<p>ಬಳ್ಳಾರಿ: ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಮೇ 4ರಂದು ನಗರದಲ್ಲಿ ‘ಕರ್ನಾಟಕ ಸ್ವಾಭಿಮಾನ ನಡಿಗೆ–2026’ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕಿ ಬೀನಾ ತಿಳಿಸಿದ್ದಾರೆ.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11ಕ್ಕೆ ಗವಿಯಪ್ಪ (ಮೋತಿ) ವೃತ್ತದಿಂದ ಪಾದಯಾತ್ರೆ ಆರಂಭವಾಗಿ ಮಧ್ಯಾಹ್ನ ಗಾಂಧಿಭವನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. 1969ರ ಸ್ಟೋನ್ವಾಲ್ ಇನ್ ಹೋರಾಟದ ಸ್ಮರಣಾರ್ಥ ಈ ‘ಪ್ರೈಡ್’ ನಡಿಗೆ ಆಯೋಜಿಸಲಾಗುತ್ತಿದೆ’ ಎಂದರು.</p>.<p>‘ಸತತ ಹೋರಾಟದಿಂದಾಗಿ ಸರ್ಕಾರಿ ಉದ್ಯೋಗದಲ್ಲಿ ಶೇ.1 ಮೀಸಲಾತಿ ದೊರೆತಿದೆ. ಆದರೆ, ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ 2026ರ ತಿದ್ದುಪಡಿ ಕಾಯ್ದೆ ಸಮುದಾಯಕ್ಕೆ ಹಿನ್ನಡೆ ಆಗಿದೆ. ಈ ಕಾಯ್ದೆಯು ಸ್ವಯಂ ಗುರುತಿನ ಹಕ್ಕನ್ನು ಕಸಿದುಕೊಳ್ಳುತ್ತಿದ್ದು, ಸಂವಿಧಾನದ ಆಶಯಗಳಿಗೆ ಧಕ್ಕೆಯಾಗಿದೆ. ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಈ ಹಕ್ಕು ನಿರಾಕರಣಾ ನೀತಿಗಳ ವಿರುದ್ಧ ಧ್ವನಿ ಎತ್ತಬೇಕು ಹಾಗೂ ಶಿಕ್ಷಣ, ಆರೋಗ್ಯ ಮತ್ತು ಜೀವ ನೋಪಾಯ ಕ್ಷೇತ್ರಗಳಲ್ಲಿ ಸಮುದಾಯಕ್ಕೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಚಂದ್ರ ಕುಮಾರಿ, ಫರ್ವೀನ್ ಬಾನು, ಗೌಸಿಯ ಬಾನು, ಅರುಣಾ, ಹೇಮಲತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-1168057337</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಮೇ 4ರಂದು ನಗರದಲ್ಲಿ ‘ಕರ್ನಾಟಕ ಸ್ವಾಭಿಮಾನ ನಡಿಗೆ–2026’ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕಿ ಬೀನಾ ತಿಳಿಸಿದ್ದಾರೆ.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11ಕ್ಕೆ ಗವಿಯಪ್ಪ (ಮೋತಿ) ವೃತ್ತದಿಂದ ಪಾದಯಾತ್ರೆ ಆರಂಭವಾಗಿ ಮಧ್ಯಾಹ್ನ ಗಾಂಧಿಭವನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. 1969ರ ಸ್ಟೋನ್ವಾಲ್ ಇನ್ ಹೋರಾಟದ ಸ್ಮರಣಾರ್ಥ ಈ ‘ಪ್ರೈಡ್’ ನಡಿಗೆ ಆಯೋಜಿಸಲಾಗುತ್ತಿದೆ’ ಎಂದರು.</p>.<p>‘ಸತತ ಹೋರಾಟದಿಂದಾಗಿ ಸರ್ಕಾರಿ ಉದ್ಯೋಗದಲ್ಲಿ ಶೇ.1 ಮೀಸಲಾತಿ ದೊರೆತಿದೆ. ಆದರೆ, ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ 2026ರ ತಿದ್ದುಪಡಿ ಕಾಯ್ದೆ ಸಮುದಾಯಕ್ಕೆ ಹಿನ್ನಡೆ ಆಗಿದೆ. ಈ ಕಾಯ್ದೆಯು ಸ್ವಯಂ ಗುರುತಿನ ಹಕ್ಕನ್ನು ಕಸಿದುಕೊಳ್ಳುತ್ತಿದ್ದು, ಸಂವಿಧಾನದ ಆಶಯಗಳಿಗೆ ಧಕ್ಕೆಯಾಗಿದೆ. ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಈ ಹಕ್ಕು ನಿರಾಕರಣಾ ನೀತಿಗಳ ವಿರುದ್ಧ ಧ್ವನಿ ಎತ್ತಬೇಕು ಹಾಗೂ ಶಿಕ್ಷಣ, ಆರೋಗ್ಯ ಮತ್ತು ಜೀವ ನೋಪಾಯ ಕ್ಷೇತ್ರಗಳಲ್ಲಿ ಸಮುದಾಯಕ್ಕೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಚಂದ್ರ ಕುಮಾರಿ, ಫರ್ವೀನ್ ಬಾನು, ಗೌಸಿಯ ಬಾನು, ಅರುಣಾ, ಹೇಮಲತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-1168057337</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>