<p><strong>ಹರಪನಹಳ್ಳಿ: </strong>ಮನುಷ್ಯನ ಆಕಾರಕ್ಕೆ ಬಟ್ಟೆಗಳನ್ನು ತಯಾರಿಸಿ ಕೊಡುವ ನೇಕಾರರ ವೃತ್ತಿ ದೇವರಿಗೆ ಸಮನಾದದ್ದು ಎಂದು ಹರಪನಹಳ್ಳಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಪ್ನ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಬಸಮ್ಮ ಕಲಾಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೈಮಗ್ಗ ಉದ್ಯಮವಾಗಿ ಮಾರ್ಪಟ್ಟಿದೆ. ಗ್ರಾಮೀಣರ ಆರ್ಥಿಕತೆ ಹೆಚ್ಚಿಸುವಲ್ಲಿ ಕೈಮಗ್ಗದ ಪಾತ್ರ ಬಹುಮುಖ್ಯವಾಗಿದೆ. ಕೈಮಗ್ಗದ ಉತ್ಪನ್ನಗಳನ್ನು ಭಾರತೀಯರು ಹೆಚ್ಚೆಚ್ಚು ಖರೀದಿಸಬೇಕು ಎಂದು ಮನವಿ ಮಾಡಿದರು.</p>.<p>ದೇಸಿ ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿ ಬಳಸುವ ಮೂಲಕ ಭಾರತದ ಸಾಂಪ್ರದಾಯಿಕ ಕೈಮಗ್ಗದ ಉತ್ಪನ್ನಗಳನ್ನು ಖರೀದಿಸಿ ನೇಕಾರರಿಗೆ ಆರ್ಥಿಕ ಬಲ ತುಂಬಬೇಕು ಎಂದರು.</p>.<p>ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಖಾದಿ ಗ್ರಾಮೋದ್ಯೋಗದಲ್ಲಿ ವಿವಿಧ ಉತ್ಪನ್ನ ಖರೀದಿಸುವ ಮೂಲಕ ಕೈಮಗ್ಗ ದಿನ ಆಚರಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಗರಾಜ, ಉಪಾಧ್ಯಕ್ಷೆ ಉಮಾದೇವಿ, ಜಾನಕಮ್ಮ, ಕಲ್ಪನಾ, ಖಜಾಂಚಿ ಕೆ.ಎಂ. ಕೊಟ್ರಮ್ಮ, ಪದ್ಮಾವತಿ, ಶೀಲಾ, ರೇಣುಕಮ್ಮ, ಮಂಜುಳಾ ಕೆ. ಮಂಜುಳಾ ಮಡಿವಾಳರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ: </strong>ಮನುಷ್ಯನ ಆಕಾರಕ್ಕೆ ಬಟ್ಟೆಗಳನ್ನು ತಯಾರಿಸಿ ಕೊಡುವ ನೇಕಾರರ ವೃತ್ತಿ ದೇವರಿಗೆ ಸಮನಾದದ್ದು ಎಂದು ಹರಪನಹಳ್ಳಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಪ್ನ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಬಸಮ್ಮ ಕಲಾಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೈಮಗ್ಗ ಉದ್ಯಮವಾಗಿ ಮಾರ್ಪಟ್ಟಿದೆ. ಗ್ರಾಮೀಣರ ಆರ್ಥಿಕತೆ ಹೆಚ್ಚಿಸುವಲ್ಲಿ ಕೈಮಗ್ಗದ ಪಾತ್ರ ಬಹುಮುಖ್ಯವಾಗಿದೆ. ಕೈಮಗ್ಗದ ಉತ್ಪನ್ನಗಳನ್ನು ಭಾರತೀಯರು ಹೆಚ್ಚೆಚ್ಚು ಖರೀದಿಸಬೇಕು ಎಂದು ಮನವಿ ಮಾಡಿದರು.</p>.<p>ದೇಸಿ ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿ ಬಳಸುವ ಮೂಲಕ ಭಾರತದ ಸಾಂಪ್ರದಾಯಿಕ ಕೈಮಗ್ಗದ ಉತ್ಪನ್ನಗಳನ್ನು ಖರೀದಿಸಿ ನೇಕಾರರಿಗೆ ಆರ್ಥಿಕ ಬಲ ತುಂಬಬೇಕು ಎಂದರು.</p>.<p>ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಖಾದಿ ಗ್ರಾಮೋದ್ಯೋಗದಲ್ಲಿ ವಿವಿಧ ಉತ್ಪನ್ನ ಖರೀದಿಸುವ ಮೂಲಕ ಕೈಮಗ್ಗ ದಿನ ಆಚರಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಗರಾಜ, ಉಪಾಧ್ಯಕ್ಷೆ ಉಮಾದೇವಿ, ಜಾನಕಮ್ಮ, ಕಲ್ಪನಾ, ಖಜಾಂಚಿ ಕೆ.ಎಂ. ಕೊಟ್ರಮ್ಮ, ಪದ್ಮಾವತಿ, ಶೀಲಾ, ರೇಣುಕಮ್ಮ, ಮಂಜುಳಾ ಕೆ. ಮಂಜುಳಾ ಮಡಿವಾಳರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>