<p><strong>ಬಳ್ಳಾರಿ</strong>: ನಗರದ ರೂಪನಗುಡಿ ರಸ್ತೆಯ ಹಳೇ ರೈಸ್ಮಿಲ್ ಎದುರು ನಡೆದಿದ್ದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. </p>.<p>‘ಮದ್ಯ ಖರೀದಿಗೆ ₹300 ಕೊಡದೇ ಇದ್ದದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ್ದಾಗಿ ಆರೋಪಿಗಳಾದ ಬಾಲರಾಜ್ (22), ಹನುಮಂತ (20) ತಪ್ಪೊಪ್ಪಿಕೊಂಡಿದ್ದಾರೆ. ಮೃತನ ಸುಳಿವು ಇನ್ನೂ ಪತ್ತೆಯಾಗಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ತಿಳಿಸಿದರು.</p>.<p>‘ಮದ್ಯ ಸೇವಿಸಿ ಅಂಗಡಿಯೊಂದರ ಎದುರು ಮಲಗಿದ್ದ ವ್ಯಕ್ತಿಯನ್ನು ಆರೋಪಿಗಳು ಎಬ್ಬಿಸಿ ₹300 ಹಣ ಕೇಳಿದ್ದರು. ಇದರಿಂದ ಕುಪಿತಗೊಂಡು ಆತ ರೇಗಾಡಿದ್ದ. ಆಗ ವ್ಯಕ್ತಿಯನ್ನು ಅಲ್ಲಿಂದ ಬೇರೆ ಕಡೆಗೆ ಎಳೆದೊಯ್ದಿದ್ದ ಇಬ್ಬರೂ ಆರೋಪಿಗಳು ಹಣ ಕೊಡುವಂತೆ ಪೀಡಿಸಿದ್ದರು. ಹಣ ಕೊಡದೇ ಇದ್ದಾಗ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ’ ಎಂದು ಹೇಳಿದರು.</p>.<p>‘ಅದಾಗಲೇ ಪಾನಮತ್ತರಾಗಿದ್ದ ಆರೋಪಿಗಳು ಮತ್ತೆ ಕುಡಿಯುವ ಉದ್ದೇಶಕ್ಕೆ ₹300 ಕೇಳಿದ್ದರು ಎನ್ನಲಾಗಿದೆ. ಸಿಸಿ ಕ್ಯಾಮೆರಾಗಳಲ್ಲಿನ ಚಲನವಲನ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಶೋಭಾರಾಣಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ನಗರದ ರೂಪನಗುಡಿ ರಸ್ತೆಯ ಹಳೇ ರೈಸ್ಮಿಲ್ ಎದುರು ನಡೆದಿದ್ದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. </p>.<p>‘ಮದ್ಯ ಖರೀದಿಗೆ ₹300 ಕೊಡದೇ ಇದ್ದದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ್ದಾಗಿ ಆರೋಪಿಗಳಾದ ಬಾಲರಾಜ್ (22), ಹನುಮಂತ (20) ತಪ್ಪೊಪ್ಪಿಕೊಂಡಿದ್ದಾರೆ. ಮೃತನ ಸುಳಿವು ಇನ್ನೂ ಪತ್ತೆಯಾಗಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ತಿಳಿಸಿದರು.</p>.<p>‘ಮದ್ಯ ಸೇವಿಸಿ ಅಂಗಡಿಯೊಂದರ ಎದುರು ಮಲಗಿದ್ದ ವ್ಯಕ್ತಿಯನ್ನು ಆರೋಪಿಗಳು ಎಬ್ಬಿಸಿ ₹300 ಹಣ ಕೇಳಿದ್ದರು. ಇದರಿಂದ ಕುಪಿತಗೊಂಡು ಆತ ರೇಗಾಡಿದ್ದ. ಆಗ ವ್ಯಕ್ತಿಯನ್ನು ಅಲ್ಲಿಂದ ಬೇರೆ ಕಡೆಗೆ ಎಳೆದೊಯ್ದಿದ್ದ ಇಬ್ಬರೂ ಆರೋಪಿಗಳು ಹಣ ಕೊಡುವಂತೆ ಪೀಡಿಸಿದ್ದರು. ಹಣ ಕೊಡದೇ ಇದ್ದಾಗ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ’ ಎಂದು ಹೇಳಿದರು.</p>.<p>‘ಅದಾಗಲೇ ಪಾನಮತ್ತರಾಗಿದ್ದ ಆರೋಪಿಗಳು ಮತ್ತೆ ಕುಡಿಯುವ ಉದ್ದೇಶಕ್ಕೆ ₹300 ಕೇಳಿದ್ದರು ಎನ್ನಲಾಗಿದೆ. ಸಿಸಿ ಕ್ಯಾಮೆರಾಗಳಲ್ಲಿನ ಚಲನವಲನ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಶೋಭಾರಾಣಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>