಲ್ಲೂಕು ಆರೋಗ್ಯ ಇಲಾಖೆಗೆ ₹2 ಲಕ್ಷ ಮೊತ್ತದ ವಸ್ತುಗಳನ್ನು ನೀಡಲಾಗಿದೆ. ಕೋವಿಡ್ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ, ಔಷಧ ಸಿಕ್ಕು, ಅವರ ಜೀವ ಉಳಿಯಬೇಕು’ ಎಂದು ಹೇಳಿದರು.</p>.<p>ಸಂಘದ ಜಗದೀಶ್ವರ, ಆದಿತ್ಯ, ಸತೀಶ್ ಕಾಂಡ್ರ, ಸುಮಿತ್ರಮ್ಮ, ಗೀತಾ, ಶ್ರೀನಿವಾಸ, ಕೀರ್ತಿರಾಜ, ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಧರ್ಮನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ಕರ್ನಾಟಕ ಪ್ರದೇಶ ಬಲಿಜ ಸಂಘ ತಾಲ್ಲೂಕು ಘಟಕದಿಂದ ಗುರುವಾರ ನಗರದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆಗೆ ಆಮ್ಲಜನಕ ಸಾಂದ್ರಕ ಯಂತ್ರ ಹಾಗೂ ₹2 ಲಕ್ಷ ಮೊತ್ತದ ಔಷಧ ನೀಡಲಾಯಿತು.</p>.<p>ಸಂಘದ ಮುಖಂಡರಾದ ಆರ್.ಕೆ. ರವಿಕುಮಾರ್, ಮಧುಸೂದನ್ ಅವರು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್ ಅವರಿಗೆ ಆಮ್ಲಜನಕ ಸಾಂದ್ರಕ ಯಂತ್ರ, ಔಷಧ, ಮಾಸ್ಕ್, ಸ್ಯಾನಿಟೈಸರ್ ಹಸ್ತಾಂತರಿಸಿದರು.</p>.<p>ಮಧುಸೂದನ್ ಮಾತನಾಡಿ, ‘ಬಲಿಜ ಸಂಘದಿಂದ ಇಡೀ ರಾಜ್ಯದಾದ್ಯಂತ ಎಲ್ಲ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸಾಧನ, ಔಷಧ ವಿತರಿಸಲಾಗುತ್ತಿದೆ. ಅದರ ಭಾಗವಾಗಿ ತಾಲ್ಲೂಕು ಆರೋಗ್ಯ ಇಲಾಖೆಗೆ ₹2 ಲಕ್ಷ ಮೊತ್ತದ ವಸ್ತುಗಳನ್ನು ನೀಡಲಾಗಿದೆ. ಕೋವಿಡ್ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ, ಔಷಧ ಸಿಕ್ಕು, ಅವರ ಜೀವ ಉಳಿಯಬೇಕು’ ಎಂದು ಹೇಳಿದರು.</p>.<p>ಸಂಘದ ಜಗದೀಶ್ವರ, ಆದಿತ್ಯ, ಸತೀಶ್ ಕಾಂಡ್ರ, ಸುಮಿತ್ರಮ್ಮ, ಗೀತಾ, ಶ್ರೀನಿವಾಸ, ಕೀರ್ತಿರಾಜ, ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಧರ್ಮನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>