<p><strong>ಬಳ್ಳಾರಿ:</strong> ನಗರದ ಬುಡಾ ಕಾಂಪ್ಲೆಕ್ಸ್ನಲ್ಲಿರುವ ಮಳಿಗೆಯೊಂದರಲ್ಲಿ ವ್ಯಾಪಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.</p>.<p>ವಿದ್ಯಾನಗರದ 5ನೇ ಕ್ರಾಸ್ ನಿವಾಸಿ ಕಾಳಿ ಸುಬ್ರಮಣ್ಯ (48) ಮೃತ. ನಗರದ ಬುಡಾ ಕಾಂಪ್ಲೆಕ್ಸ್ನ ಮಳಿಗೆಯೊಂದರಲ್ಲಿ ಸುಬ್ರಮಣ್ಯ ವ್ಯಾಪಾರ ನಡೆಸುತ್ತಿದ್ದರು. ತಮ್ಮ ವ್ಯವಹಾರಕ್ಕಾಗಿ ವಿವಿಧ ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಹಾಗೂ ಪರಿಚಯಸ್ಥರಿಂದ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೇ ಫೆ. 7 ರಂದು ಮಧ್ಯಾಹ್ನ 3ರಿಂದ ರಾತ್ರಿ 7:45ರ ನಡುವಿನ ಅವಧಿಯಲ್ಲಿ ತಮ್ಮ ಮಳಿಗೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಸಾಲ ತೀರಿಸುವ ಚಿಂತೆಯಲ್ಲಿದ್ದ ಅವರು ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ. ಅವರ ಸಾವಿನಲ್ಲಿ ನಮಗೆ ಯಾವುದೇ ಸಂಶಯವಿಲ್ಲ ಎಂದು ಮೃತರ ಪತ್ನಿ ವಿಶಾಲಾಕ್ಷಿ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ನಗರದ ಬುಡಾ ಕಾಂಪ್ಲೆಕ್ಸ್ನಲ್ಲಿರುವ ಮಳಿಗೆಯೊಂದರಲ್ಲಿ ವ್ಯಾಪಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.</p>.<p>ವಿದ್ಯಾನಗರದ 5ನೇ ಕ್ರಾಸ್ ನಿವಾಸಿ ಕಾಳಿ ಸುಬ್ರಮಣ್ಯ (48) ಮೃತ. ನಗರದ ಬುಡಾ ಕಾಂಪ್ಲೆಕ್ಸ್ನ ಮಳಿಗೆಯೊಂದರಲ್ಲಿ ಸುಬ್ರಮಣ್ಯ ವ್ಯಾಪಾರ ನಡೆಸುತ್ತಿದ್ದರು. ತಮ್ಮ ವ್ಯವಹಾರಕ್ಕಾಗಿ ವಿವಿಧ ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಹಾಗೂ ಪರಿಚಯಸ್ಥರಿಂದ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೇ ಫೆ. 7 ರಂದು ಮಧ್ಯಾಹ್ನ 3ರಿಂದ ರಾತ್ರಿ 7:45ರ ನಡುವಿನ ಅವಧಿಯಲ್ಲಿ ತಮ್ಮ ಮಳಿಗೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಸಾಲ ತೀರಿಸುವ ಚಿಂತೆಯಲ್ಲಿದ್ದ ಅವರು ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ. ಅವರ ಸಾವಿನಲ್ಲಿ ನಮಗೆ ಯಾವುದೇ ಸಂಶಯವಿಲ್ಲ ಎಂದು ಮೃತರ ಪತ್ನಿ ವಿಶಾಲಾಕ್ಷಿ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>