<p>ಕುರುಗೋಡು: ತಾಲ್ಲೂಕಿನ ಎಚ್.ವೀರಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿದ ಮಹಿಳೆಯರು ಗ್ರಾಮ ಪಂಚಾಯಿತಿಗೆ ಮುತ್ತಿಗೆಹಾಕಿ ಶನಿವಾರ ಪ್ರತಿಭಟಿಸಿದರು.</p>.<p>ಕುಡಿಯುವ ನೀರಿಗಾಗಿ ತುಂಗಭದ್ರಾ ಜಲಾಶಯದಿಂದ ಕೆಳಮಟ್ಟದ ಕಾಲುವೆಗೆ ನೀರು ಬಿಡಲಾಗಿದ್ದು, ಕೆರೆ ತುಂಬಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇದುವರೆಗೂ ಕ್ರಮ ವಹಿಸಿಲ್ಲ. ಕಾಲುವೆಯಿಂದ ಕೆರೆವರೆಗೆ 8 ಕಿ.ಮೀ. ದೂರದ ಪೈಪ್ಲೈಲ್ ನಿರ್ಮಾಣ ಬಾಕಿಯಿದ್ದು, ಕೆರೆ ನಿರ್ವಹಣೆಗೆ ₹58 ಲಕ್ಷ ಬಿಡುಗಡೆಯಾದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ್ ಪ್ರತಿಕ್ರಿಯಿಸಿ, ‘ಗ್ರಾಮ ಪಂಚಾಯಿತಿ ಸಿಬ್ಬಂದಿ ಬಳಕೆಗೆ ನಿತ್ಯ ನೀರು ಸರಬರಾಜು ಮಾಡುತ್ತಿದ್ದಾರೆ. ಕೆರೆಗೆ ನೀರು ತುಂಬಿಸುವ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗಮನಕ್ಕೆ ತರಲಾಗುವುದು’ ಎಂದು ಭರವಸೆ ನೀಡಿದರು.</p>.<p>ಪಿಡಿಒ ಅವರ ಭರವಸೆ ಮೇರೆಗೆ ಜನರು ಪ್ರತಿಭಟನೆ ಹಿಂದಕ್ಕೆ ಪಡೆದರು. ಎನ್.ನೀಲಮ್ಮ, ಬಾರಿಕರ ದುರುಗಪ್ಪ, ಜಾಲಮ್ಮ, ಹುಸೇನ್ ಬಾಷಾ, ಶೇಖರಪ್ಪ ಮತ್ತು ಬೋಡರಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-25-1155549670</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುರುಗೋಡು: ತಾಲ್ಲೂಕಿನ ಎಚ್.ವೀರಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿದ ಮಹಿಳೆಯರು ಗ್ರಾಮ ಪಂಚಾಯಿತಿಗೆ ಮುತ್ತಿಗೆಹಾಕಿ ಶನಿವಾರ ಪ್ರತಿಭಟಿಸಿದರು.</p>.<p>ಕುಡಿಯುವ ನೀರಿಗಾಗಿ ತುಂಗಭದ್ರಾ ಜಲಾಶಯದಿಂದ ಕೆಳಮಟ್ಟದ ಕಾಲುವೆಗೆ ನೀರು ಬಿಡಲಾಗಿದ್ದು, ಕೆರೆ ತುಂಬಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇದುವರೆಗೂ ಕ್ರಮ ವಹಿಸಿಲ್ಲ. ಕಾಲುವೆಯಿಂದ ಕೆರೆವರೆಗೆ 8 ಕಿ.ಮೀ. ದೂರದ ಪೈಪ್ಲೈಲ್ ನಿರ್ಮಾಣ ಬಾಕಿಯಿದ್ದು, ಕೆರೆ ನಿರ್ವಹಣೆಗೆ ₹58 ಲಕ್ಷ ಬಿಡುಗಡೆಯಾದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ್ ಪ್ರತಿಕ್ರಿಯಿಸಿ, ‘ಗ್ರಾಮ ಪಂಚಾಯಿತಿ ಸಿಬ್ಬಂದಿ ಬಳಕೆಗೆ ನಿತ್ಯ ನೀರು ಸರಬರಾಜು ಮಾಡುತ್ತಿದ್ದಾರೆ. ಕೆರೆಗೆ ನೀರು ತುಂಬಿಸುವ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗಮನಕ್ಕೆ ತರಲಾಗುವುದು’ ಎಂದು ಭರವಸೆ ನೀಡಿದರು.</p>.<p>ಪಿಡಿಒ ಅವರ ಭರವಸೆ ಮೇರೆಗೆ ಜನರು ಪ್ರತಿಭಟನೆ ಹಿಂದಕ್ಕೆ ಪಡೆದರು. ಎನ್.ನೀಲಮ್ಮ, ಬಾರಿಕರ ದುರುಗಪ್ಪ, ಜಾಲಮ್ಮ, ಹುಸೇನ್ ಬಾಷಾ, ಶೇಖರಪ್ಪ ಮತ್ತು ಬೋಡರಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-25-1155549670</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>