<p><strong>ಕುಡತಿನಿ</strong> (ಬಳ್ಳಾರಿ ಜಿಲ್ಲೆ): ಕೈಗಾರಿಕೆ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡ ಕೃಷಿ ಜಮೀನನ್ನು ಅನ್ಯ ಕಂಪನಿಗೆ ನೀಡಿದ್ದನ್ನು ಖಂಡಿಸಿ ನೂರಾರು ಭೂಸಂತ್ರಸ್ತ ರೈತರು ಶನಿವಾರ, ಲಕ್ಷ್ಮಿಮಿತ್ತಲ್ ಕಂಪನಿಯ ಜಮೀನಿಗೆ ಎತ್ತಿನ ಗಾಡಿಗಳ ಮೂಲಕ ನುಗ್ಗಲು ಯತ್ನಿಸಿದರು. ಆಗ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ, ನೂಕಾಟ ಉಂಟಾಯಿತು.</p>.<p>ಪಟ್ಟಣದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ರೈತರು, ಬೇರೆ ಮಾರ್ಗದಿಂದ ಜಮೀನಿಗೆ ನುಗ್ಗಲು ಯತ್ನಿಸಿದಾಗ ತಡೆಯಲು ಪೊಲೀಸರು ಹರಸಾಹಸಪಟ್ಟರು. ಈ ಸಂದರ್ಭದಲ್ಲಿ ಎತ್ತಿನಗಾಡಿಯೊಂದು ರಸ್ತೆಯಲ್ಲಿ ಬಿತ್ತು. ಮತ್ತೊಂದು ಎತ್ತಿನ ಗಾಡಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಹೊರಳಿತು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಯು. ಬಸವರಾಜ ಅವರು, ‘ಲಕ್ಷ್ಮಿ ಮಿತ್ತಲ್ ಕಂಪನಿ ಮಾಲೀಕತ್ವದ ಕೈಗಾರಿಕೆ ಸ್ಥಾಪಿಸಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯವರು ಸುಮಾರು 5 ಸಾವಿರ ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದರು. ಅದರಲ್ಲಿ 800 ಎಕರೆ ಜಮೀನಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸದೆ ಜಿಂದಾಲ್ ಕಂಪನಿಗೆ ಭೂಮಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿರುವುದು ಖಂಡನೀಯ’ ಎಂದರು.</p>.<p>ರೈತರನ್ನು ಪೊಲೀಸರು ವಶಕ್ಕೆ ಪಡೆದರು. ವಿವಿಧ ಸಂಘಟನೆಗಳ ಮುಖಂಡರಾದ ಸತ್ಯಬಾಬು, ಜಂಗ್ಲಿಸಾಬ್, ಎಂ. ತಿಪ್ಪೇಸ್ವಾಮಿ, ವಿ. ರಾಜಶೇಖರ್, ವಿ.ಎಸ್. ವೆಂಕಟರಮಣ ಬಾಬು, ತಿಮ್ಮಪ್ಪ, ಬಾವಿ ಶಿವಕುಮಾರ್, ಸಿದ್ದಪ್ಪ, ಮಲ್ಲಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-51-732943034</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಡತಿನಿ</strong> (ಬಳ್ಳಾರಿ ಜಿಲ್ಲೆ): ಕೈಗಾರಿಕೆ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡ ಕೃಷಿ ಜಮೀನನ್ನು ಅನ್ಯ ಕಂಪನಿಗೆ ನೀಡಿದ್ದನ್ನು ಖಂಡಿಸಿ ನೂರಾರು ಭೂಸಂತ್ರಸ್ತ ರೈತರು ಶನಿವಾರ, ಲಕ್ಷ್ಮಿಮಿತ್ತಲ್ ಕಂಪನಿಯ ಜಮೀನಿಗೆ ಎತ್ತಿನ ಗಾಡಿಗಳ ಮೂಲಕ ನುಗ್ಗಲು ಯತ್ನಿಸಿದರು. ಆಗ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ, ನೂಕಾಟ ಉಂಟಾಯಿತು.</p>.<p>ಪಟ್ಟಣದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ರೈತರು, ಬೇರೆ ಮಾರ್ಗದಿಂದ ಜಮೀನಿಗೆ ನುಗ್ಗಲು ಯತ್ನಿಸಿದಾಗ ತಡೆಯಲು ಪೊಲೀಸರು ಹರಸಾಹಸಪಟ್ಟರು. ಈ ಸಂದರ್ಭದಲ್ಲಿ ಎತ್ತಿನಗಾಡಿಯೊಂದು ರಸ್ತೆಯಲ್ಲಿ ಬಿತ್ತು. ಮತ್ತೊಂದು ಎತ್ತಿನ ಗಾಡಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಹೊರಳಿತು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಯು. ಬಸವರಾಜ ಅವರು, ‘ಲಕ್ಷ್ಮಿ ಮಿತ್ತಲ್ ಕಂಪನಿ ಮಾಲೀಕತ್ವದ ಕೈಗಾರಿಕೆ ಸ್ಥಾಪಿಸಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯವರು ಸುಮಾರು 5 ಸಾವಿರ ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದರು. ಅದರಲ್ಲಿ 800 ಎಕರೆ ಜಮೀನಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸದೆ ಜಿಂದಾಲ್ ಕಂಪನಿಗೆ ಭೂಮಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿರುವುದು ಖಂಡನೀಯ’ ಎಂದರು.</p>.<p>ರೈತರನ್ನು ಪೊಲೀಸರು ವಶಕ್ಕೆ ಪಡೆದರು. ವಿವಿಧ ಸಂಘಟನೆಗಳ ಮುಖಂಡರಾದ ಸತ್ಯಬಾಬು, ಜಂಗ್ಲಿಸಾಬ್, ಎಂ. ತಿಪ್ಪೇಸ್ವಾಮಿ, ವಿ. ರಾಜಶೇಖರ್, ವಿ.ಎಸ್. ವೆಂಕಟರಮಣ ಬಾಬು, ತಿಮ್ಮಪ್ಪ, ಬಾವಿ ಶಿವಕುಮಾರ್, ಸಿದ್ದಪ್ಪ, ಮಲ್ಲಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-51-732943034</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>