<p><strong>ಬಳ್ಳಾರಿ</strong>: ‘ವೈದ್ಯಕೀಯ ತ್ಯಾಜ್ಯ’ ಅಥವಾ ‘ಜೈವಿಕ ತ್ಯಾಜ್ಯ’ದ ವಿಲೇವಾರಿಯನ್ನು ಸಮರ್ಪಕವಾಗಿ ಮಾಡದ ನಗರದ ಎರಡು ಖಾಸಗಿ ಆಸ್ಪತ್ರೆಗಳಿಗೆ ಬಳ್ಳಾರಿ ಮಹಾನಗರ ಪಾಲಿಕೆ ಬುಧವಾರ ಕಸದ ಪಾಠ ಹೇಳಿಕೊಟ್ಟಿದೆ. </p>.<p>ಕಸದ ವಿಲೇವಾರಿ ನಿಯಮಗಳನ್ನು ಉಲ್ಲಂಘಿಸಿದ ಇಲ್ಲಿನ ಪಾರ್ವತಿ ನಗರ ‘ಪದ್ಮಾ ಕಿಡ್ನಿಕೇರ್ ಸೆಂಟರ್’ ಹಾಗೂ ಮೋಕಾ ರಸ್ತೆಯ ‘ದ್ವಾರಕಾ ಆಸ್ಪತ್ರೆ’ ಮುಂದೆ ಪಾಲಿಕೆಯ ಪೌರ ಕಾರ್ಮಿಕರು ಕಸ ಸುರಿದು ಎಚ್ಚರಿಕೆ ನೀಡಿದ್ದಾರೆ. </p>.<p>ಕಸದ ವಾಹನಗಳು ನಿತ್ಯ ಆಸ್ಪತ್ರೆಗಳ ಬಳಿಗೆ ಹೋಗುತ್ತಿದ್ದರೂ ಪದ್ಮಾ ಕಿಡ್ನಿಕೇರ್ ಸೆಂಟರ್ ಹಾಗೂ ದ್ವಾರಕಾ ಆಸ್ಪತ್ರೆಗಳು ಕಸವನ್ನು ರಸ್ತೆಗೆ ಎಸೆಯುತ್ತಿದ್ದವು. ವೈದ್ಯಕೀಯ ತ್ಯಾಜ್ಯ ಮತ್ತು ಜೈವಿಕ ತ್ಯಾಜ್ಯ ಅಪಾಯಕಾರಿಯಾಗಿದ್ದು, ಅದನ್ನು ಮತ್ತೆ ಕಸದ ವಾಹನಕ್ಕೆ ತುಂಬಲು ಪೌರಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದರು. </p>.<p>‘ಕಸವನ್ನು ರಸ್ತೆಗೆ ಹಾಕಬೇಡಿ. ಪಾಲಿಕೆ ವಾಹನಕ್ಕೆ ನೀಡುವಂತೆ ಅನೇಕ ಬಾರಿ ತಿಳಿಸಿ ಹೇಳಲಾಗಿತ್ತು. ಆದರೂ ಕೆಲವು ಆಸ್ಪತ್ರೆಗಳು ರಸ್ತೆಗೆ ಕಸ ಸುರಿಯುತ್ತಿವೆ. ಹೀಗಾಗಿ ಕಸವನ್ನು ಆಸ್ಪತ್ರೆಯ ಮುಂದೆ ಸುರಿದು, ದಂಡ ಹಾಕುವ ಪ್ರಕ್ರಿಯೆ ಆರಂಭಿಸಿದ್ದೇವೆ. ಕಸ ಸುರಿಯುವ ಕೆಲಸ ಮುಂದುವರಿಯಲಿದೆ. ನಗರದಾದ್ಯಂತ ಈ ಕಾರ್ಯ ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದೇವೆ. ಸದ್ಯ ಈ ಎರಡೂ ಆಸ್ಪತ್ರೆಗೆಗಳಿಗೆ ದಂಡ ವಿಧಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<div><blockquote>ವೈದ್ಯಕೀಯ ತ್ಯಾಜ್ಯ ವಿಲೇವಾರಿ ಅತ್ಯಂತ ಅಪಾಯಕಾರಿ ಎಂಬುದು ತಿಳಿದೂ ಕೆಲ ಆಸ್ಪತ್ರೆಗಳು ಕಸದ ವಿಚಾರದಲ್ಲಿ ಬೇಜವಾಬ್ದಾರಿಯಿಂದ ವರ್ತಿಸುತ್ತಿವೆ. ಆದ್ದರಿಂದಲೇ ಇಂಥ ಮಾರ್ಗ ಅನುಸರಿಸಲಾಯಿತು. ಇದು ಪ್ರತಿ ಆಸ್ಪತ್ರೆಗಳಿಗೆ ಎಚ್ಚರಿಕೆಯಾಗಲಿದೆ. -</blockquote><span class="attribution">ಮಂಜುನಾಥ್ ಪಾಲಿಕೆ ಆಯುಕ್ತ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ವೈದ್ಯಕೀಯ ತ್ಯಾಜ್ಯ’ ಅಥವಾ ‘ಜೈವಿಕ ತ್ಯಾಜ್ಯ’ದ ವಿಲೇವಾರಿಯನ್ನು ಸಮರ್ಪಕವಾಗಿ ಮಾಡದ ನಗರದ ಎರಡು ಖಾಸಗಿ ಆಸ್ಪತ್ರೆಗಳಿಗೆ ಬಳ್ಳಾರಿ ಮಹಾನಗರ ಪಾಲಿಕೆ ಬುಧವಾರ ಕಸದ ಪಾಠ ಹೇಳಿಕೊಟ್ಟಿದೆ. </p>.<p>ಕಸದ ವಿಲೇವಾರಿ ನಿಯಮಗಳನ್ನು ಉಲ್ಲಂಘಿಸಿದ ಇಲ್ಲಿನ ಪಾರ್ವತಿ ನಗರ ‘ಪದ್ಮಾ ಕಿಡ್ನಿಕೇರ್ ಸೆಂಟರ್’ ಹಾಗೂ ಮೋಕಾ ರಸ್ತೆಯ ‘ದ್ವಾರಕಾ ಆಸ್ಪತ್ರೆ’ ಮುಂದೆ ಪಾಲಿಕೆಯ ಪೌರ ಕಾರ್ಮಿಕರು ಕಸ ಸುರಿದು ಎಚ್ಚರಿಕೆ ನೀಡಿದ್ದಾರೆ. </p>.<p>ಕಸದ ವಾಹನಗಳು ನಿತ್ಯ ಆಸ್ಪತ್ರೆಗಳ ಬಳಿಗೆ ಹೋಗುತ್ತಿದ್ದರೂ ಪದ್ಮಾ ಕಿಡ್ನಿಕೇರ್ ಸೆಂಟರ್ ಹಾಗೂ ದ್ವಾರಕಾ ಆಸ್ಪತ್ರೆಗಳು ಕಸವನ್ನು ರಸ್ತೆಗೆ ಎಸೆಯುತ್ತಿದ್ದವು. ವೈದ್ಯಕೀಯ ತ್ಯಾಜ್ಯ ಮತ್ತು ಜೈವಿಕ ತ್ಯಾಜ್ಯ ಅಪಾಯಕಾರಿಯಾಗಿದ್ದು, ಅದನ್ನು ಮತ್ತೆ ಕಸದ ವಾಹನಕ್ಕೆ ತುಂಬಲು ಪೌರಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದರು. </p>.<p>‘ಕಸವನ್ನು ರಸ್ತೆಗೆ ಹಾಕಬೇಡಿ. ಪಾಲಿಕೆ ವಾಹನಕ್ಕೆ ನೀಡುವಂತೆ ಅನೇಕ ಬಾರಿ ತಿಳಿಸಿ ಹೇಳಲಾಗಿತ್ತು. ಆದರೂ ಕೆಲವು ಆಸ್ಪತ್ರೆಗಳು ರಸ್ತೆಗೆ ಕಸ ಸುರಿಯುತ್ತಿವೆ. ಹೀಗಾಗಿ ಕಸವನ್ನು ಆಸ್ಪತ್ರೆಯ ಮುಂದೆ ಸುರಿದು, ದಂಡ ಹಾಕುವ ಪ್ರಕ್ರಿಯೆ ಆರಂಭಿಸಿದ್ದೇವೆ. ಕಸ ಸುರಿಯುವ ಕೆಲಸ ಮುಂದುವರಿಯಲಿದೆ. ನಗರದಾದ್ಯಂತ ಈ ಕಾರ್ಯ ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದೇವೆ. ಸದ್ಯ ಈ ಎರಡೂ ಆಸ್ಪತ್ರೆಗೆಗಳಿಗೆ ದಂಡ ವಿಧಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<div><blockquote>ವೈದ್ಯಕೀಯ ತ್ಯಾಜ್ಯ ವಿಲೇವಾರಿ ಅತ್ಯಂತ ಅಪಾಯಕಾರಿ ಎಂಬುದು ತಿಳಿದೂ ಕೆಲ ಆಸ್ಪತ್ರೆಗಳು ಕಸದ ವಿಚಾರದಲ್ಲಿ ಬೇಜವಾಬ್ದಾರಿಯಿಂದ ವರ್ತಿಸುತ್ತಿವೆ. ಆದ್ದರಿಂದಲೇ ಇಂಥ ಮಾರ್ಗ ಅನುಸರಿಸಲಾಯಿತು. ಇದು ಪ್ರತಿ ಆಸ್ಪತ್ರೆಗಳಿಗೆ ಎಚ್ಚರಿಕೆಯಾಗಲಿದೆ. -</blockquote><span class="attribution">ಮಂಜುನಾಥ್ ಪಾಲಿಕೆ ಆಯುಕ್ತ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>