<p><strong>ಕಂಪ್ಲಿ:</strong> ತಾಲ್ಲೂಕಿನ ಶ್ರೀರಾಮರಂಗಾಪುರ-ಏಳುಬೆಂಚಿ ಗ್ರಾಮದ ರಸ್ತೆಯಲ್ಲಿನ ಗುಂಡಿಗಳಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಕಾರಣ ನಾಲ್ವರು ಯುವ ರೈತರು ತಮ್ಮ ಸ್ವಂತ ಹಣದಲ್ಲಿ ರಸ್ತೆ ದುರಸ್ತಿಗೊಳಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.</p>.<p>‘ರಸ್ತೆಯಲ್ಲಿನ ಗುಂಡಿಗಳಿಂದಾಗಿ ಅನೇಕ ಅಪಘಾತ ಸಂಭವಿಸಿದ್ದು, ಈಚೆಗೆ ಒಬ್ಬರು ಮೃತಪಟ್ಟಿದ್ದಾರೆ. ಆದರೂ ಸಂಬಂಧಿಸಿದ ಅಧಿಕಾರಿಗಳು ರಸ್ತೆ ದುರಸ್ತಿಗೆ ಕ್ರಮ ವಹಿಸುತ್ತಿಲ್ಲ’ ಎಂದು ರೈತ ಮುಖಂಡ ಪೊತ್ತೂರು ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<p>ಈ ರಸ್ತೆ ಮೂಲಕ ಜಿಂದಾಲ್ ಕಾರ್ಖಾನೆಗೆ ಬೈಕ್ಗಳ ಮೂಲಕ ಸಾವಿರಾರು ಜನರು ಸಂಚರಿಸುತ್ತಾರೆ. ಈ ಕಾರಣದಿಂದ ಗುಂಡಿಗಳನ್ನು ಮುಚ್ಚಲಾಗಿದ್ದು, ಅಂದಾಜು ₹5 ವೆಚ್ಚ ತಲುಗಿದೆ. ಮಳೆಗಾಲ ಆರಂಭಕ್ಕೂ ಮುನ್ನ ಅಧಿಕಾರಿಗಳು ರಸ್ತೆ ಶಾಶ್ವತ ದುರಸ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಗ್ರಾಮದ ಯುವ ರೈತರಾದ ವೈ.ಪಿ. ರವಿಕುಮಾರ, ಪಚ್ಚಿಪಾಟಿ ರಾಮಾಂಜನೇಯಲು, ನವೀನ್ ಸೇರಿದಂತೆ ಇತರರು ಸಹಕಾರ ನೀಡಿದರು ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ತಾಲ್ಲೂಕಿನ ಶ್ರೀರಾಮರಂಗಾಪುರ-ಏಳುಬೆಂಚಿ ಗ್ರಾಮದ ರಸ್ತೆಯಲ್ಲಿನ ಗುಂಡಿಗಳಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಕಾರಣ ನಾಲ್ವರು ಯುವ ರೈತರು ತಮ್ಮ ಸ್ವಂತ ಹಣದಲ್ಲಿ ರಸ್ತೆ ದುರಸ್ತಿಗೊಳಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.</p>.<p>‘ರಸ್ತೆಯಲ್ಲಿನ ಗುಂಡಿಗಳಿಂದಾಗಿ ಅನೇಕ ಅಪಘಾತ ಸಂಭವಿಸಿದ್ದು, ಈಚೆಗೆ ಒಬ್ಬರು ಮೃತಪಟ್ಟಿದ್ದಾರೆ. ಆದರೂ ಸಂಬಂಧಿಸಿದ ಅಧಿಕಾರಿಗಳು ರಸ್ತೆ ದುರಸ್ತಿಗೆ ಕ್ರಮ ವಹಿಸುತ್ತಿಲ್ಲ’ ಎಂದು ರೈತ ಮುಖಂಡ ಪೊತ್ತೂರು ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<p>ಈ ರಸ್ತೆ ಮೂಲಕ ಜಿಂದಾಲ್ ಕಾರ್ಖಾನೆಗೆ ಬೈಕ್ಗಳ ಮೂಲಕ ಸಾವಿರಾರು ಜನರು ಸಂಚರಿಸುತ್ತಾರೆ. ಈ ಕಾರಣದಿಂದ ಗುಂಡಿಗಳನ್ನು ಮುಚ್ಚಲಾಗಿದ್ದು, ಅಂದಾಜು ₹5 ವೆಚ್ಚ ತಲುಗಿದೆ. ಮಳೆಗಾಲ ಆರಂಭಕ್ಕೂ ಮುನ್ನ ಅಧಿಕಾರಿಗಳು ರಸ್ತೆ ಶಾಶ್ವತ ದುರಸ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಗ್ರಾಮದ ಯುವ ರೈತರಾದ ವೈ.ಪಿ. ರವಿಕುಮಾರ, ಪಚ್ಚಿಪಾಟಿ ರಾಮಾಂಜನೇಯಲು, ನವೀನ್ ಸೇರಿದಂತೆ ಇತರರು ಸಹಕಾರ ನೀಡಿದರು ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>