<p><strong>ಬಳ್ಳಾರಿ:</strong> ‘ನಗರದಲ್ಲಿ ನಿವಾಸಿ ಕೇಂದ್ರಿತ ಆಧಾರ್ ಸೇವೆಗಳನ್ನು ಮತ್ತಷ್ಟು ಬಲಪಡಿಸಲು ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆ ಒದಗಿಸಲು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದಿಂದ ನೂತನ ಆಧಾರ್ ಕೇಂದ್ರ ಆರಂಭಿಸಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಹೇಳಿದರು.</p>.<p>ಇಲ್ಗಿನ ಲರದ ನೇತಾಜಿ ನಗರದಲ್ಲಿ ಬುಧವಾರ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ‘ಬಳ್ಳಾರಿಯ ಈ ನೂತನ ಕೇಂದ್ರವು ಆಧುನಿಕ ಸೌಕರ್ಯಗಳನ್ನು ಹೊಂದಿದೆ. ಜನರಿಗೆ ಸುಲಭವಾಗಿ ಸೇವೆಗಳನ್ನು ಒದಗಿಸಲು 4 ಕಾರ್ಯಾಚರಣಾ ಕಿಟ್ಗಳನ್ನು ಹೊಂದಿರುವ ‘ಮಾದರಿ-ಸಿ’ ಕೇಂದ್ರವಾಗಿದೆ. ಇಲ್ಲಿ ಹೊಸ ಆಧಾರ್ ದಾಖಲಾತಿ, ಜನಸಂಖ್ಯಾ ವಿವರಗಳ (ಹೆಸರು, ವಿಳಾಸ ಇತ್ಯಾದಿ) ನವೀಕರಣ, ಬಯೋಮೆಟ್ರಿಕ್ ನವೀಕರಣಗಳು, ದೋಷ ತಿದ್ದುಪಡಿ ಹಾಗೂ ಆಧಾರ್ಗೆ ಸಂಬಂಧಿಸಿದ ಕುಂದುಕೊರತೆಗಳ ಪರಿಹಾರ ಸೇವೆಗಳು ಲಭ್ಯವಿರಲಿವೆ’ ಎಂದರು.</p>.<p>‘ಸಾರ್ವಜನಿಕ ರಜಾದಿನಗಳನ್ನು ಹೊರತುಪಡಿಸಿ, ಈ ಕೇಂದ್ರವು ವಾರದ ಎಲ್ಲಾ ದಿನಗಳಲ್ಲೂ ಸಾರ್ವಜನಿಕರಿಗಾಗಿ ತೆರೆದಿರುತ್ತದೆ. ಯುಐಡಿಎಐ ನೇರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುವ ಈ ಕೇಂದ್ರವನ್ನು ಸಂಪೂರ್ಣವಾಗಿ ನಿವಾಸಿ ಸ್ನೇಹಿಯಾಗಿ ವಿನ್ಯಾಸ ಮಾಡಲಾಗಿದೆ. ವಿಶೇಷವಾಗಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗಾಗಿ ವೀಲ್ಚೇರ್ ಪ್ರವೇಶ (ರ್ಯಾಂಪ್), ಪ್ರತ್ಯೇಕ ವಿಶ್ರಾಂತಿ ಕೊಠಡಿಗಳು ಮತ್ತು ಮೀಸಲಾದ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳನ್ನು ಇಲ್ಲಿ ಅಳವಡಿಸಲಾಗಿದೆ’ ಎಂದರು.</p>.<p>ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಎಡಿಸಿ ಝುಬೇರ, ಆಧಾರ್ ಸೇವೆಗಳನ್ನು ಸಾರ್ವಜನಿಕರಿಗೆ ಯಾವುದೇ ತೊಂದರೆಯಿಲ್ಲದೆ ಪರಿಣಾಮಕಾರಿಯಾಗಿ ಒದಗಿಸಲು, ಪ್ರಸ್ತುತ ಅನುಸರಿಸಲಾಗುತ್ತಿರುವ ಆಧಾರ್ ದಾಖಲಾತಿ ಮತ್ತು ನವೀಕರಣ ಕಾರ್ಯವಿಧಾನಗಳ ಕುರಿತು ಮಾಹಿತಿ ಪಡೆದರು.</p>.<p>ಯುಐಡಿಎಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಉಪನಿರ್ದೇಶಕ ಗುಲ್ಶನ್ ಕುಮಾರ್ ಸಿಂಗ್ ಮಾತನಾಡಿ, ‘ಜನರು ಆಧಾರ್ ಸೇವೆಗಳಿಗಾಗಿ ಕೇಂದ್ರದಲ್ಲಿ ಸಾಲಿನಲ್ಲಿ ನಿಲ್ಲುವ ಬದಲು ಆನ್ಲೈನ್ ಮೂಲಕ ಮುಂಗಡ ಅಪಾಯಿಂಟ್ಮೆಂಟ್ ಬುಕ್ ಮಾಡಬಹುದು. 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಾಡಿಸಬೇಕಾದ ಬಯೋಮೆಟ್ರಿಕ್ ನವೀಕರಣಗಳನ್ನು ಸೆಪ್ಟೆಂಬರ್ 2026 ರವರೆಗೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದೆ. ಈ ಸೌಲಭ್ಯವು ಆಧಾರ್ ಸೇವಾ ಕೇಂದ್ರಗಳಲ್ಲದೆ, ಆಯಾ ಶಾಲೆಗಳಲ್ಲಿ ಆಯೋಜಿಸಲಾಗುವ ವಿಶೇಷ ಶಿಬಿರಗಳ ಮೂಲಕವೂ ಲಭ್ಯವಿರಲಿದೆ' ಎಂದು ವಿವರಿಸಿದರು.</p>.<p>ಯುಐಡಿಎಐ ಪ್ರಾದೇಶಿಕ ಕಚೇರಿಯ ಸಹಾಯಕ ವ್ಯವಸ್ಥಾಪಕ ಪ್ರಸಾದ್ ಬಾಬು, ಆಧಾರ್ ಕೇಂದ್ರದ ಸಿಬ್ಬಂದಿ ಹಾಗೂ ಸೇವಾ ಪೂರೈಕೆದಾರರಾದ ಎಂ/ಎಸ್ ಬಿಎಲ್ಎಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<p>ಯುಐಡಿಎಐ ಅಧಿಕೃತ ಪೋರ್ಟಲ್: https://bookappointment.uidai. gov.in</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-25-2030332039</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ನಗರದಲ್ಲಿ ನಿವಾಸಿ ಕೇಂದ್ರಿತ ಆಧಾರ್ ಸೇವೆಗಳನ್ನು ಮತ್ತಷ್ಟು ಬಲಪಡಿಸಲು ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆ ಒದಗಿಸಲು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದಿಂದ ನೂತನ ಆಧಾರ್ ಕೇಂದ್ರ ಆರಂಭಿಸಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಹೇಳಿದರು.</p>.<p>ಇಲ್ಗಿನ ಲರದ ನೇತಾಜಿ ನಗರದಲ್ಲಿ ಬುಧವಾರ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ‘ಬಳ್ಳಾರಿಯ ಈ ನೂತನ ಕೇಂದ್ರವು ಆಧುನಿಕ ಸೌಕರ್ಯಗಳನ್ನು ಹೊಂದಿದೆ. ಜನರಿಗೆ ಸುಲಭವಾಗಿ ಸೇವೆಗಳನ್ನು ಒದಗಿಸಲು 4 ಕಾರ್ಯಾಚರಣಾ ಕಿಟ್ಗಳನ್ನು ಹೊಂದಿರುವ ‘ಮಾದರಿ-ಸಿ’ ಕೇಂದ್ರವಾಗಿದೆ. ಇಲ್ಲಿ ಹೊಸ ಆಧಾರ್ ದಾಖಲಾತಿ, ಜನಸಂಖ್ಯಾ ವಿವರಗಳ (ಹೆಸರು, ವಿಳಾಸ ಇತ್ಯಾದಿ) ನವೀಕರಣ, ಬಯೋಮೆಟ್ರಿಕ್ ನವೀಕರಣಗಳು, ದೋಷ ತಿದ್ದುಪಡಿ ಹಾಗೂ ಆಧಾರ್ಗೆ ಸಂಬಂಧಿಸಿದ ಕುಂದುಕೊರತೆಗಳ ಪರಿಹಾರ ಸೇವೆಗಳು ಲಭ್ಯವಿರಲಿವೆ’ ಎಂದರು.</p>.<p>‘ಸಾರ್ವಜನಿಕ ರಜಾದಿನಗಳನ್ನು ಹೊರತುಪಡಿಸಿ, ಈ ಕೇಂದ್ರವು ವಾರದ ಎಲ್ಲಾ ದಿನಗಳಲ್ಲೂ ಸಾರ್ವಜನಿಕರಿಗಾಗಿ ತೆರೆದಿರುತ್ತದೆ. ಯುಐಡಿಎಐ ನೇರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುವ ಈ ಕೇಂದ್ರವನ್ನು ಸಂಪೂರ್ಣವಾಗಿ ನಿವಾಸಿ ಸ್ನೇಹಿಯಾಗಿ ವಿನ್ಯಾಸ ಮಾಡಲಾಗಿದೆ. ವಿಶೇಷವಾಗಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗಾಗಿ ವೀಲ್ಚೇರ್ ಪ್ರವೇಶ (ರ್ಯಾಂಪ್), ಪ್ರತ್ಯೇಕ ವಿಶ್ರಾಂತಿ ಕೊಠಡಿಗಳು ಮತ್ತು ಮೀಸಲಾದ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳನ್ನು ಇಲ್ಲಿ ಅಳವಡಿಸಲಾಗಿದೆ’ ಎಂದರು.</p>.<p>ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಎಡಿಸಿ ಝುಬೇರ, ಆಧಾರ್ ಸೇವೆಗಳನ್ನು ಸಾರ್ವಜನಿಕರಿಗೆ ಯಾವುದೇ ತೊಂದರೆಯಿಲ್ಲದೆ ಪರಿಣಾಮಕಾರಿಯಾಗಿ ಒದಗಿಸಲು, ಪ್ರಸ್ತುತ ಅನುಸರಿಸಲಾಗುತ್ತಿರುವ ಆಧಾರ್ ದಾಖಲಾತಿ ಮತ್ತು ನವೀಕರಣ ಕಾರ್ಯವಿಧಾನಗಳ ಕುರಿತು ಮಾಹಿತಿ ಪಡೆದರು.</p>.<p>ಯುಐಡಿಎಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಉಪನಿರ್ದೇಶಕ ಗುಲ್ಶನ್ ಕುಮಾರ್ ಸಿಂಗ್ ಮಾತನಾಡಿ, ‘ಜನರು ಆಧಾರ್ ಸೇವೆಗಳಿಗಾಗಿ ಕೇಂದ್ರದಲ್ಲಿ ಸಾಲಿನಲ್ಲಿ ನಿಲ್ಲುವ ಬದಲು ಆನ್ಲೈನ್ ಮೂಲಕ ಮುಂಗಡ ಅಪಾಯಿಂಟ್ಮೆಂಟ್ ಬುಕ್ ಮಾಡಬಹುದು. 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಾಡಿಸಬೇಕಾದ ಬಯೋಮೆಟ್ರಿಕ್ ನವೀಕರಣಗಳನ್ನು ಸೆಪ್ಟೆಂಬರ್ 2026 ರವರೆಗೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದೆ. ಈ ಸೌಲಭ್ಯವು ಆಧಾರ್ ಸೇವಾ ಕೇಂದ್ರಗಳಲ್ಲದೆ, ಆಯಾ ಶಾಲೆಗಳಲ್ಲಿ ಆಯೋಜಿಸಲಾಗುವ ವಿಶೇಷ ಶಿಬಿರಗಳ ಮೂಲಕವೂ ಲಭ್ಯವಿರಲಿದೆ' ಎಂದು ವಿವರಿಸಿದರು.</p>.<p>ಯುಐಡಿಎಐ ಪ್ರಾದೇಶಿಕ ಕಚೇರಿಯ ಸಹಾಯಕ ವ್ಯವಸ್ಥಾಪಕ ಪ್ರಸಾದ್ ಬಾಬು, ಆಧಾರ್ ಕೇಂದ್ರದ ಸಿಬ್ಬಂದಿ ಹಾಗೂ ಸೇವಾ ಪೂರೈಕೆದಾರರಾದ ಎಂ/ಎಸ್ ಬಿಎಲ್ಎಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<p>ಯುಐಡಿಎಐ ಅಧಿಕೃತ ಪೋರ್ಟಲ್: https://bookappointment.uidai. gov.in</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-25-2030332039</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>