<p>ಬಳ್ಳಾರಿ: ಬಳ್ಳಾರಿ ನಗರದಲ್ಲಿ ಮಂಗಳವಾರ ಒಂದೇ ದಿನ 6.01 ಸೆಂಟಿಮೀಟರ್ ಮಳೆ ಸುರಿದಿರುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬಳ್ಳಾರಿ ಘಟಕ ಮಾಹಿತಿ ನೀಡಿದೆ.</p>.<p>ಬಳ್ಳಾರಿ ತಾಲ್ಲೂಕಿನಲ್ಲಿ 1.93, ಸಂಡೂರು– 0.2, ಕಂಪ್ಲಿ – 0.15, ಸಿರುಗುಪ್ಪ – 0.1, ಕುರುಗೋಡು –0.18 ಸೆಂ.ಮೀ ಮಳೆಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಸರಾಸರಿ 1.96 ಸೆಂ.ಮೀ ವರ್ಷಧಾರೆಯಾಗಿದೆ ಎಂದು ತಿಳಿದು ಬಂದಿದೆ.</p>.<p>ಮಂಗಳವಾರ ಮಧ್ಯಾಹ್ನ 2.45ರಿಂದ 4 ಗಂಟೆಯ ನಡುವಿನ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 22 ಬಾರಿ ಸಿಡಿಲು ಬಿದ್ದಿದೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಗೊತ್ತಾಗಿದೆ.</p>.<p>ಈ ಮಳೆಯ ಕಾರಣಕ್ಕೆ ನಗರದಲ್ಲಿ 75 ವಿದ್ಯುತ್ ಕಂಬಗಳು, 12 ಟ್ರಾನ್ಸ್ಫಾರ್ಮರ್ಗಳು, 2 ಕಿ.ಮೀಯಷ್ಟು ವಿದ್ಯುತ್ ತಂತಿ, 128 ಮರಗಳು ಧರೆಗುರುಳಿವೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಅಂದಾಜಿಸಿದೆ.</p>.<p>ಬಿರುಗಾಳಿಗೆ ಸಂಡೂರು ತಾಲ್ಲೂಕಿನಲ್ಲಿ ಒಂದು ಮನೆಯ ಚಾವಣಿ ಹಾರಿಹೋಗಿದೆ. ಬಳ್ಳಾರಿಯಲ್ಲೂ ಎರಡು ಮನೆಗಳಿಗೆ ಹಾನಿಯಾಗಿದೆ ಎನ್ನಲಾಗಿದ್ದು, ನಿಖರ ಮಾಹಿತಿ ಸಿಕ್ಕಿಲ್ಲ.</p>.<p>ಬಳ್ಳಾರಿ ನಗರದ ಹಲವು ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದಿಂದಲೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಜೆಸ್ಕಾಂಗೆ ಸರಣಿ ದೂರುಗಳು ಬರುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಲವು ಪ್ರದೇಶಗಳಲ್ಲಿ ಮಂಗಳವಾರ ಇಡೀ ರಾತ್ರಿ ವಿದ್ಯುತ್ ಪೂರೈಕೆಯಾಗದೇ ಜನ ಪರಿತಪಿಸಿದ್ದಾರೆ.</p>.<p>‘ಬುಧವಾರ ಸಂಜೆ ಹೊತ್ತಿಗೆ 3 ಪರಿವರ್ತಕ (ಟಿ.ಸಿ)ಗಳನ್ನು ಬದಲಿಸಿದ್ದೇವೆ. ಕ್ರೇನ್ಗಳನ್ನು ಬಾಡಿಗೆ ಪಡೆದು 15 ಟಿ.ಸಿಗಳನ್ನು ಬದಲಿಸುತ್ತಿದ್ದೇವೆ. ರಾತ್ರಿ ಹೊತ್ತಿಗೆ ಎಲ್ಲ ಕಡೆ ವಿದ್ಯುತ್ ಸರಾಗ ಸರಬರಾಜು ಆಗಲಿದೆ’ ಎಂದು ಜೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಹುಸೇನ್ ಸಾಬ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮಳೆ ಕಾರಣಕ್ಕೆ ಜಿಲ್ಲೆಯ ಅಲ್ಲಲ್ಲಿ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಶ್ರೀಕಾಂತ ಕೋಟೆಮನೆ, ‘ಮಳೆಯಿಂದಾಗಿ ಆಗಿರುವ ತೋಟಗಾರಿಕೆ ಬೆಳೆ ಹಾನಿಯ ಸರ್ವೆ ಕಾರ್ಯ ನಡೆಯುತ್ತಿದೆ. ಎರಡು ದಿನಗಳಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ’ ಎಂದು ಹೇಳಿದರು.</p>.<p>ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿರುವ ಮನೆಗಳು ಮಾತ್ರವಲ್ಲದೇ ಸರ್ಕಾರಿ ಕಚೇರಿಗಳಿಗೂ ನೀರು ನುಗ್ಗಿದ್ದು, ಕಡತಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-458259514</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಬಳ್ಳಾರಿ ನಗರದಲ್ಲಿ ಮಂಗಳವಾರ ಒಂದೇ ದಿನ 6.01 ಸೆಂಟಿಮೀಟರ್ ಮಳೆ ಸುರಿದಿರುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬಳ್ಳಾರಿ ಘಟಕ ಮಾಹಿತಿ ನೀಡಿದೆ.</p>.<p>ಬಳ್ಳಾರಿ ತಾಲ್ಲೂಕಿನಲ್ಲಿ 1.93, ಸಂಡೂರು– 0.2, ಕಂಪ್ಲಿ – 0.15, ಸಿರುಗುಪ್ಪ – 0.1, ಕುರುಗೋಡು –0.18 ಸೆಂ.ಮೀ ಮಳೆಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಸರಾಸರಿ 1.96 ಸೆಂ.ಮೀ ವರ್ಷಧಾರೆಯಾಗಿದೆ ಎಂದು ತಿಳಿದು ಬಂದಿದೆ.</p>.<p>ಮಂಗಳವಾರ ಮಧ್ಯಾಹ್ನ 2.45ರಿಂದ 4 ಗಂಟೆಯ ನಡುವಿನ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 22 ಬಾರಿ ಸಿಡಿಲು ಬಿದ್ದಿದೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಗೊತ್ತಾಗಿದೆ.</p>.<p>ಈ ಮಳೆಯ ಕಾರಣಕ್ಕೆ ನಗರದಲ್ಲಿ 75 ವಿದ್ಯುತ್ ಕಂಬಗಳು, 12 ಟ್ರಾನ್ಸ್ಫಾರ್ಮರ್ಗಳು, 2 ಕಿ.ಮೀಯಷ್ಟು ವಿದ್ಯುತ್ ತಂತಿ, 128 ಮರಗಳು ಧರೆಗುರುಳಿವೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಅಂದಾಜಿಸಿದೆ.</p>.<p>ಬಿರುಗಾಳಿಗೆ ಸಂಡೂರು ತಾಲ್ಲೂಕಿನಲ್ಲಿ ಒಂದು ಮನೆಯ ಚಾವಣಿ ಹಾರಿಹೋಗಿದೆ. ಬಳ್ಳಾರಿಯಲ್ಲೂ ಎರಡು ಮನೆಗಳಿಗೆ ಹಾನಿಯಾಗಿದೆ ಎನ್ನಲಾಗಿದ್ದು, ನಿಖರ ಮಾಹಿತಿ ಸಿಕ್ಕಿಲ್ಲ.</p>.<p>ಬಳ್ಳಾರಿ ನಗರದ ಹಲವು ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದಿಂದಲೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಜೆಸ್ಕಾಂಗೆ ಸರಣಿ ದೂರುಗಳು ಬರುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಲವು ಪ್ರದೇಶಗಳಲ್ಲಿ ಮಂಗಳವಾರ ಇಡೀ ರಾತ್ರಿ ವಿದ್ಯುತ್ ಪೂರೈಕೆಯಾಗದೇ ಜನ ಪರಿತಪಿಸಿದ್ದಾರೆ.</p>.<p>‘ಬುಧವಾರ ಸಂಜೆ ಹೊತ್ತಿಗೆ 3 ಪರಿವರ್ತಕ (ಟಿ.ಸಿ)ಗಳನ್ನು ಬದಲಿಸಿದ್ದೇವೆ. ಕ್ರೇನ್ಗಳನ್ನು ಬಾಡಿಗೆ ಪಡೆದು 15 ಟಿ.ಸಿಗಳನ್ನು ಬದಲಿಸುತ್ತಿದ್ದೇವೆ. ರಾತ್ರಿ ಹೊತ್ತಿಗೆ ಎಲ್ಲ ಕಡೆ ವಿದ್ಯುತ್ ಸರಾಗ ಸರಬರಾಜು ಆಗಲಿದೆ’ ಎಂದು ಜೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಹುಸೇನ್ ಸಾಬ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮಳೆ ಕಾರಣಕ್ಕೆ ಜಿಲ್ಲೆಯ ಅಲ್ಲಲ್ಲಿ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಶ್ರೀಕಾಂತ ಕೋಟೆಮನೆ, ‘ಮಳೆಯಿಂದಾಗಿ ಆಗಿರುವ ತೋಟಗಾರಿಕೆ ಬೆಳೆ ಹಾನಿಯ ಸರ್ವೆ ಕಾರ್ಯ ನಡೆಯುತ್ತಿದೆ. ಎರಡು ದಿನಗಳಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ’ ಎಂದು ಹೇಳಿದರು.</p>.<p>ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿರುವ ಮನೆಗಳು ಮಾತ್ರವಲ್ಲದೇ ಸರ್ಕಾರಿ ಕಚೇರಿಗಳಿಗೂ ನೀರು ನುಗ್ಗಿದ್ದು, ಕಡತಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-458259514</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>