<p>ಬಳ್ಳಾರಿ: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಓ) ಬಳ್ಳಾರಿ ಪ್ರಾದೇಶಿಕ ಕಚೇರಿಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಮೇ 13 ರಂದು ಪಿಂಚಣಿ ಅದಾಲತ್ ಆಯೋಜಿಸಲಾಗಿದೆ. ಕಾರ್ಯಕ್ರಮವು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ನಡೆಯಲಿದೆ.</p>.<p>ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಅಹವಾಲುಗಳನ್ನು ಮೇ 10ರೊಳಗಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಸಲ್ಲಿಸಬಹುದು. ಅರ್ಜಿಯಲ್ಲಿ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ ಹಾಗೂ ಕುಂದುಕೊರತೆಯ ವಿವರಗಳನ್ನು ನಮೂದಿಸಬೇಕು. ಲಕೋಟೆಯ ಮೇಲೆ “ಪಿಂಚಣಿ ಅದಾಲತ್” ಎಂದು ಉಲ್ಲೇಖಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗಾಗಿ 08392-268943 ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವಿ. ಪ್ರವೀಣ್ ತಿಳಿಸಿದ್ದಾರೆ.</p>.<p>ಕುಂದಗೋಳ: ‘ಪಟ್ಟಣದ ಪಂಚಗ್ರಹ ಹಿರೇಮಠದ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯರು ಹಾಗೂ ರಂಭಾಪುರಿ ಸ್ವಾಮೀಜಿ ಮೇ 8 ರಂದು ಮಠಕ್ಕೆ ಭೇಟಿ ನೀಡಿ ಸಭೆ ನಡೆಸಲಿದ್ದಾರೆ’ ಎಂದು ಮಾಜಿ ಶಾಸಕ ಎಂ.ಎಸ್.ಅಕ್ಕಿ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-251969927</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಓ) ಬಳ್ಳಾರಿ ಪ್ರಾದೇಶಿಕ ಕಚೇರಿಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಮೇ 13 ರಂದು ಪಿಂಚಣಿ ಅದಾಲತ್ ಆಯೋಜಿಸಲಾಗಿದೆ. ಕಾರ್ಯಕ್ರಮವು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ನಡೆಯಲಿದೆ.</p>.<p>ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಅಹವಾಲುಗಳನ್ನು ಮೇ 10ರೊಳಗಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಸಲ್ಲಿಸಬಹುದು. ಅರ್ಜಿಯಲ್ಲಿ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ ಹಾಗೂ ಕುಂದುಕೊರತೆಯ ವಿವರಗಳನ್ನು ನಮೂದಿಸಬೇಕು. ಲಕೋಟೆಯ ಮೇಲೆ “ಪಿಂಚಣಿ ಅದಾಲತ್” ಎಂದು ಉಲ್ಲೇಖಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗಾಗಿ 08392-268943 ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವಿ. ಪ್ರವೀಣ್ ತಿಳಿಸಿದ್ದಾರೆ.</p>.<p>ಕುಂದಗೋಳ: ‘ಪಟ್ಟಣದ ಪಂಚಗ್ರಹ ಹಿರೇಮಠದ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯರು ಹಾಗೂ ರಂಭಾಪುರಿ ಸ್ವಾಮೀಜಿ ಮೇ 8 ರಂದು ಮಠಕ್ಕೆ ಭೇಟಿ ನೀಡಿ ಸಭೆ ನಡೆಸಲಿದ್ದಾರೆ’ ಎಂದು ಮಾಜಿ ಶಾಸಕ ಎಂ.ಎಸ್.ಅಕ್ಕಿ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-251969927</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>