<p>ಬಳ್ಳಾರಿ: ರೈಲ್ವೆ ಖಾತೆ ರಾಜ್ಯ ಮಂತ್ರಿ ವಿ. ಸೋಮಣ್ಣ ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿಯಾದ ‘ರೈಲ್ವೆ ಕ್ರಿಯಾ ಸಮಿತಿ’ಯ ನಿಯೋಗವು ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಿತು.</p>.<p>ಮೈಸೂರು–ಅಜ್ಮೀರ್ ರೈಲು ಈ ಹಿಂದೆ ಚಿತ್ರದುರ್ಗ–ರಾಯದುರ್ಗ–ಬಳ್ಳಾರಿ–ಹೊಸಪೇಟೆ ಮಾರ್ಗದಲ್ಲಿ ವಾರದಲ್ಲಿ ಒಂದು ದಿನ ಸಂಚರಿಸುತ್ತಿತ್ತು. ಅದನ್ನು ಮರಳಿ ಪ್ರಾರಂಭಿಸಬೇಕು ಹಾಗೂ ಇದೇ ರೈಲು ದಾವಣಗೆರೆ ಮತ್ತು ಕೊಟ್ಟೂರು ಮಾರ್ಗದಲ್ಲಿ ವಾರದಲ್ಲಿ ಒಂದು ದಿನ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.</p>.<p>ಬಳ್ಳಾರಿ–ಸಿರುಗುಪ್ಪ–ಸಿಂಧನೂರು ರೈಲ್ವೆ ಮಾರ್ಗದ ಪ್ರಮುಖ ಬೇಡಿಕೆಯನ್ನೂ ಸಚಿವರ ಮುಂದಿಡಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಮಾರ್ಗದ ಆರಂಭಕ್ಕೆ ಹಾಗೂ ಬಳ್ಳಾರಿ ಮಾರ್ಗದಲ್ಲಿ ‘ವಂದೇ ಭಾರತ್’ ಇಲ್ಲವೇ ‘ಸೂಪರ್ ಫಾಸ್ಟ್ ಜನ ಶತಾಬ್ದಿ’ ಅಥವಾ ‘ಇಂಟರ್ ಸಿಟಿ’ ರೈಲು ಪ್ರಾರಂಭಿಸುವಂತೆ ಶಿಫಾರಸು ಮಾಡಿದರು.</p>.<p>ರೈಲ್ವೆ ಕ್ರಿಯಾ ಸಮಿತಿಯ ಅಧ್ಯಕ್ಷ ಕೆ.ಎಂ. ಮಹೇಶ್ವರ ಸ್ವಾಮಿ, ಸಿರುಗುಪ್ಪ ರೈಸ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಎನ್.ಜಿ. ಬಸವರಾಜಪ್ಪ, ಸಿರುಗುಪ್ಪ ಎಪಿಎಂಸಿ ಮಾಜಿ ನಿರ್ದೇಶಕ ಪಲ್ಲೇದ್ ಯೋಗರಾಜ್, ಕೋಳೂರು ಚಂದ್ರಶೇಖರ ಗೌಡ, ಕೊಸಗಿ ನಾಗರಾಜ್ ಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-25-1376881159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ರೈಲ್ವೆ ಖಾತೆ ರಾಜ್ಯ ಮಂತ್ರಿ ವಿ. ಸೋಮಣ್ಣ ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿಯಾದ ‘ರೈಲ್ವೆ ಕ್ರಿಯಾ ಸಮಿತಿ’ಯ ನಿಯೋಗವು ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಿತು.</p>.<p>ಮೈಸೂರು–ಅಜ್ಮೀರ್ ರೈಲು ಈ ಹಿಂದೆ ಚಿತ್ರದುರ್ಗ–ರಾಯದುರ್ಗ–ಬಳ್ಳಾರಿ–ಹೊಸಪೇಟೆ ಮಾರ್ಗದಲ್ಲಿ ವಾರದಲ್ಲಿ ಒಂದು ದಿನ ಸಂಚರಿಸುತ್ತಿತ್ತು. ಅದನ್ನು ಮರಳಿ ಪ್ರಾರಂಭಿಸಬೇಕು ಹಾಗೂ ಇದೇ ರೈಲು ದಾವಣಗೆರೆ ಮತ್ತು ಕೊಟ್ಟೂರು ಮಾರ್ಗದಲ್ಲಿ ವಾರದಲ್ಲಿ ಒಂದು ದಿನ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.</p>.<p>ಬಳ್ಳಾರಿ–ಸಿರುಗುಪ್ಪ–ಸಿಂಧನೂರು ರೈಲ್ವೆ ಮಾರ್ಗದ ಪ್ರಮುಖ ಬೇಡಿಕೆಯನ್ನೂ ಸಚಿವರ ಮುಂದಿಡಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಮಾರ್ಗದ ಆರಂಭಕ್ಕೆ ಹಾಗೂ ಬಳ್ಳಾರಿ ಮಾರ್ಗದಲ್ಲಿ ‘ವಂದೇ ಭಾರತ್’ ಇಲ್ಲವೇ ‘ಸೂಪರ್ ಫಾಸ್ಟ್ ಜನ ಶತಾಬ್ದಿ’ ಅಥವಾ ‘ಇಂಟರ್ ಸಿಟಿ’ ರೈಲು ಪ್ರಾರಂಭಿಸುವಂತೆ ಶಿಫಾರಸು ಮಾಡಿದರು.</p>.<p>ರೈಲ್ವೆ ಕ್ರಿಯಾ ಸಮಿತಿಯ ಅಧ್ಯಕ್ಷ ಕೆ.ಎಂ. ಮಹೇಶ್ವರ ಸ್ವಾಮಿ, ಸಿರುಗುಪ್ಪ ರೈಸ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಎನ್.ಜಿ. ಬಸವರಾಜಪ್ಪ, ಸಿರುಗುಪ್ಪ ಎಪಿಎಂಸಿ ಮಾಜಿ ನಿರ್ದೇಶಕ ಪಲ್ಲೇದ್ ಯೋಗರಾಜ್, ಕೋಳೂರು ಚಂದ್ರಶೇಖರ ಗೌಡ, ಕೊಸಗಿ ನಾಗರಾಜ್ ಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-25-1376881159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>