<p><strong>ಬಳ್ಳಾರಿ:</strong> ಸೈಬರ್ ಅಪರಾಧ, ಸಂಚಾರ ನಿಯಮ ಉಲ್ಲಂಘನೆ, ಮಾದಕ ದ್ರವ್ಯ ನಿಯಂತ್ರಣ ಸೇರಿದಂತೆ ಅಪರಾಧಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನೊಳಗೊಂಡ ಕ್ಯಾಲೆಂಡರ್ ಅನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸೋಮವಾರ ಬಿಡುಗಡೆ ಮಾಡಿದರು.</p>.<p>‘ಪ್ರಜಾವಾಣಿ’ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಹೊರತಂದಿರುವ ಈ ಕ್ಯಾಲೆಂಡರ್ನಲ್ಲಿ ಹಲವು ಬಗೆಯ ಅಪರಾಧಗಳ ಕುರಿತು ಪ್ರತಿ ಪುಟದಲ್ಲಿ ಜನರನ್ನು ಜಾಗೃತಗೊಳಿಸುವ ಸಂದೇಶ, ಮಾಹಿತಿ ಇದೆ. ಈ ಕ್ಯಾಲೆಂಡರ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು. </p>.<p>‘ಅಪರಾಧಗಳ ವಿರುದ್ಧ ಜನರನ್ನು ಜಾಗೃತರನ್ನಾಗಿಸುವ ವಿಶಿಷ್ಟ ಬಗೆಯ ಕ್ಯಾಲೆಂಡರ್ ಇದಾಗಿದೆ. ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ಆಯ್ದ ಪ್ರದೇಶಗಳಲ್ಲಿ ಇದರ ವಿತರಣೆ ನಡೆಯಲಿದೆ’ ಎಂದು ಶೋಭಾರಾಣಿ ತಿಳಿಸಿದರು. </p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಸಿಪಿಐ ಸತೀಶ್, 'ಪ್ರಜಾವಾಣಿ' ಬಳ್ಳಾರಿ, ವಿಜಯನಗರ ಜಿಲ್ಲೆಗಳ ಪ್ರಸರಣಾಧಿಕಾರಿ ಆನಂದ್ ದಂಡಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಸೈಬರ್ ಅಪರಾಧ, ಸಂಚಾರ ನಿಯಮ ಉಲ್ಲಂಘನೆ, ಮಾದಕ ದ್ರವ್ಯ ನಿಯಂತ್ರಣ ಸೇರಿದಂತೆ ಅಪರಾಧಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನೊಳಗೊಂಡ ಕ್ಯಾಲೆಂಡರ್ ಅನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸೋಮವಾರ ಬಿಡುಗಡೆ ಮಾಡಿದರು.</p>.<p>‘ಪ್ರಜಾವಾಣಿ’ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಹೊರತಂದಿರುವ ಈ ಕ್ಯಾಲೆಂಡರ್ನಲ್ಲಿ ಹಲವು ಬಗೆಯ ಅಪರಾಧಗಳ ಕುರಿತು ಪ್ರತಿ ಪುಟದಲ್ಲಿ ಜನರನ್ನು ಜಾಗೃತಗೊಳಿಸುವ ಸಂದೇಶ, ಮಾಹಿತಿ ಇದೆ. ಈ ಕ್ಯಾಲೆಂಡರ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು. </p>.<p>‘ಅಪರಾಧಗಳ ವಿರುದ್ಧ ಜನರನ್ನು ಜಾಗೃತರನ್ನಾಗಿಸುವ ವಿಶಿಷ್ಟ ಬಗೆಯ ಕ್ಯಾಲೆಂಡರ್ ಇದಾಗಿದೆ. ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ಆಯ್ದ ಪ್ರದೇಶಗಳಲ್ಲಿ ಇದರ ವಿತರಣೆ ನಡೆಯಲಿದೆ’ ಎಂದು ಶೋಭಾರಾಣಿ ತಿಳಿಸಿದರು. </p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಸಿಪಿಐ ಸತೀಶ್, 'ಪ್ರಜಾವಾಣಿ' ಬಳ್ಳಾರಿ, ವಿಜಯನಗರ ಜಿಲ್ಲೆಗಳ ಪ್ರಸರಣಾಧಿಕಾರಿ ಆನಂದ್ ದಂಡಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>