<p><strong>ಕಂಪ್ಲಿ:</strong> ಬಳ್ಳಾರಿ ನಗರದಲ್ಲಿ ಗುರುವಾರ ನಡೆದ ಗಲಾಟೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಲಿದೆ ಎಂದು ಸಂಸದ ಇ. ತುಕರಾಂ ತಿಳಿಸಿದರು.</p>.<p>ಪಟ್ಟಣದ ಹಿಂದೂ ಮುಸ್ಲಿಂ ಭಾವೈಕ್ಯದ ಕೇಂದ್ರವಾದ ಬಡೇಸಾಹೇಬ್ ದರ್ಗಾಕ್ಕೆ ಶುಕ್ರವಾರ ಭೇಟಿನೀಡಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಂಗಾರದಂಥ ಕ್ಷೇತ್ರವಾದ ಬಳ್ಳಾರಿಯಲ್ಲಿ ಅನಿರೀಕ್ಷಿತ ಘಟನೆ ನಡೆದಿದೆ’ ಎಂದು ವಿಷಾದಿಸಿದರು.</p>.<p>‘ಸಂಸದರ ಅನುದಾನದ ₹ 5ಕೋಟಿಯನ್ನು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹ 80 ಲಕ್ಷದಂತೆ ಹಂಚಿಕೆ ಮಾಡಲಾಗುವುದು. ಈ ಅನುದಾನದಲ್ಲಿ ರೈತ ಸಂಪರ್ಕ ಕೇಂದ್ರಗಳಿಗೆ ಪ್ರಾಜೆಕ್ಟರ್, 7 ಪ್ರೌಢಶಾಲೆಗಳಿಗೆ ಡಿಜಿಟಲ್ ಲೈಬ್ರರಿ, ₹ 1 ಲಕ್ಷದಲ್ಲಿ ಕ್ರೀಡಾ ಸಾಧನ ಮತ್ತು ಅಂಗವಿಕಲರಿಗೆ ಅಗತ್ಯ ಸಲಕರಣೆ ಒದಗಿಸಲಾಗುವುದು’ ಎಂದು ವಿವರಿಸಿದರು.</p>.<p>‘ಹೊಸಪೇಟೆಯಿಂದ ಕರ್ನಾಟಕದ ಗಡಿಯವರೆಗೆ 5 ಮೇಲ್ಸೇತುವೆ ಬದಲಿಸಲು ಯೋಜಿಸಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಸಿರು ನಿಶಾನೆ ತೋರಿದ್ದಾರೆ. ಗಂಗಾವತಿ-ಕಂಪ್ಲಿ-ದರೋಜಿ ರೈಲು ಸಂಪರ್ಕಕ್ಕೆ ಭೂಸ್ವಾಧೀನ ಕುರಿತು ರಾಜ್ಯ ಸರ್ಕಾರ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುವೆ’ ಎಂದು ತಿಳಿಸಿದರು.</p>.<p>ಮುಸ್ಲಿಂ ಧರ್ಮಗುರು ಸೈಯ್ಯದ್ ಷಾಹ್ ಅಬುಲ್ ಹಸನ್ ಖಾದ್ರಿ ಉರುಫ್ ಆಜಂಪಾಷಾ ಖಾದ್ರಿ ಸಾಹೇಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಪುರಸಭೆ ಮಾಜಿ ಅಧ್ಯಕ್ಷ ಎಂ. ಸುಧೀರ್, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಎಸ್.ಎಲ್. ಸ್ವಾಮಿ, ಮುಸ್ಲಿಂ ಸಮುದಾಯ ಪ್ರಮುಖರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ಬಳ್ಳಾರಿ ನಗರದಲ್ಲಿ ಗುರುವಾರ ನಡೆದ ಗಲಾಟೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಲಿದೆ ಎಂದು ಸಂಸದ ಇ. ತುಕರಾಂ ತಿಳಿಸಿದರು.</p>.<p>ಪಟ್ಟಣದ ಹಿಂದೂ ಮುಸ್ಲಿಂ ಭಾವೈಕ್ಯದ ಕೇಂದ್ರವಾದ ಬಡೇಸಾಹೇಬ್ ದರ್ಗಾಕ್ಕೆ ಶುಕ್ರವಾರ ಭೇಟಿನೀಡಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಂಗಾರದಂಥ ಕ್ಷೇತ್ರವಾದ ಬಳ್ಳಾರಿಯಲ್ಲಿ ಅನಿರೀಕ್ಷಿತ ಘಟನೆ ನಡೆದಿದೆ’ ಎಂದು ವಿಷಾದಿಸಿದರು.</p>.<p>‘ಸಂಸದರ ಅನುದಾನದ ₹ 5ಕೋಟಿಯನ್ನು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹ 80 ಲಕ್ಷದಂತೆ ಹಂಚಿಕೆ ಮಾಡಲಾಗುವುದು. ಈ ಅನುದಾನದಲ್ಲಿ ರೈತ ಸಂಪರ್ಕ ಕೇಂದ್ರಗಳಿಗೆ ಪ್ರಾಜೆಕ್ಟರ್, 7 ಪ್ರೌಢಶಾಲೆಗಳಿಗೆ ಡಿಜಿಟಲ್ ಲೈಬ್ರರಿ, ₹ 1 ಲಕ್ಷದಲ್ಲಿ ಕ್ರೀಡಾ ಸಾಧನ ಮತ್ತು ಅಂಗವಿಕಲರಿಗೆ ಅಗತ್ಯ ಸಲಕರಣೆ ಒದಗಿಸಲಾಗುವುದು’ ಎಂದು ವಿವರಿಸಿದರು.</p>.<p>‘ಹೊಸಪೇಟೆಯಿಂದ ಕರ್ನಾಟಕದ ಗಡಿಯವರೆಗೆ 5 ಮೇಲ್ಸೇತುವೆ ಬದಲಿಸಲು ಯೋಜಿಸಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಸಿರು ನಿಶಾನೆ ತೋರಿದ್ದಾರೆ. ಗಂಗಾವತಿ-ಕಂಪ್ಲಿ-ದರೋಜಿ ರೈಲು ಸಂಪರ್ಕಕ್ಕೆ ಭೂಸ್ವಾಧೀನ ಕುರಿತು ರಾಜ್ಯ ಸರ್ಕಾರ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುವೆ’ ಎಂದು ತಿಳಿಸಿದರು.</p>.<p>ಮುಸ್ಲಿಂ ಧರ್ಮಗುರು ಸೈಯ್ಯದ್ ಷಾಹ್ ಅಬುಲ್ ಹಸನ್ ಖಾದ್ರಿ ಉರುಫ್ ಆಜಂಪಾಷಾ ಖಾದ್ರಿ ಸಾಹೇಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಪುರಸಭೆ ಮಾಜಿ ಅಧ್ಯಕ್ಷ ಎಂ. ಸುಧೀರ್, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಎಸ್.ಎಲ್. ಸ್ವಾಮಿ, ಮುಸ್ಲಿಂ ಸಮುದಾಯ ಪ್ರಮುಖರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>