<p>ಕಂಪ್ಲಿ: ‘ಪಟ್ಟಣದಲ್ಲಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಸ್ಥಾಪನೆಗೆ ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ’ ಎಂದು ಜೆ.ಎನ್. ಗಣೇಶ್ ತಿಳಿಸಿದರು.</p>.<p>‘ನೂತನ ತಾಲ್ಲೂಕು ಕೇಂದ್ರವಾದ ಬಳಿಕ ನ್ಯಾಯಾಲಯ ಇಲ್ಲದೆ ಕಕ್ಷಿದಾರರು ಪರದಾಡುತ್ತಿದ್ದರು. ಅದನ್ನು ಮನಗಂಡು ಸರ್ಕಾರದಿಂದ ನ್ಯಾಯಾಲಯ ಸ್ಥಾಪನೆಗೆ ಅನುಮೋದನೆ ಪಡೆಯಲಾಯಿತು. ಬಳಿಕ ಸ್ಥಳೀಯ ವಕೀಲರ ಬಳಗದವರು ನ್ಯಾಯಾಲಯ ಕಟ್ಟಡಕ್ಕಾಗಿ ಪುರಸಭೆಗೆ ಮನವಿ ಸಲ್ಲಿಸಿದರು.</p>.<p>ನಂತರ ಜಿಲ್ಲಾಧಿಕಾರಿಗಳೊಂದಿಗೆ ಈ ಕುರಿತು ಸಮಾಲೋಚಿಸಿ ಮಾರುತಿ ನಗರದ ಉದ್ಯಾನದಲ್ಲಿದ್ದ ಪುರಸಭೆ ಕಟ್ಟಡದಲ್ಲಿ ತಾತ್ಕಾಲಿಕ ನ್ಯಾಯಾಲಯ ಆರಂಭಕ್ಕೆ ಅನುಮತಿ ಪಡೆದು, ಅದಕ್ಕಾಗಿ ₹ 25ಲಕ್ಷ ಅನುದಾನದ ವ್ಯವಸ್ಥೆ ಮಾಡಿ ಕಟ್ಟಡ ನವೀಕರಿಸಿಲಾಯಿತು. ಇಷ್ಟೆಲ್ಲ ನಿರಂತರ ಯತ್ನದಿಂದ ನ್ಯಾಯಾಲಯ ಭಾನುವಾರ ಉದ್ಘಾಟನೆಗೊಂಡಿದೆ’ ಎಂದು ಭಾನುವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>‘ನಂ.10 ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಜಾಸೌಧದ ಬಳಿ 3.12ಎಕರೆ ಭೂಮಿಯನ್ನು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಮೀಸಲಿರಿಸಲಾಗಿದೆ. ಇಲ್ಲಿ ನ್ಯಾಯಾಲಯ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ₹ 25ಕೋಟಿ ಅನುದಾನ ಮಂಜೂರು ಮಾಡುವಂತೆ ಪ್ರಸ್ತಾವ ಸಲ್ಲಿಸಿದ್ದು, ಮಂಜೂರಾತಿ ಹಂತದಲ್ಲಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-25-989244141</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ‘ಪಟ್ಟಣದಲ್ಲಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಸ್ಥಾಪನೆಗೆ ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ’ ಎಂದು ಜೆ.ಎನ್. ಗಣೇಶ್ ತಿಳಿಸಿದರು.</p>.<p>‘ನೂತನ ತಾಲ್ಲೂಕು ಕೇಂದ್ರವಾದ ಬಳಿಕ ನ್ಯಾಯಾಲಯ ಇಲ್ಲದೆ ಕಕ್ಷಿದಾರರು ಪರದಾಡುತ್ತಿದ್ದರು. ಅದನ್ನು ಮನಗಂಡು ಸರ್ಕಾರದಿಂದ ನ್ಯಾಯಾಲಯ ಸ್ಥಾಪನೆಗೆ ಅನುಮೋದನೆ ಪಡೆಯಲಾಯಿತು. ಬಳಿಕ ಸ್ಥಳೀಯ ವಕೀಲರ ಬಳಗದವರು ನ್ಯಾಯಾಲಯ ಕಟ್ಟಡಕ್ಕಾಗಿ ಪುರಸಭೆಗೆ ಮನವಿ ಸಲ್ಲಿಸಿದರು.</p>.<p>ನಂತರ ಜಿಲ್ಲಾಧಿಕಾರಿಗಳೊಂದಿಗೆ ಈ ಕುರಿತು ಸಮಾಲೋಚಿಸಿ ಮಾರುತಿ ನಗರದ ಉದ್ಯಾನದಲ್ಲಿದ್ದ ಪುರಸಭೆ ಕಟ್ಟಡದಲ್ಲಿ ತಾತ್ಕಾಲಿಕ ನ್ಯಾಯಾಲಯ ಆರಂಭಕ್ಕೆ ಅನುಮತಿ ಪಡೆದು, ಅದಕ್ಕಾಗಿ ₹ 25ಲಕ್ಷ ಅನುದಾನದ ವ್ಯವಸ್ಥೆ ಮಾಡಿ ಕಟ್ಟಡ ನವೀಕರಿಸಿಲಾಯಿತು. ಇಷ್ಟೆಲ್ಲ ನಿರಂತರ ಯತ್ನದಿಂದ ನ್ಯಾಯಾಲಯ ಭಾನುವಾರ ಉದ್ಘಾಟನೆಗೊಂಡಿದೆ’ ಎಂದು ಭಾನುವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>‘ನಂ.10 ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಜಾಸೌಧದ ಬಳಿ 3.12ಎಕರೆ ಭೂಮಿಯನ್ನು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಮೀಸಲಿರಿಸಲಾಗಿದೆ. ಇಲ್ಲಿ ನ್ಯಾಯಾಲಯ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ₹ 25ಕೋಟಿ ಅನುದಾನ ಮಂಜೂರು ಮಾಡುವಂತೆ ಪ್ರಸ್ತಾವ ಸಲ್ಲಿಸಿದ್ದು, ಮಂಜೂರಾತಿ ಹಂತದಲ್ಲಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-25-989244141</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>