<p><strong>ಬಳ್ಳಾರಿ</strong>: ರಸ್ತೆ ಅಪಘಾತ ತಡೆಗಟ್ಟುವ ಹಾಗೂ ವಾಹನ ಸವಾರರಲ್ಲಿ ಸುರಕ್ಷತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಎಂಜಿಆರ್ ಟ್ರಸ್ಟ್ ವತಿಯಿಂದ ನಗರದ ರೇಡಿಯೋ ಪಾರ್ಕ್ ಸಮೀಪ ಶುಕ್ರವಾರ ಹೆಲ್ಮೆಟ್ ಉಚಿತ ವಿತರಣಾ ಕಾರ್ಯಕ್ರಮ ನಡೆಯಿತು.</p>.<p>ಜಿಲ್ಲಾ ಪೊಲೀಸ್ ಇಲಾಖೆ ಜೂನ್ 1ರಿಂದ ಜಿಲ್ಲೆಯಾದ್ಯಂತ ಹೆಲ್ಮೆಟ್ ಕಡ್ಡಾಯಗೊಳಿಸಿರುವ ಪ್ರಯುಕ್ತ ‘ಸುರಕ್ಷಿತ ಪಯಣ–ಹೆಲ್ಮೆಟ್ ಕಡ್ಡಾಯ’ ಎಂಬ ಘೋಷಣೆಯೊಂದಿಗೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲಾಯಿತು.</p>.<p>ಮಾಜಿ ಸಚಿವ ಶ್ರೀರಾಮುಲು ಮಾತನಾಡಿ, ‘ಜೀವ ರಕ್ಷಣೆಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು’ ಎಂದರು.</p>.<p>ರಸ್ತೆ ಸುರಕ್ಷತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹೆಲ್ಮೆಟ್ ಉಚಿತ ವಿತರಣೆ ನಡೆಸಿರುವುದು ಶ್ಲಾಘನೀಯ. ಇಂತಹ ಸೇವಾ ಚಟುವಟಿಕೆಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಕಲ್ಯಾಣ ಸ್ವಾಮೀಜಿ ಹೇಳಿದರು.</p>.<p>ಈ ವೇಳೆ ಅಂದಾಜು ಸಾವಿರಕ್ಕೂ ಹೆಚ್ಚು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹೆನ್ರಿ ಡಿಸೋಜಾ, ಮಾಜಿ ಶಾಸಕ ಸುರೇಶ್ ಬಾಬು, ಮಹಾನಗರ ಪಾಲಿಕೆ ಸದಸ್ಯ ಎಂ. ಗೋವಿಂದರಾಜುಲು, ವೀರೇಶ್ ಚೌಹಾನ್, ಡಾ.ರವಿಶಂಕರ್ ಸೇರಿದಂತೆ ಬಿಜೆಪಿ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-25-428698569</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ರಸ್ತೆ ಅಪಘಾತ ತಡೆಗಟ್ಟುವ ಹಾಗೂ ವಾಹನ ಸವಾರರಲ್ಲಿ ಸುರಕ್ಷತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಎಂಜಿಆರ್ ಟ್ರಸ್ಟ್ ವತಿಯಿಂದ ನಗರದ ರೇಡಿಯೋ ಪಾರ್ಕ್ ಸಮೀಪ ಶುಕ್ರವಾರ ಹೆಲ್ಮೆಟ್ ಉಚಿತ ವಿತರಣಾ ಕಾರ್ಯಕ್ರಮ ನಡೆಯಿತು.</p>.<p>ಜಿಲ್ಲಾ ಪೊಲೀಸ್ ಇಲಾಖೆ ಜೂನ್ 1ರಿಂದ ಜಿಲ್ಲೆಯಾದ್ಯಂತ ಹೆಲ್ಮೆಟ್ ಕಡ್ಡಾಯಗೊಳಿಸಿರುವ ಪ್ರಯುಕ್ತ ‘ಸುರಕ್ಷಿತ ಪಯಣ–ಹೆಲ್ಮೆಟ್ ಕಡ್ಡಾಯ’ ಎಂಬ ಘೋಷಣೆಯೊಂದಿಗೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲಾಯಿತು.</p>.<p>ಮಾಜಿ ಸಚಿವ ಶ್ರೀರಾಮುಲು ಮಾತನಾಡಿ, ‘ಜೀವ ರಕ್ಷಣೆಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು’ ಎಂದರು.</p>.<p>ರಸ್ತೆ ಸುರಕ್ಷತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹೆಲ್ಮೆಟ್ ಉಚಿತ ವಿತರಣೆ ನಡೆಸಿರುವುದು ಶ್ಲಾಘನೀಯ. ಇಂತಹ ಸೇವಾ ಚಟುವಟಿಕೆಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಕಲ್ಯಾಣ ಸ್ವಾಮೀಜಿ ಹೇಳಿದರು.</p>.<p>ಈ ವೇಳೆ ಅಂದಾಜು ಸಾವಿರಕ್ಕೂ ಹೆಚ್ಚು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹೆನ್ರಿ ಡಿಸೋಜಾ, ಮಾಜಿ ಶಾಸಕ ಸುರೇಶ್ ಬಾಬು, ಮಹಾನಗರ ಪಾಲಿಕೆ ಸದಸ್ಯ ಎಂ. ಗೋವಿಂದರಾಜುಲು, ವೀರೇಶ್ ಚೌಹಾನ್, ಡಾ.ರವಿಶಂಕರ್ ಸೇರಿದಂತೆ ಬಿಜೆಪಿ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-25-428698569</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>