<p><strong>ಬಳ್ಳಾರಿ</strong>: ನಗರದಲ್ಲಿ ಒತ್ತುವರಿಯಾಗಿದ್ದ ಮತ್ತು ಅನ್ಯರ ಪಾಲಾಗಿದ್ದ ಸರ್ಕಾರಿ ಭೂಮಿ ವಶಕ್ಕೆ ಪಡೆಯುವ ಈ ವರೆಗಿನ ಕಾರ್ಯಾಚರಣೆಯಲ್ಲಿ ಬಳ್ಳಾರಿ ಜಿಲ್ಲಾಡಳಿತಕ್ಕೆ ಒಟ್ಟು 88.76 ಎಕರೆ ಜಮೀನು ಸಿಕ್ಕಿದೆ. ಮಾರ್ಗಸೂಚಿ ಬೆಲೆ ಆಧಾರದಲ್ಲಿ ಇದರ ಮೌಲ್ಯ ₹383.09 ಕೋಟಿ ಎಂದು ಅಂದಾಜಿಸಲಾಗಿದೆ.</p>.<p>ಸರ್ಕಾರಿ ಭೂಮಿ ರಕ್ಷಣೆಗೆ ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಮಾರ್ಚ್ 6ರಂದು ವಿಶೇಷ ಸಮಿತಿ ರಚಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಮಿತಿಯು, ಏಪ್ರಿಲ್ 10ರಂದು ಕಾರ್ಯಾಚರಣೆ ಆರಂಭಿಸಿತ್ತು. ಮೇ 13ರ ವರೆಗೆ ಒಟ್ಟು ಆರು ಕಾರ್ಯಾಚರಣೆಗಳನ್ನು ಸಮಿತಿ ನಡೆಸಿದೆ.</p>.<p><strong>ಆರಂಭ ಎಲ್ಲಿಂದ:</strong> ನಗರದ ಕಬರಸ್ತಾನ ಜಮೀನು ಅಕ್ರಮ ಪರಬಾರೆ ವಿವಾದವು ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳ ರಕ್ಷಣೆಗೆ ನಾಂದಿ ಹಾಡಿತು. ಜಿಲ್ಲೆಯ ಸರ್ಕಾರಿ ಆಸ್ತಿ ರಕ್ಷಣೆಗೆ ಸಮಿತಿ ರಚನೆ ಮಾಡುವಂತೆ ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್, ಗ್ರಾಮಾಂತರ ಶಾಸಕ ನಾಗೇಂದ್ರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರು.</p>.<p>ಮುಂದೇನು?: ಸದ್ಯ ವಶಕ್ಕೆ ಪಡೆದ ಭೂಮಿಯನ್ನು ವಿವಿಧ ಸರ್ಕಾರಿ ಯೋಜನೆಗಳಿಗೆ ನೀಡಲು ನಿರ್ಧರಿಸಲಾಗಿದೆ. ನವೋದಯ, ವಸತಿ ಶಾಲೆ, ಐಟಿ ಪಾರ್ಕ್, ಸರ್ಕಾರಿ ನೌಕರರ ವಸತಿ ನಿಲಯಗಳನ್ನು ನಿರ್ಮಿಸಲು ಬಳಸಲು ಜಿಲ್ಲಾಡಳಿತ ನಿರ್ಧರಿಸಿದೆ.</p>.<p><strong>ಇನ್ನಷ್ಟು ಕಾರ್ಯಚರಣೆ?:</strong> ಬಳ್ಳಾರಿ ನಗರವೂ ಸೇರಿ ಜಿಲ್ಲೆಯಾದ್ಯಂತ ಇನ್ನೂ 80 ಪ್ರಕರಣಗಳನ್ನು ಜಿಲ್ಲಾಡಳಿತ ಗುರುತು ಮಾಡಿಕೊಂಡಿದ್ದು, ಹಂತ ಹಂತವಾಗಿ ಎಲ್ಲ ಆಸ್ತಿಗಳನ್ನು ವಶ್ಕಕೆ ಪಡೆಯಲಿದೆ ಎಂದು ಗೊತ್ತಾಗಿದೆ.</p>.<div><blockquote>ಇನ್ನೂ ದೊಡ್ಡ ಪ್ರಮಾಣದ ಭೂಮಿಗಳನ್ನು ವಶಕ್ಕೆ ಪಡೆಯಬೇಕಿದೆ. ಎಲ್ಲ ಪ್ರಕರಣಗಳ ಮೇಲೆ ಜಿಲ್ಲಾಡಳಿತ ಅಧ್ಯಯನ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಾಚರಣೆ ನಡೆಯಲಿದೆ </blockquote><span class="attribution">ನಾಗೇಂದ್ರ ಪ್ರಸಾದ್, ಜಿಲ್ಲಾಧಿಕಾರಿ</span></div>.<div><blockquote>ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಇಷ್ಟು ನಿರಂತರವಾಗಿ ಒತ್ತುವರಿ ತೆರವು ನಡೆದ ಉದಾಹರಣೆ ಇಲ್ಲ. ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಮೈಲುಗಲ್ಲು </blockquote><span class="attribution">ಮೊಹಮದ್ ಝುಬೇರ, ಹೆಚ್ಚುವರಿ ಜಿಲ್ಲಾಧಿಕಾರಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-25-764497956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ನಗರದಲ್ಲಿ ಒತ್ತುವರಿಯಾಗಿದ್ದ ಮತ್ತು ಅನ್ಯರ ಪಾಲಾಗಿದ್ದ ಸರ್ಕಾರಿ ಭೂಮಿ ವಶಕ್ಕೆ ಪಡೆಯುವ ಈ ವರೆಗಿನ ಕಾರ್ಯಾಚರಣೆಯಲ್ಲಿ ಬಳ್ಳಾರಿ ಜಿಲ್ಲಾಡಳಿತಕ್ಕೆ ಒಟ್ಟು 88.76 ಎಕರೆ ಜಮೀನು ಸಿಕ್ಕಿದೆ. ಮಾರ್ಗಸೂಚಿ ಬೆಲೆ ಆಧಾರದಲ್ಲಿ ಇದರ ಮೌಲ್ಯ ₹383.09 ಕೋಟಿ ಎಂದು ಅಂದಾಜಿಸಲಾಗಿದೆ.</p>.<p>ಸರ್ಕಾರಿ ಭೂಮಿ ರಕ್ಷಣೆಗೆ ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಮಾರ್ಚ್ 6ರಂದು ವಿಶೇಷ ಸಮಿತಿ ರಚಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಮಿತಿಯು, ಏಪ್ರಿಲ್ 10ರಂದು ಕಾರ್ಯಾಚರಣೆ ಆರಂಭಿಸಿತ್ತು. ಮೇ 13ರ ವರೆಗೆ ಒಟ್ಟು ಆರು ಕಾರ್ಯಾಚರಣೆಗಳನ್ನು ಸಮಿತಿ ನಡೆಸಿದೆ.</p>.<p><strong>ಆರಂಭ ಎಲ್ಲಿಂದ:</strong> ನಗರದ ಕಬರಸ್ತಾನ ಜಮೀನು ಅಕ್ರಮ ಪರಬಾರೆ ವಿವಾದವು ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳ ರಕ್ಷಣೆಗೆ ನಾಂದಿ ಹಾಡಿತು. ಜಿಲ್ಲೆಯ ಸರ್ಕಾರಿ ಆಸ್ತಿ ರಕ್ಷಣೆಗೆ ಸಮಿತಿ ರಚನೆ ಮಾಡುವಂತೆ ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್, ಗ್ರಾಮಾಂತರ ಶಾಸಕ ನಾಗೇಂದ್ರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರು.</p>.<p>ಮುಂದೇನು?: ಸದ್ಯ ವಶಕ್ಕೆ ಪಡೆದ ಭೂಮಿಯನ್ನು ವಿವಿಧ ಸರ್ಕಾರಿ ಯೋಜನೆಗಳಿಗೆ ನೀಡಲು ನಿರ್ಧರಿಸಲಾಗಿದೆ. ನವೋದಯ, ವಸತಿ ಶಾಲೆ, ಐಟಿ ಪಾರ್ಕ್, ಸರ್ಕಾರಿ ನೌಕರರ ವಸತಿ ನಿಲಯಗಳನ್ನು ನಿರ್ಮಿಸಲು ಬಳಸಲು ಜಿಲ್ಲಾಡಳಿತ ನಿರ್ಧರಿಸಿದೆ.</p>.<p><strong>ಇನ್ನಷ್ಟು ಕಾರ್ಯಚರಣೆ?:</strong> ಬಳ್ಳಾರಿ ನಗರವೂ ಸೇರಿ ಜಿಲ್ಲೆಯಾದ್ಯಂತ ಇನ್ನೂ 80 ಪ್ರಕರಣಗಳನ್ನು ಜಿಲ್ಲಾಡಳಿತ ಗುರುತು ಮಾಡಿಕೊಂಡಿದ್ದು, ಹಂತ ಹಂತವಾಗಿ ಎಲ್ಲ ಆಸ್ತಿಗಳನ್ನು ವಶ್ಕಕೆ ಪಡೆಯಲಿದೆ ಎಂದು ಗೊತ್ತಾಗಿದೆ.</p>.<div><blockquote>ಇನ್ನೂ ದೊಡ್ಡ ಪ್ರಮಾಣದ ಭೂಮಿಗಳನ್ನು ವಶಕ್ಕೆ ಪಡೆಯಬೇಕಿದೆ. ಎಲ್ಲ ಪ್ರಕರಣಗಳ ಮೇಲೆ ಜಿಲ್ಲಾಡಳಿತ ಅಧ್ಯಯನ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಾಚರಣೆ ನಡೆಯಲಿದೆ </blockquote><span class="attribution">ನಾಗೇಂದ್ರ ಪ್ರಸಾದ್, ಜಿಲ್ಲಾಧಿಕಾರಿ</span></div>.<div><blockquote>ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಇಷ್ಟು ನಿರಂತರವಾಗಿ ಒತ್ತುವರಿ ತೆರವು ನಡೆದ ಉದಾಹರಣೆ ಇಲ್ಲ. ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಮೈಲುಗಲ್ಲು </blockquote><span class="attribution">ಮೊಹಮದ್ ಝುಬೇರ, ಹೆಚ್ಚುವರಿ ಜಿಲ್ಲಾಧಿಕಾರಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-25-764497956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>