ಡಿ.23ರಂದು ಸಂಜೆ 6 ಗಂಟೆಗೆ ಕ್ಷೇತ್ರನಾಥ ಶ್ರೀ ಶರಣಬಸವೇಶ್ವರಸ್ವಾಮಿಯ ಪಲ್ಲಕ್ಕಿ ಉತ್ಸವ ಜರುಗಲಿದೆ. ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳು ಧರ್ಮಾಧಿಕಾರಿ ದಾ.ಮ.ಐಮಡಿ ಶರಣಾರ್ಯರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಲಿದ್ದು, ಕೊಟ್ಟೂರು ಹಿರೇಮಠದ ಯೋಗಿ ರಾಜೇಂದ್ರ ಸ್ವಾಮೀಜಿ, ಮುಸ್ಟೂರಿನ ರುದ್ರಮುನಿ ಸ್ವಾಮೀಜಿ ಹಾಗೂ ಚನ್ನಗಿರಿ ಹಿರೇಮಠದ ಕೇದಾರಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.