<p>ಕಂಪ್ಲಿ: ‘ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಈಗಲೂ ನಿರಂತರ ಪ್ರಯತ್ನ ಮುಂದುವರಿದಿದೆ’ ಎಂದು ಕಸಾಪ ಬಳ್ಳಾರಿ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ ತಿಳಿಸಿದರು.</p>.<p>ಇಲ್ಲಿನ ಶ್ರೀಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಂಗಳವಾರ ಹಮ್ಮಿಕೊಂಡಿದ್ದ ಲೇಖಕ ಬಂಗಿ ದೊಡ್ಡ ಮಂಜುನಾಥ ರಚಿಸಿದ ‘ಬೆಂಕಿಯ ಶೀತ’ ಹಾಗೂ ‘ಶೀತದ ಕಾವು’ ಕಾದಂಬರಿ ಬಿಡುಗಡೆ ಸಮಾರಂಭದ ಅಧ್ಯಕ್ಷ ವಹಿಸಿ ಮಾತನಾಡಿದರು.</p>.<p>ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಬೇಕು ಎನ್ನುವುದು ಈ ಭಾಗದ ಸಾಹಿತ್ಯಾಸಕ್ತರ 69 ವರ್ಷಗಳ ಕನಸಾಗಿದೆ. ಜನರೂ ಸಹ ಉತ್ಸುಕರಾಗಿದ್ದಾರೆ. ಕಾರಣಾಂತರಗಳಿಂದ ವಿಳಂಬವಾಗುತ್ತಿದೆ’ ಎಂದರು.</p>.<p>ಗಂಗಾವತಿಯ ಎಸ್.ಕೆ.ಎನ್.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕಿ ಮುಮ್ತಾಜ್ ಬೇಗಂ ಕಾದಂಬರಿ ವಿಮರ್ಶಿಸಿದರು. ಹಿರಿಯ ಪತ್ರಕರ್ತ ಎನ್. ವೀರಭದ್ರಗೌಡ ಹಾಗೂ ಕನ್ನಡ ಹಿತರಕ್ಷಕ ಸಂಘದ ಗೌರವಾಧ್ಯಕ್ಷ ಕ.ಮ. ಹೇಮಯ್ಯಸ್ವಾಮಿ, ಡಿ. ವೀರಪ್ಪ, ಲೇಖಕ ಬಂಗಿ ದೊಡ್ಡ ಮಂಜುನಾಥ, ನಗರಾಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣ ಎಸ್. ಪೋಳ್, ಕೋನೇರು ಶ್ರೀರಾಮಕೃಷ್ಣ, ಕಸಾಪ ತಾಲ್ಲೂಕು ಅಧ್ಯಕ್ಷ ಷಣ್ಮುಖಪ್ಪ ಚಿತ್ರಗಾರ ಮಾತನಾಡಿದರು.</p>.<p>ಕಸಾಪ ಪದಾಧಿಕಾರಿಗಳಾದ ಅಂಬಿಗರ ಮಂಜುನಾಥ, ಎಸ್.ಡಿ. ಬಸವರಾಜ, ಎಲಿಗಾರ ವೆಂಕಟರೆಡ್ಡಿ, ಹಾದಿಮನಿ ಕಾಳಿಂಗವರ್ಧನ, ಅಶೋಕ ಕುಕನೂರು, ಎಸ್. ಶಾಮಸುಂದರರಾವ್, ಯು.ಎಂ. ವಿದ್ಯಾಶಂಕರ, ಬಡಿಗೇರ ಜಿಲಾನ್ಸಾಬ್, ಶಿಕ್ಷಕ ಜೀರು ಮಲ್ಲಿಕಾರ್ಜುನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-25-179972770</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ‘ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಈಗಲೂ ನಿರಂತರ ಪ್ರಯತ್ನ ಮುಂದುವರಿದಿದೆ’ ಎಂದು ಕಸಾಪ ಬಳ್ಳಾರಿ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ ತಿಳಿಸಿದರು.</p>.<p>ಇಲ್ಲಿನ ಶ್ರೀಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಂಗಳವಾರ ಹಮ್ಮಿಕೊಂಡಿದ್ದ ಲೇಖಕ ಬಂಗಿ ದೊಡ್ಡ ಮಂಜುನಾಥ ರಚಿಸಿದ ‘ಬೆಂಕಿಯ ಶೀತ’ ಹಾಗೂ ‘ಶೀತದ ಕಾವು’ ಕಾದಂಬರಿ ಬಿಡುಗಡೆ ಸಮಾರಂಭದ ಅಧ್ಯಕ್ಷ ವಹಿಸಿ ಮಾತನಾಡಿದರು.</p>.<p>ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಬೇಕು ಎನ್ನುವುದು ಈ ಭಾಗದ ಸಾಹಿತ್ಯಾಸಕ್ತರ 69 ವರ್ಷಗಳ ಕನಸಾಗಿದೆ. ಜನರೂ ಸಹ ಉತ್ಸುಕರಾಗಿದ್ದಾರೆ. ಕಾರಣಾಂತರಗಳಿಂದ ವಿಳಂಬವಾಗುತ್ತಿದೆ’ ಎಂದರು.</p>.<p>ಗಂಗಾವತಿಯ ಎಸ್.ಕೆ.ಎನ್.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕಿ ಮುಮ್ತಾಜ್ ಬೇಗಂ ಕಾದಂಬರಿ ವಿಮರ್ಶಿಸಿದರು. ಹಿರಿಯ ಪತ್ರಕರ್ತ ಎನ್. ವೀರಭದ್ರಗೌಡ ಹಾಗೂ ಕನ್ನಡ ಹಿತರಕ್ಷಕ ಸಂಘದ ಗೌರವಾಧ್ಯಕ್ಷ ಕ.ಮ. ಹೇಮಯ್ಯಸ್ವಾಮಿ, ಡಿ. ವೀರಪ್ಪ, ಲೇಖಕ ಬಂಗಿ ದೊಡ್ಡ ಮಂಜುನಾಥ, ನಗರಾಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣ ಎಸ್. ಪೋಳ್, ಕೋನೇರು ಶ್ರೀರಾಮಕೃಷ್ಣ, ಕಸಾಪ ತಾಲ್ಲೂಕು ಅಧ್ಯಕ್ಷ ಷಣ್ಮುಖಪ್ಪ ಚಿತ್ರಗಾರ ಮಾತನಾಡಿದರು.</p>.<p>ಕಸಾಪ ಪದಾಧಿಕಾರಿಗಳಾದ ಅಂಬಿಗರ ಮಂಜುನಾಥ, ಎಸ್.ಡಿ. ಬಸವರಾಜ, ಎಲಿಗಾರ ವೆಂಕಟರೆಡ್ಡಿ, ಹಾದಿಮನಿ ಕಾಳಿಂಗವರ್ಧನ, ಅಶೋಕ ಕುಕನೂರು, ಎಸ್. ಶಾಮಸುಂದರರಾವ್, ಯು.ಎಂ. ವಿದ್ಯಾಶಂಕರ, ಬಡಿಗೇರ ಜಿಲಾನ್ಸಾಬ್, ಶಿಕ್ಷಕ ಜೀರು ಮಲ್ಲಿಕಾರ್ಜುನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-25-179972770</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>