<p><strong>ಬಳ್ಳಾರಿ:</strong> ‘ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಮಹಿಳಾ ವಿರೋಧಿ ನಿಲುವು ಬಹಿರಂಗವಾಗಿದೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ವಾಗ್ದಾಳಿ ನಡೆಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ಹೊರತಾಗಿ ಸಾಮಾನ್ಯ ಮಹಿಳೆಯರಿಗೆ ಅವಕಾಶವೇ ಇಲ್ಲ’ ಎಂದು ಟೀಕಿಸಿದರು.</p>.<p>‘ವಿರೋಧ ಪಕ್ಷಗಳು ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸುತ್ತಿವೆ. ಮೋದಿ ಸರ್ಕಾರದ ಮಸೂದೆಯನ್ನು ವಿರೋಧಿಸುವುದು ಅವರ ಧೋರಣೆ. ಇಂಡಿಯಾ ಒಕ್ಕೂಟದ ಪಕ್ಷಗಳೂ ಕುಟುಂಬ ರಾಜಕಾರಣದಲ್ಲಿ ಮುಳುಗಿವೆ’ ಎಂದು ದೂರಿದರು.</p>.<p>‘ಮಹಿಳಾ ಮೀಸಲಾತಿ ಕಾನೂನು ಜಾರಿಗೆ ಕಾಂಗ್ರೆಸ್ ಹಿಂದಿನಿಂದಲೂ ಅಡ್ಡಿಪಡಿಸುತ್ತಿದೆ. 1996ರಿಂದ ಹಲವು ಬಾರಿ ಬಿಲ್ ಮಂಡನೆಯಾದಾಗಲೂ ವಿರೋಧಿಸುತ್ತಲೇ ಬಂದಿದೆ. ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ ಪಕ್ಷ. ತ್ರಿವಳಿ ತಲಾಖ್ ರದ್ದು ಮಾಡಿದ ಬಿಜೆಪಿಯ ಹಲವು ನಿರ್ದಾರಗಳನ್ನು ಕಾಂಗ್ರೆಸ್ ವಿರೋಧಿಸಿದೆ’ ಎಂದು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಹೇಳನಕಾರಿ ಪದ ಬಳಕೆ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ’ ಎಂದು ಇದೇ ವೇಳೆ ಹೇಳಿದರು.</p>.<p>‘ಮೇ 9ರಂದು ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಲಕ್ಷಾಂತರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.</p>.<p>ಭತ್ರಿ ಗ್ರಾಮದಲ್ಲಿ ನಾಲ್ಕೈದು ತಲೆಮಾರುಗಳಿಂದ ಬಡವರು ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈಗ ಒತ್ತುವರಿ ತೆರವು ನೆಪದಲ್ಲಿ ಅವರನ್ನು ಒಕ್ಕಲೆಬ್ಬಿಸಲಾಗಿದೆ. ಅಂಗವಿಕಲರೊಬ್ಬರು ಎಸ್ಸಿ/ಎಸ್ಟಿ ನಿಗಮದಿಂದ ಸಾಲ ಪಡೆದು ನಿರ್ಮಿಸಿಕೊಂಡಿದ್ದ ಹೈನುಗಾರಿಕೆ ಶೆಡ್ ಅನ್ನು ತೆರವು ಮಾಡಲಾಗಿದೆ ಎಂದರು.</p>.<p>ಪಾಲಿಕೆ ವಿರೋಧ ಪಕ್ಷದ ನಾಯಕ ಟಿ.ಶ್ರೀನಿವಾಸ್ ಮೊತ್ಕರ್, ಸದಸ್ಯರಾದ ಜಿ.ಹನುಮಂತ, ಕೆ.ಹನುಮಂತಪ್ಪ, ಬಿಜೆಪಿ ಮುಖಂಡರಾದ ಗುರುಲಿಂಗನಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-25-189550198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಮಹಿಳಾ ವಿರೋಧಿ ನಿಲುವು ಬಹಿರಂಗವಾಗಿದೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ವಾಗ್ದಾಳಿ ನಡೆಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ಹೊರತಾಗಿ ಸಾಮಾನ್ಯ ಮಹಿಳೆಯರಿಗೆ ಅವಕಾಶವೇ ಇಲ್ಲ’ ಎಂದು ಟೀಕಿಸಿದರು.</p>.<p>‘ವಿರೋಧ ಪಕ್ಷಗಳು ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸುತ್ತಿವೆ. ಮೋದಿ ಸರ್ಕಾರದ ಮಸೂದೆಯನ್ನು ವಿರೋಧಿಸುವುದು ಅವರ ಧೋರಣೆ. ಇಂಡಿಯಾ ಒಕ್ಕೂಟದ ಪಕ್ಷಗಳೂ ಕುಟುಂಬ ರಾಜಕಾರಣದಲ್ಲಿ ಮುಳುಗಿವೆ’ ಎಂದು ದೂರಿದರು.</p>.<p>‘ಮಹಿಳಾ ಮೀಸಲಾತಿ ಕಾನೂನು ಜಾರಿಗೆ ಕಾಂಗ್ರೆಸ್ ಹಿಂದಿನಿಂದಲೂ ಅಡ್ಡಿಪಡಿಸುತ್ತಿದೆ. 1996ರಿಂದ ಹಲವು ಬಾರಿ ಬಿಲ್ ಮಂಡನೆಯಾದಾಗಲೂ ವಿರೋಧಿಸುತ್ತಲೇ ಬಂದಿದೆ. ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ ಪಕ್ಷ. ತ್ರಿವಳಿ ತಲಾಖ್ ರದ್ದು ಮಾಡಿದ ಬಿಜೆಪಿಯ ಹಲವು ನಿರ್ದಾರಗಳನ್ನು ಕಾಂಗ್ರೆಸ್ ವಿರೋಧಿಸಿದೆ’ ಎಂದು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಹೇಳನಕಾರಿ ಪದ ಬಳಕೆ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ’ ಎಂದು ಇದೇ ವೇಳೆ ಹೇಳಿದರು.</p>.<p>‘ಮೇ 9ರಂದು ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಲಕ್ಷಾಂತರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.</p>.<p>ಭತ್ರಿ ಗ್ರಾಮದಲ್ಲಿ ನಾಲ್ಕೈದು ತಲೆಮಾರುಗಳಿಂದ ಬಡವರು ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈಗ ಒತ್ತುವರಿ ತೆರವು ನೆಪದಲ್ಲಿ ಅವರನ್ನು ಒಕ್ಕಲೆಬ್ಬಿಸಲಾಗಿದೆ. ಅಂಗವಿಕಲರೊಬ್ಬರು ಎಸ್ಸಿ/ಎಸ್ಟಿ ನಿಗಮದಿಂದ ಸಾಲ ಪಡೆದು ನಿರ್ಮಿಸಿಕೊಂಡಿದ್ದ ಹೈನುಗಾರಿಕೆ ಶೆಡ್ ಅನ್ನು ತೆರವು ಮಾಡಲಾಗಿದೆ ಎಂದರು.</p>.<p>ಪಾಲಿಕೆ ವಿರೋಧ ಪಕ್ಷದ ನಾಯಕ ಟಿ.ಶ್ರೀನಿವಾಸ್ ಮೊತ್ಕರ್, ಸದಸ್ಯರಾದ ಜಿ.ಹನುಮಂತ, ಕೆ.ಹನುಮಂತಪ್ಪ, ಬಿಜೆಪಿ ಮುಖಂಡರಾದ ಗುರುಲಿಂಗನಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-25-189550198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>