<p><strong>ಕುರುಗೋಡು</strong>: ‘ತಾಲ್ಲೂಕಿನ ಕಲ್ಲುಕಂಭ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಆರಂಭಿಸಿದ ಬಹುತೇಕ ಕಾಮಗಾರಿಗಳು ಅರೆಬರೆಯಾಗಿವೆ. ಕೂಡಲೇ ಕಾರ್ಯಪ್ರವೃತ್ತರಾಗಿ, ಅವುಗಳನ್ನು ಪೂರ್ಣಗೊಳಿಸಬೇಕು’ ಎಂದು ರಾಜ್ಯ ಸಾಮಾಜಿಕ ಲೆಕ್ಕ ಪರಿಶೋಧನಾ ನಿರ್ದೇಶನಾಲಯದ ನಿರ್ದೇಶಕ ಕೆ.ಸಿ. ಮಲ್ಲಪ್ಪ ತಾಕೀತು ಮಾಡಿದರು.</p>.<p>ತಾಲ್ಲೂಕಿನ ಕಲ್ಲುಕಂಭ ಗ್ರಾಮ ಪಂಚಾಯಿತಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ, ನರೇಗಾ ಯೋಜನೆಯ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.</p>.<p>‘ಉದ್ಯೋಗಕ್ಕಾಗಿ ನೋಂದಾಯಿಸಿದ ಕಾರ್ಮಿಕರಿಗೆ ಜಾಗೃತಿ ಮೂಡಿಸಿ, ಕೆಲಸಕ್ಕೆ ಕರೆತರಬೇಕು. ನನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ, ವರ್ಷಕ್ಕೆ 100 ದಿನ ಉದ್ಯೋಗ ನೀಡುವ ಜತೆಗೆ ಪ್ರತಿಯೊಬ್ಬರಿಗೆ ದಿನಕ್ಕೆ ₹370 ನೀಡಬೇಕು’ ಎಂದು ಸೂಚಿಸಿದರು.</p>.<p>ಅರ್ಜಿ ಸಲ್ಲಿಸಿದರೂ ಸಕಾಲಕ್ಕೆ ಉದ್ಯೋಗ ನೀಡುತ್ತಿಲ್ಲ ಎಂಬ ಕಾರ್ಮಿಕರ ದೂರಿಗೆ ಪ್ರತಿಕ್ರಿಯಿಸಿದ ಅವರು, ‘ಉದ್ಯೋಗಕ್ಕಾಗಿ ನಮೂನೆ 6ರಲ್ಲಿ ಅರ್ಜಿ ಸಲ್ಲಿಸಿ. ನಿಗದಿತ ಅವಧಿಯೊಳಗೆ ಉದ್ಯೋಗ ನೀಡದಿದ್ದರೆ ಅಧಿಕಾರಿಗಳ ವೇತನದಲ್ಲಿ ಕೂಲಿ ಹಣ ಕೊಡಿಸುವೆ’ ಎಂದು ಭರವಸೆ ನೀಡಿದರು.</p>.<p>‘ವಿಬಿಜಿರಾಮ್ಜಿ ಯೋಜನೆಯಡಿ ಹೆಚ್ಚು ಮಾನವದಿನ ಸೃಜಿಸಲು ಯೋಜನೆ ತಯಾರಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಲೆಕ್ಕ ಪರಿಶೋಧನಾಧಿಕಾರಿ ಸೋಮಶೇಖರ್, ತಾಲ್ಲೂಕು ಲೆಕ್ಕ ಪರಿಶೋಧನಾಧಿಕಾರಿ ಶ್ರೀಧರ ಗೌಡ, ನರೇಗಾ ಉಪ ನಿರ್ದೇಶಕ ಶಿವರಾಮ ರೆಡ್ಡಿ ಮತ್ತು ಪಿಡಿಒ ಅನಿಲ್ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-25-1054611106</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು</strong>: ‘ತಾಲ್ಲೂಕಿನ ಕಲ್ಲುಕಂಭ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಆರಂಭಿಸಿದ ಬಹುತೇಕ ಕಾಮಗಾರಿಗಳು ಅರೆಬರೆಯಾಗಿವೆ. ಕೂಡಲೇ ಕಾರ್ಯಪ್ರವೃತ್ತರಾಗಿ, ಅವುಗಳನ್ನು ಪೂರ್ಣಗೊಳಿಸಬೇಕು’ ಎಂದು ರಾಜ್ಯ ಸಾಮಾಜಿಕ ಲೆಕ್ಕ ಪರಿಶೋಧನಾ ನಿರ್ದೇಶನಾಲಯದ ನಿರ್ದೇಶಕ ಕೆ.ಸಿ. ಮಲ್ಲಪ್ಪ ತಾಕೀತು ಮಾಡಿದರು.</p>.<p>ತಾಲ್ಲೂಕಿನ ಕಲ್ಲುಕಂಭ ಗ್ರಾಮ ಪಂಚಾಯಿತಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ, ನರೇಗಾ ಯೋಜನೆಯ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.</p>.<p>‘ಉದ್ಯೋಗಕ್ಕಾಗಿ ನೋಂದಾಯಿಸಿದ ಕಾರ್ಮಿಕರಿಗೆ ಜಾಗೃತಿ ಮೂಡಿಸಿ, ಕೆಲಸಕ್ಕೆ ಕರೆತರಬೇಕು. ನನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ, ವರ್ಷಕ್ಕೆ 100 ದಿನ ಉದ್ಯೋಗ ನೀಡುವ ಜತೆಗೆ ಪ್ರತಿಯೊಬ್ಬರಿಗೆ ದಿನಕ್ಕೆ ₹370 ನೀಡಬೇಕು’ ಎಂದು ಸೂಚಿಸಿದರು.</p>.<p>ಅರ್ಜಿ ಸಲ್ಲಿಸಿದರೂ ಸಕಾಲಕ್ಕೆ ಉದ್ಯೋಗ ನೀಡುತ್ತಿಲ್ಲ ಎಂಬ ಕಾರ್ಮಿಕರ ದೂರಿಗೆ ಪ್ರತಿಕ್ರಿಯಿಸಿದ ಅವರು, ‘ಉದ್ಯೋಗಕ್ಕಾಗಿ ನಮೂನೆ 6ರಲ್ಲಿ ಅರ್ಜಿ ಸಲ್ಲಿಸಿ. ನಿಗದಿತ ಅವಧಿಯೊಳಗೆ ಉದ್ಯೋಗ ನೀಡದಿದ್ದರೆ ಅಧಿಕಾರಿಗಳ ವೇತನದಲ್ಲಿ ಕೂಲಿ ಹಣ ಕೊಡಿಸುವೆ’ ಎಂದು ಭರವಸೆ ನೀಡಿದರು.</p>.<p>‘ವಿಬಿಜಿರಾಮ್ಜಿ ಯೋಜನೆಯಡಿ ಹೆಚ್ಚು ಮಾನವದಿನ ಸೃಜಿಸಲು ಯೋಜನೆ ತಯಾರಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಲೆಕ್ಕ ಪರಿಶೋಧನಾಧಿಕಾರಿ ಸೋಮಶೇಖರ್, ತಾಲ್ಲೂಕು ಲೆಕ್ಕ ಪರಿಶೋಧನಾಧಿಕಾರಿ ಶ್ರೀಧರ ಗೌಡ, ನರೇಗಾ ಉಪ ನಿರ್ದೇಶಕ ಶಿವರಾಮ ರೆಡ್ಡಿ ಮತ್ತು ಪಿಡಿಒ ಅನಿಲ್ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-25-1054611106</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>