<p><strong>ಬಳ್ಳಾರಿ</strong>: ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರದಿಂದ ಗುರುವಾರ ಬೆಳಗಿನವರೆಗೆ ಒಟ್ಟಾರೆ ಸರಾಸರಿ 2.7 ಸೆಂ.ಮೀ ಮಳೆಯಾಗಿದೆ. </p>.<p>ವಾಡಿಕೆಯಂತೆ ಈ ದಿನದಲ್ಲಿ 0.30 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ, 2.7 ಸೆಂ.ಮೀ ಮಳೆಯಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ದತ್ತಾಂಶಗಳಿಂದ ಗೊತ್ತಾಗಿದೆ.</p>.<p>ಕಂಪ್ಲಿ ತಾಲೂಕಿನಲ್ಲಿ ಅತ್ಯಧಿಕ ಸರಾಸರಿ 4.48 ಸೆಂ.ಮೀ, ಕುರುಗೋಡು 2.66, ಬಳ್ಳಾರಿ 2.57 ಸೆಂ.ಮೀ, ಸಂಡೂರಿನಲ್ಲಿ 2.29, ಸಿರುಗುಪ್ಪ 2.41 ಸೆಂ.ಮೀ ಮಳೆ ಸುರಿದಿದೆ. ಸಂಡೂರು ತಾಲ್ಲೂಕಿನ ಕುರೇಕುಪ್ಪದಲ್ಲಿ 8.4 ಸೆಂ.ಮೀ ಮಳೆ ದಾಖಲಾಗಿದೆ. </p>.<p>ಮಳೆಯಿಂದಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಜನರು ತೀವ್ರ ಸಮಸ್ಯೆ ಎದುರಿಸಿದರು. ಕೊಳಗೇರಿಗಳ ಮನೆಗಳಿಗೆ ಕೊಳಚೆ ನೀರು ನುಗ್ಗಿತು. ಹೀಗಾಗಿ ಅಲ್ಲಿನ ನಾಗರಿಕರು ರಾತ್ರಿ ಇಡೀ ಮನೆಯಿಂದ ನೀರು ಹೊರ ಹಾಕುವುದರಲ್ಲೇ ನಿರತರಾಗಿದ್ದರು. </p>.<p>ನಗರದ ಅಂಡರ್ ಪಾಸ್ಗಳು, ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಎದುರು ನೀರು ನಿಂತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.</p>.<p>ಈಗಾಗಲೇ ರಸ್ತೆಗಳೆಲ್ಲ ಗುಂಡಿ ಬಿದಿದ್ದು, ಮಳೆ ಬಂದು ಪರಿಸ್ಥಿತಿ ಇನ್ನಷ್ಟು ಅದ್ವಾನಗೊಂಡಿತು. ರಸ್ತೆ ಗುಂಡಿಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು. </p>.<p>ಒಂದೇ ಮಳೆಗೆ ನಗರದ ಹಲವು ಪ್ರದೇಶಗಳಲ್ಲಿ ರಾತ್ರಿಯೇ ವಿದ್ಯುತ್ ಕಡಿತಗೊಂಡಿತಾದರೂ, ಬೆಳಗಾದರೂ ಮರಳಿ ಬಾರಲೇ ಇಲ್ಲ. ಹೀಗಾಗಿ ಜನರ ತೀವ್ರ ತೊಂದರೆ ಅನುಭವಿಸಿದರು. ಹಲವು ಕಡೆಗಳಲ್ಲಿ ವಿದ್ಯುತ್ ತಂತಿಗಳು ಕಡಿತಗೊಂಡವು. ಇವುಗಳನ್ನು ಸರಿಪಡಿಸುವುದು ಜೆಸ್ಕಾಂ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿತು.</p>.<p>ಮಳೆಗೆ ಸಿರುಗುಪ್ಪ ತಾಲ್ಲೂಕಿನಲ್ಲಿ 2, ಬಳ್ಳಾರಿ ಮತ್ತು ಕಂಪ್ಲಿ ತಾಲ್ಲೂಕಿನಲ್ಲಿ ತಲಾ ಒಂದೊಂದು ಮನೆಗಳಿಗೆ ಹಾನಿಯಾಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರದಿಂದ ಗುರುವಾರ ಬೆಳಗಿನವರೆಗೆ ಒಟ್ಟಾರೆ ಸರಾಸರಿ 2.7 ಸೆಂ.ಮೀ ಮಳೆಯಾಗಿದೆ. </p>.<p>ವಾಡಿಕೆಯಂತೆ ಈ ದಿನದಲ್ಲಿ 0.30 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ, 2.7 ಸೆಂ.ಮೀ ಮಳೆಯಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ದತ್ತಾಂಶಗಳಿಂದ ಗೊತ್ತಾಗಿದೆ.</p>.<p>ಕಂಪ್ಲಿ ತಾಲೂಕಿನಲ್ಲಿ ಅತ್ಯಧಿಕ ಸರಾಸರಿ 4.48 ಸೆಂ.ಮೀ, ಕುರುಗೋಡು 2.66, ಬಳ್ಳಾರಿ 2.57 ಸೆಂ.ಮೀ, ಸಂಡೂರಿನಲ್ಲಿ 2.29, ಸಿರುಗುಪ್ಪ 2.41 ಸೆಂ.ಮೀ ಮಳೆ ಸುರಿದಿದೆ. ಸಂಡೂರು ತಾಲ್ಲೂಕಿನ ಕುರೇಕುಪ್ಪದಲ್ಲಿ 8.4 ಸೆಂ.ಮೀ ಮಳೆ ದಾಖಲಾಗಿದೆ. </p>.<p>ಮಳೆಯಿಂದಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಜನರು ತೀವ್ರ ಸಮಸ್ಯೆ ಎದುರಿಸಿದರು. ಕೊಳಗೇರಿಗಳ ಮನೆಗಳಿಗೆ ಕೊಳಚೆ ನೀರು ನುಗ್ಗಿತು. ಹೀಗಾಗಿ ಅಲ್ಲಿನ ನಾಗರಿಕರು ರಾತ್ರಿ ಇಡೀ ಮನೆಯಿಂದ ನೀರು ಹೊರ ಹಾಕುವುದರಲ್ಲೇ ನಿರತರಾಗಿದ್ದರು. </p>.<p>ನಗರದ ಅಂಡರ್ ಪಾಸ್ಗಳು, ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಎದುರು ನೀರು ನಿಂತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.</p>.<p>ಈಗಾಗಲೇ ರಸ್ತೆಗಳೆಲ್ಲ ಗುಂಡಿ ಬಿದಿದ್ದು, ಮಳೆ ಬಂದು ಪರಿಸ್ಥಿತಿ ಇನ್ನಷ್ಟು ಅದ್ವಾನಗೊಂಡಿತು. ರಸ್ತೆ ಗುಂಡಿಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು. </p>.<p>ಒಂದೇ ಮಳೆಗೆ ನಗರದ ಹಲವು ಪ್ರದೇಶಗಳಲ್ಲಿ ರಾತ್ರಿಯೇ ವಿದ್ಯುತ್ ಕಡಿತಗೊಂಡಿತಾದರೂ, ಬೆಳಗಾದರೂ ಮರಳಿ ಬಾರಲೇ ಇಲ್ಲ. ಹೀಗಾಗಿ ಜನರ ತೀವ್ರ ತೊಂದರೆ ಅನುಭವಿಸಿದರು. ಹಲವು ಕಡೆಗಳಲ್ಲಿ ವಿದ್ಯುತ್ ತಂತಿಗಳು ಕಡಿತಗೊಂಡವು. ಇವುಗಳನ್ನು ಸರಿಪಡಿಸುವುದು ಜೆಸ್ಕಾಂ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿತು.</p>.<p>ಮಳೆಗೆ ಸಿರುಗುಪ್ಪ ತಾಲ್ಲೂಕಿನಲ್ಲಿ 2, ಬಳ್ಳಾರಿ ಮತ್ತು ಕಂಪ್ಲಿ ತಾಲ್ಲೂಕಿನಲ್ಲಿ ತಲಾ ಒಂದೊಂದು ಮನೆಗಳಿಗೆ ಹಾನಿಯಾಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>