<p><strong>ಬಳ್ಳಾರಿ</strong>: ಕಾರುಗಳನ್ನು ಬಾಡಿಗೆಗೆ ಪಡೆದು ಮಾಸಿಕ ಆದಾಯದ ಆಸೆ ತೋರಿಸಿ, ನಂತರ ಅವುಗಳನ್ನು ಮರಳಿ ನೀಡದೆ ವಂಚಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದ್ದು ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ವಿಶಾಲ್ ನಗರದ ನಿವಾಸಿ ಸಿಕಂದರ್ ಬಾಷಾ ಎಂಬುವವರು ನೀಡಿದ ದೂರಿನನ್ವಯ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಮೇ 16ರಂದು ಎಫ್ಐಆರ್ ದಾಖಲಾಗಿದೆ.</p>.<p>ಆರೋಪಿಗಳಾದ ಜಾಹಿದ್ ಪಾಷ, ಆಲೀಂ, ರೌಫ್ ಮತ್ತು ಮಹಮ್ಮದ್ ಅಲಿ ಮತ್ತು ಇತರರು ಸ್ವಿಫ್ಟ್ ಡಿಜೈರ್ ಮತ್ತು ಕ್ರೆಟಾ ಕಾರುಗಳನ್ನು ತಿಂಗಳಿಗೆ ₹40 ಸಾವಿರ ಬಾಡಿಗೆ ನೀಡುವುದಾಗಿ ನಂಬಿಸಿ ತೆಗೆದುಕೊಂಡು ಹೋಗಿದ್ದರು. ಆದರೆ, ಬಾಡಿಗೆ ಹಣ ನೀಡದೆ ಹಾಗೂ ಕಾರುಗಳನ್ನು ಮರಳಿ ಕೊಡದೆ ಸಂಪರ್ಕಕ್ಕೆ ಸಿಗದೆ ವಂಚಿಸಿದ್ದಾರೆ. ಆರೋಪಿಗಳು ಇದೇ ರೀತಿ ನಗರದ ಸುಮಾರು 20-25 ಜನರಿಂದ ಕಾರುಗಳನ್ನು ಪಡೆದು ಅನ್ಯ ಜಿಲ್ಲೆಗಳಲ್ಲಿ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.</p>.<p>ಈ ಹಿಂದೆಯೂ ಇಂಥದ್ದೇ ಪ್ರಕರಣ ಬಳ್ಳಾರಿಯಲ್ಲಿ ನಡೆದಿತ್ತು. ಪ್ರಕರಣ ಬೇಧಿಸಿದ್ದ ಪೊಲೀಸರು 44 ಕಾರುಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಿದ್ದರು. ಈಗ ಮತ್ತೆ ಅಂಥದ್ದೇ ಪ್ರಕರಣ ಬಯಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-25-511422133</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಕಾರುಗಳನ್ನು ಬಾಡಿಗೆಗೆ ಪಡೆದು ಮಾಸಿಕ ಆದಾಯದ ಆಸೆ ತೋರಿಸಿ, ನಂತರ ಅವುಗಳನ್ನು ಮರಳಿ ನೀಡದೆ ವಂಚಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದ್ದು ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ವಿಶಾಲ್ ನಗರದ ನಿವಾಸಿ ಸಿಕಂದರ್ ಬಾಷಾ ಎಂಬುವವರು ನೀಡಿದ ದೂರಿನನ್ವಯ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಮೇ 16ರಂದು ಎಫ್ಐಆರ್ ದಾಖಲಾಗಿದೆ.</p>.<p>ಆರೋಪಿಗಳಾದ ಜಾಹಿದ್ ಪಾಷ, ಆಲೀಂ, ರೌಫ್ ಮತ್ತು ಮಹಮ್ಮದ್ ಅಲಿ ಮತ್ತು ಇತರರು ಸ್ವಿಫ್ಟ್ ಡಿಜೈರ್ ಮತ್ತು ಕ್ರೆಟಾ ಕಾರುಗಳನ್ನು ತಿಂಗಳಿಗೆ ₹40 ಸಾವಿರ ಬಾಡಿಗೆ ನೀಡುವುದಾಗಿ ನಂಬಿಸಿ ತೆಗೆದುಕೊಂಡು ಹೋಗಿದ್ದರು. ಆದರೆ, ಬಾಡಿಗೆ ಹಣ ನೀಡದೆ ಹಾಗೂ ಕಾರುಗಳನ್ನು ಮರಳಿ ಕೊಡದೆ ಸಂಪರ್ಕಕ್ಕೆ ಸಿಗದೆ ವಂಚಿಸಿದ್ದಾರೆ. ಆರೋಪಿಗಳು ಇದೇ ರೀತಿ ನಗರದ ಸುಮಾರು 20-25 ಜನರಿಂದ ಕಾರುಗಳನ್ನು ಪಡೆದು ಅನ್ಯ ಜಿಲ್ಲೆಗಳಲ್ಲಿ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.</p>.<p>ಈ ಹಿಂದೆಯೂ ಇಂಥದ್ದೇ ಪ್ರಕರಣ ಬಳ್ಳಾರಿಯಲ್ಲಿ ನಡೆದಿತ್ತು. ಪ್ರಕರಣ ಬೇಧಿಸಿದ್ದ ಪೊಲೀಸರು 44 ಕಾರುಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಿದ್ದರು. ಈಗ ಮತ್ತೆ ಅಂಥದ್ದೇ ಪ್ರಕರಣ ಬಯಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-25-511422133</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>