ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಉಮೇದುವರಿಕೆ ಸಲ್ಲಿಸಿದರು.
ಶ್ರೀರಾಮುಲು ಅವರೊಂದಿಗೆ ಪತ್ನಿ ಭಾಗ್ಯಲಕ್ಷ್ಮಿ, ಪುತ್ರಿಯರು, ಜನಾರ್ದನ ರೆಡ್ಡಿ ಪತ್ನಿ ಅರುಣಾ, ಮಾಜಿ ಸಚಿವ ಆನಂದ್ ಸಿಂಗ್, ಶಾಸಕ ಕೃಷ್ಣ ನಾಯಕ್, ನೇಮರಾಜ್ ನಾಯಕ್ ಇದ್ದರು