<p><strong>ಕಂಪ್ಲಿ:</strong> ತಾಲ್ಲೂಕಿನ ಅರಳಿಹಳ್ಳಿ ಬಳಿ ಮರಳು ಬ್ಲಾಕ್ ಆರಂಭ ಕುರಿತಂತೆ ಉಪವಿಭಾಗಾಧಿಕಾರಿ ಎಚ್.ಡಿ. ರಾಜೇಶ್ ಅವರು ಶನಿವಾರ ಸ್ಥಳ ಪರಿಶೀಲಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರಿ ಸಂಸ್ಥೆಗಳ ಕಾಮಗಾರಿಗಳಿಗೆ ಮರಳು ನೀಡಲು ಪಿಡಬ್ಲ್ಯುಡಿಯವರಿಗೆ ಅನುಮತಿ ನೀಡಬೇಕಿದೆ. ಅದಕ್ಕಾಗಿ ಕಂದಾಯ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ನೀಡಲು ಅರಳಿಹಳ್ಳಿ ಬಳಿ ಸ್ಥಳ ವೀಕ್ಷಿಸಲಾಗಿದೆ’ ಎಂದು ತಿಳಿಸಿದರು.</p>.<p>ಕೊಟ್ಟಾಲ್ ರಸ್ತೆಯ 600 ಮೀಟರ್ ಡಿವೈಡರ್ ವ್ಯಾಪ್ತಿಯಲ್ಲಿ ಬೀದಿದೀಪ ಅಳವಡಿಸಿ ಒಂದು ವರ್ಷ ಆಗಿದೆ. ಇನ್ನು ಪುರಸಭೆಗೆ ಹಸ್ತಾಂತರಿಸುವ ಮುನ್ನವೇ ಬೀದಿದೀಪ ಬೆಳಗುತ್ತಿಲ್ಲ. ಪಾದಾಚಾರಿ ರಸ್ತೆ ಅತಿಕ್ರಮಿಸುವ ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಬೇಕು. ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವ ಕ್ರಮ ಕೈಗೊಳ್ಳುವಂತೆ ಎ.ಸಿಯವರು ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು.</p>.<p>ತಹಶೀಲ್ದಾರ್ ಜೂಗಲ ಮಂಜುನಾಯಕ, ಕಂದಾಯ ನಿರೀಕ್ಷಕ ವೈ.ಎಂ. ಜಗದೀಶ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-25-1999075316</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ತಾಲ್ಲೂಕಿನ ಅರಳಿಹಳ್ಳಿ ಬಳಿ ಮರಳು ಬ್ಲಾಕ್ ಆರಂಭ ಕುರಿತಂತೆ ಉಪವಿಭಾಗಾಧಿಕಾರಿ ಎಚ್.ಡಿ. ರಾಜೇಶ್ ಅವರು ಶನಿವಾರ ಸ್ಥಳ ಪರಿಶೀಲಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರಿ ಸಂಸ್ಥೆಗಳ ಕಾಮಗಾರಿಗಳಿಗೆ ಮರಳು ನೀಡಲು ಪಿಡಬ್ಲ್ಯುಡಿಯವರಿಗೆ ಅನುಮತಿ ನೀಡಬೇಕಿದೆ. ಅದಕ್ಕಾಗಿ ಕಂದಾಯ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ನೀಡಲು ಅರಳಿಹಳ್ಳಿ ಬಳಿ ಸ್ಥಳ ವೀಕ್ಷಿಸಲಾಗಿದೆ’ ಎಂದು ತಿಳಿಸಿದರು.</p>.<p>ಕೊಟ್ಟಾಲ್ ರಸ್ತೆಯ 600 ಮೀಟರ್ ಡಿವೈಡರ್ ವ್ಯಾಪ್ತಿಯಲ್ಲಿ ಬೀದಿದೀಪ ಅಳವಡಿಸಿ ಒಂದು ವರ್ಷ ಆಗಿದೆ. ಇನ್ನು ಪುರಸಭೆಗೆ ಹಸ್ತಾಂತರಿಸುವ ಮುನ್ನವೇ ಬೀದಿದೀಪ ಬೆಳಗುತ್ತಿಲ್ಲ. ಪಾದಾಚಾರಿ ರಸ್ತೆ ಅತಿಕ್ರಮಿಸುವ ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಬೇಕು. ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವ ಕ್ರಮ ಕೈಗೊಳ್ಳುವಂತೆ ಎ.ಸಿಯವರು ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು.</p>.<p>ತಹಶೀಲ್ದಾರ್ ಜೂಗಲ ಮಂಜುನಾಯಕ, ಕಂದಾಯ ನಿರೀಕ್ಷಕ ವೈ.ಎಂ. ಜಗದೀಶ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-25-1999075316</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>