ಯಾವ ಗೊಂದಲವೂ ಇಲ್ಲ ಪಕ್ಷದ ಎಲ್ಲಾ ಕಾರ್ಪೊರೇಟರ್ಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಒಬ್ಬೊಬ್ಬರನ್ನೇ ಕರೆದು ಮಾತನಾಡಿಸಿದ್ದೇವೆ. ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಎಲ್ಲರೂ ಹೇಳಿದ್ದಾರೆ. ಹಿಂದಿನ ಚುನಾವಣೆಗಳಂತೆ ಈ ಬಾರಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಪಕ್ಷ ಸೂಚಿಸುವವರು ಮೇಯರ್ ಆಗಿ ಆಯ್ಕೆಯಾಗಲಿದ್ದಾರೆ. ಚುನಾವಣೆ ಸುಸೂತ್ರವಾಗಿ ನೆರವೇರಲಿದೆ.– ನಾರಾಯಣಸ್ವಾಮಿ ಕಾಂಗ್ರೆಸ್ ವೀಕ್ಷಕ
ಬೆಂಬಲ ಕೋರಿಲ್ಲ ಕೋನಂಕಿ ತಿಲಕ್ ಅವರನ್ನು ಮೇಯರ್ ಸ್ಥಾನಕ್ಕೆ ಮತ್ತು ಸುರೇಖಾ ಮಲ್ಲನಗೌಡ ಅವರನ್ನು ಉಪ ಮೇಯರ್ ಸ್ಥಾನದ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದ್ದೇವೆ. ಪಕ್ಷೇತರರೊಬ್ಬರು ಮೇಯರ್ ಚುನಾವಣೆಗೆ ಆಕಾಂಕ್ಷಿಯಾಗಿದ್ದಾರೆ. ಅವರು ನಮ್ಮ ಬೆಂಬಲ ಕೇಳಿಲ್ಲ. ಬಿಜೆಪಿ ಬೆಂಬಲ ಕೋರಿದ್ದರೆ ಪರಿಶೀಲಿಸಬಹುದಿತ್ತು. ಆದರೆ ಅವರು ಕಾಂಗ್ರೆಸ್ನೊಂದಿಗೆ ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ನಮ್ಮ ಬೆಂಬಲ ಇಲ್ಲ.ಅನಿಲ್ ಕುಮಾರ್ ಮೋಕಾ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.