<p>ಬಳ್ಳಾರಿ: ರಸ್ತೆ ವಿಸ್ತರಣೆ ಹೆಸರಿನಲ್ಲಿ ಬಳ್ಳಾರಿ ನಗರದಲ್ಲಿ 25 ಮರಗಳನ್ನು ಅಕ್ರಮವಾಗಿ ಕಡಿದಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ‘ಪರಿಸರ ಸಂಗಮ’ ಸಂಘಟನೆ, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಗೆ ಇತ್ತೀಚೆಗೆ ಮನವಿ ಸಲ್ಲಿಸಿದೆ.</p>.<p>ವಿದ್ಯಾನಗರ ವೃತ್ತದಿಂದ ಕೋಳಗಲ್ ರಸ್ತೆವರೆಗಿನ 21 ಹೊಂಗೆ, 2 ಬೇವು ಹಾಗೂ 2 ಅಶ್ವತ್ಥ ಮರಗಳನ್ನು ಯಾವುದೇ ಅನುಮತಿ ಇಲ್ಲದೇ ಕಡಿದು ಹಾಕಲಾಗಿದೆ ಎಂದು ಸಂಘಟನೆ ಆರೋಪಿಸಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಸಂಬಂಧಪಟ್ಟವರು ಅನುಮತಿ ಪತ್ರ ತೋರಿಸಲು ವಿಫಲರಾಗಿದ್ದು, ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ ಎಂದು ಹೋರಾಟಗಾರ ಸದಾನಂದ ಹೆಗ್ಗದಾಳಮಠ ನೇತೃತ್ವದ ಸಂಘಟನೆ ಹೇಳಿದೆ.</p>.<p>‘ಘಟನೆಯಲ್ಲಿ ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆ–1976ರ ಸೆಕ್ಷನ್ 8 ಉಲ್ಲಂಘನೆಯಾಗಿದೆ’ ಎಂದು ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ರಾಜ್ಯದಲ್ಲಿ ಉಷ್ಣಾಂಶ ತೀವ್ರವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಮರಗಳ ಕಡಿತವು ಸ್ಥಳೀಯ ಪರಿಸರ ಸಮತೋಲನಕ್ಕೆ ದೊಡ್ಡ ಹೊಡೆತ ನೀಡುತ್ತದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.</p>.<p>ರಸ್ತೆ ವಿಸ್ತರಣೆ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಬೇಕು. 7 ದಿನಗಳೊಳಗೆ ಜಂಟಿ ತನಿಖಾ ವರದಿ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಬೇಕು. ನಾಶವಾಗಿರುವ ಮರಗಳಿಗೆ ಪ್ರತಿಯಾಗಿ 1:10 ಅನುಪಾತದಲ್ಲಿ ಮರಗಳನ್ನು ನೆಡಬೇಕು ಎಂದು ಪರಿಸರ ಸಂಗಮ ಆಗ್ರಹಿಸಿದೆ.</p>.<p>ಮುಂದಿನ 15 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (ಎನ್ಜಿಟಿ) ಮೊರೆ ಹೋಗುವುದಾಗಿ ಸಂಘಟನೆಯು ಎಚ್ಚರಿಕೆ ನೀಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-25-450995204</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ರಸ್ತೆ ವಿಸ್ತರಣೆ ಹೆಸರಿನಲ್ಲಿ ಬಳ್ಳಾರಿ ನಗರದಲ್ಲಿ 25 ಮರಗಳನ್ನು ಅಕ್ರಮವಾಗಿ ಕಡಿದಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ‘ಪರಿಸರ ಸಂಗಮ’ ಸಂಘಟನೆ, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಗೆ ಇತ್ತೀಚೆಗೆ ಮನವಿ ಸಲ್ಲಿಸಿದೆ.</p>.<p>ವಿದ್ಯಾನಗರ ವೃತ್ತದಿಂದ ಕೋಳಗಲ್ ರಸ್ತೆವರೆಗಿನ 21 ಹೊಂಗೆ, 2 ಬೇವು ಹಾಗೂ 2 ಅಶ್ವತ್ಥ ಮರಗಳನ್ನು ಯಾವುದೇ ಅನುಮತಿ ಇಲ್ಲದೇ ಕಡಿದು ಹಾಕಲಾಗಿದೆ ಎಂದು ಸಂಘಟನೆ ಆರೋಪಿಸಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಸಂಬಂಧಪಟ್ಟವರು ಅನುಮತಿ ಪತ್ರ ತೋರಿಸಲು ವಿಫಲರಾಗಿದ್ದು, ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ ಎಂದು ಹೋರಾಟಗಾರ ಸದಾನಂದ ಹೆಗ್ಗದಾಳಮಠ ನೇತೃತ್ವದ ಸಂಘಟನೆ ಹೇಳಿದೆ.</p>.<p>‘ಘಟನೆಯಲ್ಲಿ ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆ–1976ರ ಸೆಕ್ಷನ್ 8 ಉಲ್ಲಂಘನೆಯಾಗಿದೆ’ ಎಂದು ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ರಾಜ್ಯದಲ್ಲಿ ಉಷ್ಣಾಂಶ ತೀವ್ರವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಮರಗಳ ಕಡಿತವು ಸ್ಥಳೀಯ ಪರಿಸರ ಸಮತೋಲನಕ್ಕೆ ದೊಡ್ಡ ಹೊಡೆತ ನೀಡುತ್ತದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.</p>.<p>ರಸ್ತೆ ವಿಸ್ತರಣೆ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಬೇಕು. 7 ದಿನಗಳೊಳಗೆ ಜಂಟಿ ತನಿಖಾ ವರದಿ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಬೇಕು. ನಾಶವಾಗಿರುವ ಮರಗಳಿಗೆ ಪ್ರತಿಯಾಗಿ 1:10 ಅನುಪಾತದಲ್ಲಿ ಮರಗಳನ್ನು ನೆಡಬೇಕು ಎಂದು ಪರಿಸರ ಸಂಗಮ ಆಗ್ರಹಿಸಿದೆ.</p>.<p>ಮುಂದಿನ 15 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (ಎನ್ಜಿಟಿ) ಮೊರೆ ಹೋಗುವುದಾಗಿ ಸಂಘಟನೆಯು ಎಚ್ಚರಿಕೆ ನೀಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-25-450995204</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>