<p><strong>ಬಳ್ಳಾರಿ:</strong> ಕೇಂದ್ರ ಸರ್ಕಾರವು ತೈಲ ಬೆಲೆಗಳನ್ನು ಹೆಚ್ಚಿಸಿರುವುದನ್ನು ಖಂಡಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ವತಿಯಿಂದ ಬುಧವಾರ ನಗರದ ಹಳೇ ತಾಲ್ಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಲೀಟರಿಗೆ ಸುಮಾರು ₹7-8 ರಷ್ಟು ಏರಿಸಿರುವುದು ಜನಸಾಮಾನ್ಯರ ಮೇಲೆ ಹೊರೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸೆಕ್ರೆಟೇರಿಯಟ್ ಸದಸ್ಯೆ ಡಿ. ನಾಗಲಕ್ಷ್ಮಿ ಅವರು, ‘ಇಂಧನ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿ ಹಣದುಬ್ಬರ ಉಂಟಾಗುತ್ತಿದೆ. ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವಿದ್ದರೂ, ಕೇಂದ್ರದ ಬಿಜೆಪಿ ಸರ್ಕಾರವು ಅಮೆರಿಕದ ಒತ್ತಡಕ್ಕೆ ಮಣಿದು ಆ ಅವಕಾಶವನ್ನು ಕೈಚೆಲ್ಲಿದೆ. ಪೆಟ್ರೋಲ್ ಬೆಲೆಯಲ್ಲಿ ಅರ್ಧದಷ್ಟು ತೆರಿಗೆಗಳೇ ಇವೆ’ ಎಂದು ಅವರು ದೂರಿದರು.</p>.<p>ಜಿಲ್ಲಾ ಸಮಿತಿ ಸದಸ್ಯ ಆರ್. ಸೋಮಶೇಖರ ಗೌಡ ಮಾತನಾಡಿ, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆಯಾದರೂ ಅದರ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ. ಕಾಂಗ್ರೆಸ್ ಹಾದಿಯಲ್ಲೇ ಬಿಜೆಪಿ ಸಾಗುತ್ತಿದ್ದು. ಎರಡೂ ಪಕ್ಷಗಳು ಕಾರ್ಪೋರೇಟ್ ಕಂಪನಿಗಳ ಏಜೆಂಟ್ ಆಗಿ ಕೆಲಸ ಮಾಡುತ್ತಿವೆ’ ಎಂದು ಟೀಕಿಸಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಬೇಕು.ತೈಲ ಕಂಪನಿಗಳ ಲಾಭಕ್ಕಾಗಿ ಅನುಸರಿಸುತ್ತಿರುವ ಜಾಗತಿಕ ದರ ನಿಗದಿ ನೀತಿಯನ್ನು ಕೈಬಿಡಬೇಕು. ಯುದ್ಧ ನಿಲ್ಲಿಸುವಂತೆ ಅಮೆರಿಕದ ಮೇಲೆ ಭಾರತ ಒತ್ತಡ ಹೇರಬೇಕು ಎಂದು ಪ್ರತಿಭಟನೆ ವೇಳೆ ಒತ್ತಾಯಿಸಲಾಯಿತು.</p>.<p>ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಡಾ. ಪ್ರಮೋದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಟನೆಯಲ್ಲಿ ಮಂಜುಳಾ, ಎ. ದೇವದಾಸ್, ಶಾಂತಾ, ಗೋವಿಂದ್, ಈಶ್ವರಿ, ನಿವೃತ್ತ ಉಪನ್ಯಾಸಕ ನರಸಣ್ಣ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-25-69313008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕೇಂದ್ರ ಸರ್ಕಾರವು ತೈಲ ಬೆಲೆಗಳನ್ನು ಹೆಚ್ಚಿಸಿರುವುದನ್ನು ಖಂಡಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ವತಿಯಿಂದ ಬುಧವಾರ ನಗರದ ಹಳೇ ತಾಲ್ಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಲೀಟರಿಗೆ ಸುಮಾರು ₹7-8 ರಷ್ಟು ಏರಿಸಿರುವುದು ಜನಸಾಮಾನ್ಯರ ಮೇಲೆ ಹೊರೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸೆಕ್ರೆಟೇರಿಯಟ್ ಸದಸ್ಯೆ ಡಿ. ನಾಗಲಕ್ಷ್ಮಿ ಅವರು, ‘ಇಂಧನ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿ ಹಣದುಬ್ಬರ ಉಂಟಾಗುತ್ತಿದೆ. ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವಿದ್ದರೂ, ಕೇಂದ್ರದ ಬಿಜೆಪಿ ಸರ್ಕಾರವು ಅಮೆರಿಕದ ಒತ್ತಡಕ್ಕೆ ಮಣಿದು ಆ ಅವಕಾಶವನ್ನು ಕೈಚೆಲ್ಲಿದೆ. ಪೆಟ್ರೋಲ್ ಬೆಲೆಯಲ್ಲಿ ಅರ್ಧದಷ್ಟು ತೆರಿಗೆಗಳೇ ಇವೆ’ ಎಂದು ಅವರು ದೂರಿದರು.</p>.<p>ಜಿಲ್ಲಾ ಸಮಿತಿ ಸದಸ್ಯ ಆರ್. ಸೋಮಶೇಖರ ಗೌಡ ಮಾತನಾಡಿ, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆಯಾದರೂ ಅದರ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ. ಕಾಂಗ್ರೆಸ್ ಹಾದಿಯಲ್ಲೇ ಬಿಜೆಪಿ ಸಾಗುತ್ತಿದ್ದು. ಎರಡೂ ಪಕ್ಷಗಳು ಕಾರ್ಪೋರೇಟ್ ಕಂಪನಿಗಳ ಏಜೆಂಟ್ ಆಗಿ ಕೆಲಸ ಮಾಡುತ್ತಿವೆ’ ಎಂದು ಟೀಕಿಸಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಬೇಕು.ತೈಲ ಕಂಪನಿಗಳ ಲಾಭಕ್ಕಾಗಿ ಅನುಸರಿಸುತ್ತಿರುವ ಜಾಗತಿಕ ದರ ನಿಗದಿ ನೀತಿಯನ್ನು ಕೈಬಿಡಬೇಕು. ಯುದ್ಧ ನಿಲ್ಲಿಸುವಂತೆ ಅಮೆರಿಕದ ಮೇಲೆ ಭಾರತ ಒತ್ತಡ ಹೇರಬೇಕು ಎಂದು ಪ್ರತಿಭಟನೆ ವೇಳೆ ಒತ್ತಾಯಿಸಲಾಯಿತು.</p>.<p>ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಡಾ. ಪ್ರಮೋದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಟನೆಯಲ್ಲಿ ಮಂಜುಳಾ, ಎ. ದೇವದಾಸ್, ಶಾಂತಾ, ಗೋವಿಂದ್, ಈಶ್ವರಿ, ನಿವೃತ್ತ ಉಪನ್ಯಾಸಕ ನರಸಣ್ಣ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-25-69313008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>