<p><strong>ತೆಕ್ಕಲಕೋಟೆ</strong> (ಬಳ್ಳಾರಿ ಜಿಲ್ಲೆ): ‘ತೆಕ್ಕಲಕೋಟೆ, ನಿಟ್ಟೂರು, ಉಡೇಗೋಳ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಪತ್ತೆಯಾದ ಪುರಾತನ ಶಾಸನಗಳ ಡಿಜಿಟಲೀಕರಣ ಪ್ರಕ್ರಿಯೆಯನ್ನು ‘ಭಾರತಶ್ರೀ’ ಯೋಜನೆಯಡಿ ಕೈಗೊಳ್ಳಲಾಗುವುದು’ ಎಂದು ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಅಧೀಕ್ಷಕ ಅನಿಲ್ ಕುಮಾರ ಆರ್.ವಿ ತಿಳಿಸಿದರು.</p>.<p>ನಿಟ್ಟೂರು ಗ್ರಾಮದ ಬಳಿ ಈಚೆಗೆ ಪತ್ತೆಯಾದ ರಾಷ್ಟ್ರಕೂಟರ ಕಾಲದ ಬಂಡೆಗಲ್ಲು ಶಾಸನ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಅವರು, ‘ಪುರಾತನ ಶಾಸನಗಳನ್ನು ಡಿಜಿಟಲೀಕರಣಗೊಳಿಸಿ ಸಂರಕ್ಷಿಸಲಾಗುವುದು. ಸಾರ್ವಜನಿಕರು ಮತ್ತು ಸಂಶೋಧಕರಿಗೆ ಆನ್ಲೈನ್ನಲ್ಲಿ ಲಭ್ಯ ಆಗುವಂತೆ ಮಾಡಲಾಗುವುದು’ ಎಂದರು.</p>.<p>ಪಟ್ಟಣದ ಪ್ರಾಗೈತಿಹಾಸಿಕ ನೆಲೆ ಬಳಿ ಸಿಕ್ಕ ಗೌಡ್ರ ಮೂಲೆ ಬಂಡೆಗಲ್ಲು ಶಾಸನ, ನಿಟ್ಟೂರಿನ ಆಂಜನೇಯ ದೇವಸ್ಥಾನ ಬಳಿಯ ಬಂಡೆಗಲ್ಲು ಶಾಸನ ಹಾಗೂ ರಾಷ್ಟ್ರಕೂಟರ ಕಾಲದ ಬಂಡೆಗಲ್ಲು ಶಾಸನ ಸ್ಥಳಗಳಿಗೆ ಭೇಟಿ ನೀಡಿ ಶಾಸನಗಳ ಪಡಿಯಚ್ಚು ತೆಗೆದುಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-51-2060812041</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ</strong> (ಬಳ್ಳಾರಿ ಜಿಲ್ಲೆ): ‘ತೆಕ್ಕಲಕೋಟೆ, ನಿಟ್ಟೂರು, ಉಡೇಗೋಳ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಪತ್ತೆಯಾದ ಪುರಾತನ ಶಾಸನಗಳ ಡಿಜಿಟಲೀಕರಣ ಪ್ರಕ್ರಿಯೆಯನ್ನು ‘ಭಾರತಶ್ರೀ’ ಯೋಜನೆಯಡಿ ಕೈಗೊಳ್ಳಲಾಗುವುದು’ ಎಂದು ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಅಧೀಕ್ಷಕ ಅನಿಲ್ ಕುಮಾರ ಆರ್.ವಿ ತಿಳಿಸಿದರು.</p>.<p>ನಿಟ್ಟೂರು ಗ್ರಾಮದ ಬಳಿ ಈಚೆಗೆ ಪತ್ತೆಯಾದ ರಾಷ್ಟ್ರಕೂಟರ ಕಾಲದ ಬಂಡೆಗಲ್ಲು ಶಾಸನ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಅವರು, ‘ಪುರಾತನ ಶಾಸನಗಳನ್ನು ಡಿಜಿಟಲೀಕರಣಗೊಳಿಸಿ ಸಂರಕ್ಷಿಸಲಾಗುವುದು. ಸಾರ್ವಜನಿಕರು ಮತ್ತು ಸಂಶೋಧಕರಿಗೆ ಆನ್ಲೈನ್ನಲ್ಲಿ ಲಭ್ಯ ಆಗುವಂತೆ ಮಾಡಲಾಗುವುದು’ ಎಂದರು.</p>.<p>ಪಟ್ಟಣದ ಪ್ರಾಗೈತಿಹಾಸಿಕ ನೆಲೆ ಬಳಿ ಸಿಕ್ಕ ಗೌಡ್ರ ಮೂಲೆ ಬಂಡೆಗಲ್ಲು ಶಾಸನ, ನಿಟ್ಟೂರಿನ ಆಂಜನೇಯ ದೇವಸ್ಥಾನ ಬಳಿಯ ಬಂಡೆಗಲ್ಲು ಶಾಸನ ಹಾಗೂ ರಾಷ್ಟ್ರಕೂಟರ ಕಾಲದ ಬಂಡೆಗಲ್ಲು ಶಾಸನ ಸ್ಥಳಗಳಿಗೆ ಭೇಟಿ ನೀಡಿ ಶಾಸನಗಳ ಪಡಿಯಚ್ಚು ತೆಗೆದುಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-51-2060812041</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>