<p>ಬಳ್ಳಾರಿ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಬಳ್ಳಾರಿ ವಲಯ ಕಚೇರಿಗೆ ₹16.17 ಕೋಟಿ ವಂಚಿಸಿರುವ ಆರೋಪಿ ಸಂತೋಷ್ ಕುಮಾರ್ ಬಳಿ ವಿವಿಧ ಕಂಪನಿಗಳ 8 ಕಾರುಗಳಿವೆ ಎಂದು ಪೊಲೀಸ್ ಇಲಾಖೆ ಹೇಳಿದೆ.</p>.<p>ಆರೋಪಿಯ ಕುರಿತು ಪೊಲೀಸ್ ಇಲಾಖೆ ಭಾನುವಾರ ಮಾಹಿತಿ ಬಿಡುಗಡೆ ಮಾಡಿದೆ. ಆರೋಪಿ ಬಳಿ ವಿವಿಧ ಕಂಪನಿಗಳ 5 ಮೋಟರ್ ಬೈಕ್ಗಳು, 4 ವಿವಿಧ ಕಂಪನಿ ಮೊಬೈಲ್ ಫೋನ್ಗಳು, ಬಂಗಾರದ ಆಭರಣಗಳು ಸೇರಿ ಒಟ್ಟು ₹1.30 ಕೋಟಿ ಮೊತ್ತದ ವಸ್ತುಗಳು ಇರುವುದಾಗಿ ಪೊಲೀಸ್ ಇಲಾಖೆ ಹೇಳಿದೆ.</p>.<p>ಆತನಿಗೆ ಸಂಬಂಧಿಸಿದ ವಿವಿಧ ಖಾತೆಗಳಲ್ಲಿ ₹29.97 ಲಕ್ಷ ಹಣ ಇದ್ದು, ಖಾತೆಗಳನ್ನು ಸ್ಥಗಿತಗೊಳಿಸಿರುವುದಾಗಿ ಇಲಾಖೆ ಹೇಳಿದರು.</p>.<p>ಆರೋಪಿ ವಿರುದ್ಧ ಎಪಿಎಂಸಿ ಠಾಣೆಯಲ್ಲಿ ಎರಡು ಪ್ರಕರಣ, ಬಳ್ಳಾರಿ ಗ್ರಾಮೀಣ, ಪಿಡಿಹಳ್ಳಿಯಲ್ಲಿ ಠಾಣೆಗಳಲ್ಲಿ ತಲಾ ಒಂದೊಂದು ಕೇಸುಗಳಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಕೆಐಎಡಿಬಿಗೆ ವಂಚಿಸಿದ ಆರೋಪಿ ಸಂತೋಷ್ ಕುಮಾರ್, ಕೆಆರ್ಎಸ್ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ₹10 ಲಕ್ಷ ಖರ್ಚು ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿರುವುದಾಗಿ ಮಾಹಿತಿ ನೀಡಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-25-1087285154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಬಳ್ಳಾರಿ ವಲಯ ಕಚೇರಿಗೆ ₹16.17 ಕೋಟಿ ವಂಚಿಸಿರುವ ಆರೋಪಿ ಸಂತೋಷ್ ಕುಮಾರ್ ಬಳಿ ವಿವಿಧ ಕಂಪನಿಗಳ 8 ಕಾರುಗಳಿವೆ ಎಂದು ಪೊಲೀಸ್ ಇಲಾಖೆ ಹೇಳಿದೆ.</p>.<p>ಆರೋಪಿಯ ಕುರಿತು ಪೊಲೀಸ್ ಇಲಾಖೆ ಭಾನುವಾರ ಮಾಹಿತಿ ಬಿಡುಗಡೆ ಮಾಡಿದೆ. ಆರೋಪಿ ಬಳಿ ವಿವಿಧ ಕಂಪನಿಗಳ 5 ಮೋಟರ್ ಬೈಕ್ಗಳು, 4 ವಿವಿಧ ಕಂಪನಿ ಮೊಬೈಲ್ ಫೋನ್ಗಳು, ಬಂಗಾರದ ಆಭರಣಗಳು ಸೇರಿ ಒಟ್ಟು ₹1.30 ಕೋಟಿ ಮೊತ್ತದ ವಸ್ತುಗಳು ಇರುವುದಾಗಿ ಪೊಲೀಸ್ ಇಲಾಖೆ ಹೇಳಿದೆ.</p>.<p>ಆತನಿಗೆ ಸಂಬಂಧಿಸಿದ ವಿವಿಧ ಖಾತೆಗಳಲ್ಲಿ ₹29.97 ಲಕ್ಷ ಹಣ ಇದ್ದು, ಖಾತೆಗಳನ್ನು ಸ್ಥಗಿತಗೊಳಿಸಿರುವುದಾಗಿ ಇಲಾಖೆ ಹೇಳಿದರು.</p>.<p>ಆರೋಪಿ ವಿರುದ್ಧ ಎಪಿಎಂಸಿ ಠಾಣೆಯಲ್ಲಿ ಎರಡು ಪ್ರಕರಣ, ಬಳ್ಳಾರಿ ಗ್ರಾಮೀಣ, ಪಿಡಿಹಳ್ಳಿಯಲ್ಲಿ ಠಾಣೆಗಳಲ್ಲಿ ತಲಾ ಒಂದೊಂದು ಕೇಸುಗಳಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಕೆಐಎಡಿಬಿಗೆ ವಂಚಿಸಿದ ಆರೋಪಿ ಸಂತೋಷ್ ಕುಮಾರ್, ಕೆಆರ್ಎಸ್ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ₹10 ಲಕ್ಷ ಖರ್ಚು ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿರುವುದಾಗಿ ಮಾಹಿತಿ ನೀಡಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-25-1087285154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>