<p><strong>ಬಳ್ಳಾರಿ:</strong> ‘ಉಪ ಮುಖ್ಯಮಂತ್ರಿಗೆ ಶಾಸಕರ ಬೆಂಬಲ ಇಲ್ಲ ಎಂದು ಸಿ.ಎಂ ಆದವರು ಮಾತನಾಡುವುದು ಅಪಹಾಸ್ಯ, ಅವರ ಅಂತರಾಳದ ಬೇಗುದಿಯನ್ನು ಇದು ಬಯಲು ಮಾಡಿದೆ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. </p>.<p>‘ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರೇ ಬರೆದುಕೊಟ್ಟಿದ್ದಾರೆ. ಅದನ್ನು ಅವರ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಆದರೆ, ರಾಜ್ಯ ಸರ್ಕಾರ ಸತ್ತಿದೆ. ಜನರನ್ನು ಕತ್ತಲೆ ಕೋಣೆಯಲ್ಲಿ ಕೂರಿಸಲಾಗಿದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ರಾಜ್ಯದಲ್ಲಿ ಒಂದೆಡೆ ಶಿವಕುಮಾರ್, ಇನ್ನೊಂದು ಕಡೆ ಸಿದ್ದರಾಮಯ್ಯ ಎಂಬಂತೆ ಆಗಿದೆ. ಅದು ಬಿಟ್ಟು ಜನತೆಗೆ ಏನಾದರೂ ಒಳಿತು ಮಾಡಿ’ ಎಂದು ಸಲಹೆ ನೀಡಿದರು. </p>.<p>ಅಧ್ಯಕ್ಷನಾಗುವ ಆಸೆ ಇಲ್ಲ: ‘ಪ್ರಧಾನಿ ಮೋದಿ ನನಗೊಂದು ಕೆಲಸ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಉಪ ಮುಖ್ಯಮಂತ್ರಿಗೆ ಶಾಸಕರ ಬೆಂಬಲ ಇಲ್ಲ ಎಂದು ಸಿ.ಎಂ ಆದವರು ಮಾತನಾಡುವುದು ಅಪಹಾಸ್ಯ, ಅವರ ಅಂತರಾಳದ ಬೇಗುದಿಯನ್ನು ಇದು ಬಯಲು ಮಾಡಿದೆ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. </p>.<p>‘ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರೇ ಬರೆದುಕೊಟ್ಟಿದ್ದಾರೆ. ಅದನ್ನು ಅವರ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಆದರೆ, ರಾಜ್ಯ ಸರ್ಕಾರ ಸತ್ತಿದೆ. ಜನರನ್ನು ಕತ್ತಲೆ ಕೋಣೆಯಲ್ಲಿ ಕೂರಿಸಲಾಗಿದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ರಾಜ್ಯದಲ್ಲಿ ಒಂದೆಡೆ ಶಿವಕುಮಾರ್, ಇನ್ನೊಂದು ಕಡೆ ಸಿದ್ದರಾಮಯ್ಯ ಎಂಬಂತೆ ಆಗಿದೆ. ಅದು ಬಿಟ್ಟು ಜನತೆಗೆ ಏನಾದರೂ ಒಳಿತು ಮಾಡಿ’ ಎಂದು ಸಲಹೆ ನೀಡಿದರು. </p>.<p>ಅಧ್ಯಕ್ಷನಾಗುವ ಆಸೆ ಇಲ್ಲ: ‘ಪ್ರಧಾನಿ ಮೋದಿ ನನಗೊಂದು ಕೆಲಸ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>