<p><strong>ಬಳ್ಳಾರಿ:</strong> ಗುತ್ತಿಗೆದಾರರೊಬ್ಬರ ಬಿಲ್ ಬಾಕಿ ಉಳಿಸಿಕೊಂಡಿದ್ದ ಪ್ರಕರಣದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯ ಪೀಠೋಪಕರಣ ವಶಕ್ಕೆ ಪಡೆಯಲು ವಾಣಿಜ್ಯ ನ್ಯಾಯಾಲಯದ ಅಧಿಕಾರಿಗಳು ಶುಕ್ರವಾರ ಮುಂದಾದರು. </p>.<p>ಪಾಲಿಕೆ ಮೇಯರ್ ಮತ್ತು ಅಧಿಕಾರಿಗಳು, ಬಿಲ್ ಪಾವತಿ ಮಾಡಲು ಸಮಯವಕಾಶ ನೀಡುವಂತೆ ಗುತ್ತಿಗೆದಾರರು ಮತ್ತು ಕೋರ್ಟ್ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು. ಇದಕ್ಕೆ ಗುತ್ತಿಗೆದಾರರು ಒಪ್ಪಿದ್ದು, ಪೀಠೋಪಕರಣ ವಶಕ್ಕೆ ಪಡೆಯುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಯಿತು.</p>.<p>2010ರಲ್ಲಿ ಗುತ್ತಿಗೆದಾರ ಶ್ರೀನಿವಾಸರಾಜು ಪಾಲಿಕೆಯಲ್ಲಿ ₹4.85 ಕೋಟಿ ಮೊತ್ತದ ಕಾಮಗಾರಿ ನಡೆಸಿದ್ದರು. ನಗರದ ಹೊರವಲಯದ ವೇಣಿವೀರಾಪುರ ಬಳಿಯ ಡಂಪಿಂಗ್ ಯಾರ್ಡ್ಗೆ 2.85 ಕಿ.ಮೀ. ಉದ್ದದ ರಸ್ತೆ ನಿರ್ಮಿಸುವ ಕಾಮಗಾರಿಯಲ್ಲಿ ಪಾಲಿಕೆಯು ಗುತ್ತಿಗೆದಾರರಿಗೆ ₹3.50 ಕೋಟಿ ಪಾವತಿ ಮಾಡಿತ್ತು. ₹1.35 ಕೋಟಿ ಬಾಕಿ ಉಳಿಸಿಕೊಂಡಿತ್ತು. </p>.<p>ಬಾಕಿ ಹಣಕ್ಕಾಗಿ 2011ರಿಂದ ಪಾಲಿಕೆ ಮತ್ತು ಗುತ್ತಿಗೆದಾರರ ನಡುವೆ ನ್ಯಾಯಾಂಗ ಹೋರಾಟ ನಡೆದಿತ್ತು. ನ್ಯಾಯಾಲಯದ ಸೂಚನೆಯಂತೆ ಪಾಲಿಕೆ ಸ್ವಲ್ಪ ಹಣ ಪಾವತಿ ಮಾಡಿ, ₹90.44 ಲಕ್ಷ ಬಾಕಿ ಉಳಿಸಿಕೊಂಡಿತ್ತು. </p>.<p>ಈ ಹಿನ್ನೆಲೆಯಲ್ಲಿ ವಾಣಿಜ್ಯ ನ್ಯಾಯಾಲಯವು ಪಾಲಿಕೆ ಆಯುಕ್ತರ ಕಚೇರಿ ಪೀಠೋಪಕರಣ ವಶಕ್ಕೆ ಪಡೆಯುವಂತೆ ಇತ್ತೀಚೆಗೆ ಸೂಚನೆ ನೀಡಿತ್ತು. ನ್ಯಾಯಾಲಯದ ಅಧಿಕಾರಿಗಳು ಶುಕ್ರವಾರ ಪಾಲಿಕೆ ಕಚೇರಿಗೆ ಬಂದಿದ್ದರಾದರೂ, ಆಯುಕ್ತರು ಇರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಗುತ್ತಿಗೆದಾರರೊಬ್ಬರ ಬಿಲ್ ಬಾಕಿ ಉಳಿಸಿಕೊಂಡಿದ್ದ ಪ್ರಕರಣದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯ ಪೀಠೋಪಕರಣ ವಶಕ್ಕೆ ಪಡೆಯಲು ವಾಣಿಜ್ಯ ನ್ಯಾಯಾಲಯದ ಅಧಿಕಾರಿಗಳು ಶುಕ್ರವಾರ ಮುಂದಾದರು. </p>.<p>ಪಾಲಿಕೆ ಮೇಯರ್ ಮತ್ತು ಅಧಿಕಾರಿಗಳು, ಬಿಲ್ ಪಾವತಿ ಮಾಡಲು ಸಮಯವಕಾಶ ನೀಡುವಂತೆ ಗುತ್ತಿಗೆದಾರರು ಮತ್ತು ಕೋರ್ಟ್ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು. ಇದಕ್ಕೆ ಗುತ್ತಿಗೆದಾರರು ಒಪ್ಪಿದ್ದು, ಪೀಠೋಪಕರಣ ವಶಕ್ಕೆ ಪಡೆಯುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಯಿತು.</p>.<p>2010ರಲ್ಲಿ ಗುತ್ತಿಗೆದಾರ ಶ್ರೀನಿವಾಸರಾಜು ಪಾಲಿಕೆಯಲ್ಲಿ ₹4.85 ಕೋಟಿ ಮೊತ್ತದ ಕಾಮಗಾರಿ ನಡೆಸಿದ್ದರು. ನಗರದ ಹೊರವಲಯದ ವೇಣಿವೀರಾಪುರ ಬಳಿಯ ಡಂಪಿಂಗ್ ಯಾರ್ಡ್ಗೆ 2.85 ಕಿ.ಮೀ. ಉದ್ದದ ರಸ್ತೆ ನಿರ್ಮಿಸುವ ಕಾಮಗಾರಿಯಲ್ಲಿ ಪಾಲಿಕೆಯು ಗುತ್ತಿಗೆದಾರರಿಗೆ ₹3.50 ಕೋಟಿ ಪಾವತಿ ಮಾಡಿತ್ತು. ₹1.35 ಕೋಟಿ ಬಾಕಿ ಉಳಿಸಿಕೊಂಡಿತ್ತು. </p>.<p>ಬಾಕಿ ಹಣಕ್ಕಾಗಿ 2011ರಿಂದ ಪಾಲಿಕೆ ಮತ್ತು ಗುತ್ತಿಗೆದಾರರ ನಡುವೆ ನ್ಯಾಯಾಂಗ ಹೋರಾಟ ನಡೆದಿತ್ತು. ನ್ಯಾಯಾಲಯದ ಸೂಚನೆಯಂತೆ ಪಾಲಿಕೆ ಸ್ವಲ್ಪ ಹಣ ಪಾವತಿ ಮಾಡಿ, ₹90.44 ಲಕ್ಷ ಬಾಕಿ ಉಳಿಸಿಕೊಂಡಿತ್ತು. </p>.<p>ಈ ಹಿನ್ನೆಲೆಯಲ್ಲಿ ವಾಣಿಜ್ಯ ನ್ಯಾಯಾಲಯವು ಪಾಲಿಕೆ ಆಯುಕ್ತರ ಕಚೇರಿ ಪೀಠೋಪಕರಣ ವಶಕ್ಕೆ ಪಡೆಯುವಂತೆ ಇತ್ತೀಚೆಗೆ ಸೂಚನೆ ನೀಡಿತ್ತು. ನ್ಯಾಯಾಲಯದ ಅಧಿಕಾರಿಗಳು ಶುಕ್ರವಾರ ಪಾಲಿಕೆ ಕಚೇರಿಗೆ ಬಂದಿದ್ದರಾದರೂ, ಆಯುಕ್ತರು ಇರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>