<p>ಬಳ್ಳಾರಿ: ಮಹರ್ಷಿ ವಾಲ್ಮೀಕಿ ವೃತ್ತ ಸಮೀಪದ ಶಾಸಕರ ವಿಶೇಷ ಅನುದಾನದ ಅಡಿ ನಿರ್ಮಾಣ ಮಾಡಲಾಗಿರುವ ಮಳಿಗೆಗಳನ್ನು ಗುರುವಾರ ಶಾಸಕ ನಾರಾ ಭರತ್ ರೆಡ್ಡಿ ಬೀದಿ ಬದಿ ವ್ಯಾಪಾರಿಗಳಿಗೆ ವಿತರಿಸಿದರು.</p>.<p>ಚೀಟಿ ಎತ್ತಿ ಫಲಾನುಭವಿಗಳ ಆಯ್ಕೆ ಮಾಡಿ, ಮಳಿಗೆಗಳನ್ನು ವಿತರಣೆ ಮಾಡಲಾಯಿತು.</p>.<p>ಬಳಿಕ ಬಳ್ಳಾರಿಯ 39ನೇ ವಾರ್ಡ್ ವ್ಯಾಪ್ತಿಯ ನೇತಾಜಿ ನಗರದ ಶ್ರೀಗಣೇಶ ದೇವಸ್ಥಾನದ ಬಳಿ ಅಂದಾಜು ₹80.63 ಲಕ್ಷ ವೆಚ್ಚದಲ್ಲಿ ಒಳ ಚರಂಡಿ ರಿಪೇರಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ವಾರ್ಡ್ ಸಂಖ್ಯೆ 36ರ ವ್ಯಾಪ್ತಿಯ ಅವ್ವಂಬಾವಿ ಕಾಲುವೆ ಬಳಿ ರಸ್ತೆ ಅಭಿವೃದ್ಧಿ, ಮಳೆ ನೀರು ಚರಂಡಿ, ಒಳ ಚರಂಡಿ ಹಾಗೂ ಪೇವರ್ಸ್ ಅಳವಡಿಕೆಗೆ ಅಂದಾಜು ₹2 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇದೇ ವಾರ್ಡಿನ ಅವ್ವಂಬಾವಿ ಕಾಲುವೆ ಬಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯ ನಿರ್ಮಾಣಕ್ಕಾಗಿ ಅಂದಾಜು ₹16.5 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದೆ.</p>.<p>ಗಡಿಗಿ ಚನ್ನಪ್ಪ ವೃತ್ತ ಬಳಿ ಆಗುತ್ತಿರುವ ಸಂಚಾರ ಸಮಸ್ಯೆಯನ್ನು ಪರಿಶೀಲಿಸಿದರು. ಪಾಲಿಕೆಯ ಆಯುಕ್ತರು, ಅಧಿಕಾರಿಗಳು ಹಾಗೂ ಸಂಚಾರಿ ಪೊಲೀಸರಿಗೆ ಸಲಹೆ, ಸೂಚನೆ ನೀಡಿದರು.</p>.<p>ನಿರ್ಮಾಣ ಹಂತದಲ್ಲಿರುವ ಗುಗ್ಗರಹಟ್ಟಿಯ ಸೇತುವೆ, ರಸ್ತೆಯ ಕಾಮಗಾರಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-25-1314207633</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಮಹರ್ಷಿ ವಾಲ್ಮೀಕಿ ವೃತ್ತ ಸಮೀಪದ ಶಾಸಕರ ವಿಶೇಷ ಅನುದಾನದ ಅಡಿ ನಿರ್ಮಾಣ ಮಾಡಲಾಗಿರುವ ಮಳಿಗೆಗಳನ್ನು ಗುರುವಾರ ಶಾಸಕ ನಾರಾ ಭರತ್ ರೆಡ್ಡಿ ಬೀದಿ ಬದಿ ವ್ಯಾಪಾರಿಗಳಿಗೆ ವಿತರಿಸಿದರು.</p>.<p>ಚೀಟಿ ಎತ್ತಿ ಫಲಾನುಭವಿಗಳ ಆಯ್ಕೆ ಮಾಡಿ, ಮಳಿಗೆಗಳನ್ನು ವಿತರಣೆ ಮಾಡಲಾಯಿತು.</p>.<p>ಬಳಿಕ ಬಳ್ಳಾರಿಯ 39ನೇ ವಾರ್ಡ್ ವ್ಯಾಪ್ತಿಯ ನೇತಾಜಿ ನಗರದ ಶ್ರೀಗಣೇಶ ದೇವಸ್ಥಾನದ ಬಳಿ ಅಂದಾಜು ₹80.63 ಲಕ್ಷ ವೆಚ್ಚದಲ್ಲಿ ಒಳ ಚರಂಡಿ ರಿಪೇರಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ವಾರ್ಡ್ ಸಂಖ್ಯೆ 36ರ ವ್ಯಾಪ್ತಿಯ ಅವ್ವಂಬಾವಿ ಕಾಲುವೆ ಬಳಿ ರಸ್ತೆ ಅಭಿವೃದ್ಧಿ, ಮಳೆ ನೀರು ಚರಂಡಿ, ಒಳ ಚರಂಡಿ ಹಾಗೂ ಪೇವರ್ಸ್ ಅಳವಡಿಕೆಗೆ ಅಂದಾಜು ₹2 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇದೇ ವಾರ್ಡಿನ ಅವ್ವಂಬಾವಿ ಕಾಲುವೆ ಬಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯ ನಿರ್ಮಾಣಕ್ಕಾಗಿ ಅಂದಾಜು ₹16.5 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದೆ.</p>.<p>ಗಡಿಗಿ ಚನ್ನಪ್ಪ ವೃತ್ತ ಬಳಿ ಆಗುತ್ತಿರುವ ಸಂಚಾರ ಸಮಸ್ಯೆಯನ್ನು ಪರಿಶೀಲಿಸಿದರು. ಪಾಲಿಕೆಯ ಆಯುಕ್ತರು, ಅಧಿಕಾರಿಗಳು ಹಾಗೂ ಸಂಚಾರಿ ಪೊಲೀಸರಿಗೆ ಸಲಹೆ, ಸೂಚನೆ ನೀಡಿದರು.</p>.<p>ನಿರ್ಮಾಣ ಹಂತದಲ್ಲಿರುವ ಗುಗ್ಗರಹಟ್ಟಿಯ ಸೇತುವೆ, ರಸ್ತೆಯ ಕಾಮಗಾರಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-25-1314207633</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>