<p>ಮರಿಯಮ್ಮನಹಳ್ಳಿ: ಪಟ್ಟಣ ಸಮೀಪದ ತಾಳೇಬಸಾಪುರ ತಾಂಡಾದಲ್ಲಿ ಗುರುವಾರ ಸಂಜೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ.</p>.<p>ತಾಂಡಾದ ಶಂಕರ್ ನಾಯ್ಕ್ ಎನ್ನುವರಿಗೆ ಸೇರಿದ ಎತ್ತುಗಳಾಗಿದ್ದು, ಅಂದಾಜು ₹2 ಲಕ್ಷ ನಷ್ಟ ಸಂಭವಿಸಿದೆ.</p>.<p>ಮಧ್ಯಾಹ್ನ 3.30ರ ಸುಮಾರಿಗೆ ಭಾರಿ ಗಾಳಿ, ಗುಡುಗು ಸಮೇತ ಮಳೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಸಿಡಿಲು ಮರಕ್ಕೆ ಬಡಿದು ಕಣದಲ್ಲಿ ಮರಕ್ಕೆ ಕಟ್ಟಿಹಾಕಿದ್ದ ಎರಡು ಎತ್ತುಗಳು ಬಲಿಯಾಗಿವೆ.</p>.<p>ವಿದ್ಯುತ್ ಅವಗಡ: ನಾಲ್ಕು ಕುರಿ ಸಾವು</p>.<p>ಸಂಡೂರು: ತಾಲ್ಲೂಕಿನ ಚೋರುನೂರು ಹೋಬಳಿಯ ಓಬಳಾಪುರ ಗ್ರಾಮದಲ್ಲಿ ವಿದ್ಯುತ್ ತಂತಿ ತಾಗಿ ಮನೆ, ಕುರಿ ಶೆಡ್ನಲ್ಲಿದ್ದ ನಾಲ್ಕು ಕುರಿಗಳು ಸುಟ್ಟು ಕರಕಲಾದ ಘಟನೆ ಗುರುವಾರ ಜರುಗಿದೆ.</p>.<p>ಓಬಳಾಪುರ ಗ್ರಾಮದಲ್ಲಿನ ನಿವಾಸಿ ಸಣ್ಣ ತಿಪ್ಪೇಸ್ವಾಮಿ ಅವರಿಗೆ ಸೇರಿದ ಮನೆಯಾಗಿದ್ದು, ಮನೆಯ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದು ಮನೆಗೆ ವಿದ್ಯುತ್ ತಂತಿ ತಾಗಿದ್ದರಿಂದ ಬೆಂಕಿ ಉಂಟಾಗಿ ಮನೆ ಸಂಪೂರ್ಣವಾಗಿ ಸುಟ್ಟು ಕುರಿ ಶೆಡ್ನಲ್ಲಿದ್ದ ನಾಲ್ಕು ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ.</p>.<p>ಮನೆಯಲ್ಲಿದ್ದ ದವಸ ಧಾನ್ಯಗಳು ಸೇರಿದಂತೆ ಇತರೆ ವಸ್ತುಗಳು ಸುಟ್ಟಿದ್ದು ಅಂದಾಜು ₹1 ಲಕ್ಷಕ್ಕೂ ಅಧಿಕ ನಷ್ಟವಾಗಿದೆ. ಘಟನಾ ಸ್ಥಳಕ್ಕೆ ಸಂಡೂರಿನ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ತೆರಳಿ ಬೆಂಕಿ ನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-25-1572046798</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮರಿಯಮ್ಮನಹಳ್ಳಿ: ಪಟ್ಟಣ ಸಮೀಪದ ತಾಳೇಬಸಾಪುರ ತಾಂಡಾದಲ್ಲಿ ಗುರುವಾರ ಸಂಜೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ.</p>.<p>ತಾಂಡಾದ ಶಂಕರ್ ನಾಯ್ಕ್ ಎನ್ನುವರಿಗೆ ಸೇರಿದ ಎತ್ತುಗಳಾಗಿದ್ದು, ಅಂದಾಜು ₹2 ಲಕ್ಷ ನಷ್ಟ ಸಂಭವಿಸಿದೆ.</p>.<p>ಮಧ್ಯಾಹ್ನ 3.30ರ ಸುಮಾರಿಗೆ ಭಾರಿ ಗಾಳಿ, ಗುಡುಗು ಸಮೇತ ಮಳೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಸಿಡಿಲು ಮರಕ್ಕೆ ಬಡಿದು ಕಣದಲ್ಲಿ ಮರಕ್ಕೆ ಕಟ್ಟಿಹಾಕಿದ್ದ ಎರಡು ಎತ್ತುಗಳು ಬಲಿಯಾಗಿವೆ.</p>.<p>ವಿದ್ಯುತ್ ಅವಗಡ: ನಾಲ್ಕು ಕುರಿ ಸಾವು</p>.<p>ಸಂಡೂರು: ತಾಲ್ಲೂಕಿನ ಚೋರುನೂರು ಹೋಬಳಿಯ ಓಬಳಾಪುರ ಗ್ರಾಮದಲ್ಲಿ ವಿದ್ಯುತ್ ತಂತಿ ತಾಗಿ ಮನೆ, ಕುರಿ ಶೆಡ್ನಲ್ಲಿದ್ದ ನಾಲ್ಕು ಕುರಿಗಳು ಸುಟ್ಟು ಕರಕಲಾದ ಘಟನೆ ಗುರುವಾರ ಜರುಗಿದೆ.</p>.<p>ಓಬಳಾಪುರ ಗ್ರಾಮದಲ್ಲಿನ ನಿವಾಸಿ ಸಣ್ಣ ತಿಪ್ಪೇಸ್ವಾಮಿ ಅವರಿಗೆ ಸೇರಿದ ಮನೆಯಾಗಿದ್ದು, ಮನೆಯ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದು ಮನೆಗೆ ವಿದ್ಯುತ್ ತಂತಿ ತಾಗಿದ್ದರಿಂದ ಬೆಂಕಿ ಉಂಟಾಗಿ ಮನೆ ಸಂಪೂರ್ಣವಾಗಿ ಸುಟ್ಟು ಕುರಿ ಶೆಡ್ನಲ್ಲಿದ್ದ ನಾಲ್ಕು ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ.</p>.<p>ಮನೆಯಲ್ಲಿದ್ದ ದವಸ ಧಾನ್ಯಗಳು ಸೇರಿದಂತೆ ಇತರೆ ವಸ್ತುಗಳು ಸುಟ್ಟಿದ್ದು ಅಂದಾಜು ₹1 ಲಕ್ಷಕ್ಕೂ ಅಧಿಕ ನಷ್ಟವಾಗಿದೆ. ಘಟನಾ ಸ್ಥಳಕ್ಕೆ ಸಂಡೂರಿನ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ತೆರಳಿ ಬೆಂಕಿ ನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-25-1572046798</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>