<p>ಬಳ್ಳಾರಿ: ‘ಜಿಲ್ಲೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಅಧಿಕಾರಿಗಳು ಲಂಚಕ್ಕಾಗಿ ಬಡವರನ್ನು ಹಿಂಸಿಸುತ್ತಿದ್ದಾರೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮೀನಳ್ಳಿ ತಾಯಣ್ಣ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು ‘ಮೀನಳ್ಳಿ ಗ್ರಾಮದಲ್ಲಿರುವ ನನ್ನ 2.50 ಎಕರೆ ಜಮೀನಿಗೆ ಇ-ಸ್ವತ್ತು ಮಾಡಿಕೊಳ್ಳಲು ಕಷ್ಟವಾಯಿತು. ಪ್ರತಿ ಎಕರೆಗೆ ₹50 ಸಾವಿರ ಲಂಚ ಕೇಳಲಾಯಿತು. ಇದೇ ಪ್ರಕರಣದಲ್ಲಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರೂ, ಮುಖ್ಯ ರೂವಾರಿ ತಾಲೂಕು ಪಂಚಾಯಿತಿ ಇಒ ವಿರುದ್ಧ ಯಾವುದೇ ಕ್ರಮವಾಗಿಲ್ಲ’ ಎಂದು ದೂರಿದರು.</p>.<p>‘ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಕಣ್ಣುಮುಚ್ಚಿ ಕುಳಿತಿದ್ದಾರೆಯೇ. ತಾಲ್ಲೂಕು ಪಂಚಾಯಿತಿ ಇ.ಒ. ಶ್ರೀಧರ್ ಮತ್ತು ಆಡಳಿತಾಧಿಕಾರಿ ಗಿರೀಶ್ ಕುಮಾರ್ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಿ, ಬಂಧಿಸಬೇಕು. ಇಲ್ಲವಾದರೆ ತಾಲ್ಲೂಕು ಪಂಚಾಯಿತಿ ಎದುರು ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-25-2025572885</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ‘ಜಿಲ್ಲೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಅಧಿಕಾರಿಗಳು ಲಂಚಕ್ಕಾಗಿ ಬಡವರನ್ನು ಹಿಂಸಿಸುತ್ತಿದ್ದಾರೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮೀನಳ್ಳಿ ತಾಯಣ್ಣ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು ‘ಮೀನಳ್ಳಿ ಗ್ರಾಮದಲ್ಲಿರುವ ನನ್ನ 2.50 ಎಕರೆ ಜಮೀನಿಗೆ ಇ-ಸ್ವತ್ತು ಮಾಡಿಕೊಳ್ಳಲು ಕಷ್ಟವಾಯಿತು. ಪ್ರತಿ ಎಕರೆಗೆ ₹50 ಸಾವಿರ ಲಂಚ ಕೇಳಲಾಯಿತು. ಇದೇ ಪ್ರಕರಣದಲ್ಲಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರೂ, ಮುಖ್ಯ ರೂವಾರಿ ತಾಲೂಕು ಪಂಚಾಯಿತಿ ಇಒ ವಿರುದ್ಧ ಯಾವುದೇ ಕ್ರಮವಾಗಿಲ್ಲ’ ಎಂದು ದೂರಿದರು.</p>.<p>‘ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಕಣ್ಣುಮುಚ್ಚಿ ಕುಳಿತಿದ್ದಾರೆಯೇ. ತಾಲ್ಲೂಕು ಪಂಚಾಯಿತಿ ಇ.ಒ. ಶ್ರೀಧರ್ ಮತ್ತು ಆಡಳಿತಾಧಿಕಾರಿ ಗಿರೀಶ್ ಕುಮಾರ್ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಿ, ಬಂಧಿಸಬೇಕು. ಇಲ್ಲವಾದರೆ ತಾಲ್ಲೂಕು ಪಂಚಾಯಿತಿ ಎದುರು ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-25-2025572885</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>