<p>ಬಳ್ಳಾರಿ: ರಾಜ್ಯ ಸರ್ಕಾರ ತಕ್ಷಣವೇ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕೆಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.</p>.<p>ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಸಂಚಾಲಕ ಜಗದೀಶ್ ನೇಮಕಲ್ ಮಾತನಾಡಿ, ‘ನಿರಂತರವಾಗಿ ಮನವಿ ಪತ್ರ ಸಲ್ಲಿಸಿ, ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುತ್ತಾ ಕಾಲಹರಣ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರದ ವಿಳಂಬ ಧೋರಣೆಯಿಂದ ನಿರಾಸೆ ಹೆಚ್ಚುತ್ತಿದೆ. ಶೀಘ್ರವೇ ನೇಮಕಾತಿ ಆರಂಭಿಸಲಾಗುವುದೆಂದು ಸರ್ಕಾರ ಹೇಳುತ್ತಿದೆಯಾದರೂ, ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನಾಗರಿಕ ಸೇವಾ ಸುಧಾರಣೆಗಳಿಗೆ ಸಂಬಂಧಿಸಿದ ಪಿ.ಸಿ. ಹೋಟ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಬೇಕು. ಕೆಪಿಎಸ್ಸಿಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಪಂಪಾಪತಿ, ಗಾದಿಲಿಂಗ ವೆಂಕಟೇಶ್, ದಾದು, ಬಸವರಾಜ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-25-1149320082</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ರಾಜ್ಯ ಸರ್ಕಾರ ತಕ್ಷಣವೇ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕೆಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.</p>.<p>ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಸಂಚಾಲಕ ಜಗದೀಶ್ ನೇಮಕಲ್ ಮಾತನಾಡಿ, ‘ನಿರಂತರವಾಗಿ ಮನವಿ ಪತ್ರ ಸಲ್ಲಿಸಿ, ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುತ್ತಾ ಕಾಲಹರಣ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರದ ವಿಳಂಬ ಧೋರಣೆಯಿಂದ ನಿರಾಸೆ ಹೆಚ್ಚುತ್ತಿದೆ. ಶೀಘ್ರವೇ ನೇಮಕಾತಿ ಆರಂಭಿಸಲಾಗುವುದೆಂದು ಸರ್ಕಾರ ಹೇಳುತ್ತಿದೆಯಾದರೂ, ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನಾಗರಿಕ ಸೇವಾ ಸುಧಾರಣೆಗಳಿಗೆ ಸಂಬಂಧಿಸಿದ ಪಿ.ಸಿ. ಹೋಟ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಬೇಕು. ಕೆಪಿಎಸ್ಸಿಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಪಂಪಾಪತಿ, ಗಾದಿಲಿಂಗ ವೆಂಕಟೇಶ್, ದಾದು, ಬಸವರಾಜ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-25-1149320082</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>