<p><strong>ಬಳ್ಳಾರಿ:</strong> ಬಳ್ಳಾರಿಯಲ್ಲಿ ಹೊಸ ವರ್ಷದ ದಿನ ಜರುಗಿದ ಘರ್ಷಣೆಯ ಬೆನ್ನಿಗೇ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಇಬ್ಬರು ಉನ್ನತ ಅಧಿಕಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ಹೊಸಬರನ್ನು ನಿಯೋಜನೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. </p><p>ಬಳ್ಳಾರಿ ವಲಯಕ್ಕೆ 2004ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಪಿ.ಎಸ್ ಹರ್ಷ ಅವರನ್ನು ಹೊಸ ವಲಯ ಪೊಲೀಸ್ ಮಹಾನಿರೀಕ್ಷಕರನ್ನಾಗಿ ನಿಯೋಜಿಸಲಾಗಿದೆ. ಈ ಹುದ್ದೆಯಲ್ಲಿದ್ದ ವರ್ತಿಕಾ ಕಟಿಯಾರ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. </p>.ಬಳ್ಳಾರಿ ಘರ್ಷಣೆ | ರಾಜಶೇಖರ್ ಮರಣೋತ್ತರ ಪರೀಕ್ಷೆ 2 ಬಾರಿ ನಡೆಸಿಲ್ಲ: ಪರಮೇಶ್ವರ.ಬಳ್ಳಾರಿ ದೊಂಬಿ | ನಿಷ್ಪಕ್ಷಪಾತ ತನಿಖೆ ಸಾಧ್ಯವೇ: ಜನಾರ್ದನ ರೆಡ್ಡಿ ಪ್ರಶ್ನೆ. <p>ಬೆಂಗಳೂರಿನ ಗುಪ್ತವಾರ್ತೆ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಮನ್ ಪನ್ನೇಕರ್ ಅವರನ್ನು ಬಳ್ಳಾರಿಯ ಹೊಸ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯೋಜಿಸಲಾಗಿದೆ. ಡಿ. 31ರಂದು ಹೊಸದಾಗಿ ಎಸ್ಪಿಯಾಗಿದ್ದ ಪವನ್ ನಿಜ್ಜೂರ್ ಅವರನ್ನು ಘರ್ಷಣೆ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿತ್ತು. </p><p>ಚಿತ್ರದುರ್ಗದ ಎಸ್ಪಿ ರಂಜಿತ್ ಬಂಡಾರು ಅವರನ್ನು ಉಸ್ತುವಾರಿ ಎಸ್ಪಿಯಾಗಿ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಬಳ್ಳಾರಿಯಲ್ಲಿ ಹೊಸ ವರ್ಷದ ದಿನ ಜರುಗಿದ ಘರ್ಷಣೆಯ ಬೆನ್ನಿಗೇ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಇಬ್ಬರು ಉನ್ನತ ಅಧಿಕಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ಹೊಸಬರನ್ನು ನಿಯೋಜನೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. </p><p>ಬಳ್ಳಾರಿ ವಲಯಕ್ಕೆ 2004ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಪಿ.ಎಸ್ ಹರ್ಷ ಅವರನ್ನು ಹೊಸ ವಲಯ ಪೊಲೀಸ್ ಮಹಾನಿರೀಕ್ಷಕರನ್ನಾಗಿ ನಿಯೋಜಿಸಲಾಗಿದೆ. ಈ ಹುದ್ದೆಯಲ್ಲಿದ್ದ ವರ್ತಿಕಾ ಕಟಿಯಾರ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. </p>.ಬಳ್ಳಾರಿ ಘರ್ಷಣೆ | ರಾಜಶೇಖರ್ ಮರಣೋತ್ತರ ಪರೀಕ್ಷೆ 2 ಬಾರಿ ನಡೆಸಿಲ್ಲ: ಪರಮೇಶ್ವರ.ಬಳ್ಳಾರಿ ದೊಂಬಿ | ನಿಷ್ಪಕ್ಷಪಾತ ತನಿಖೆ ಸಾಧ್ಯವೇ: ಜನಾರ್ದನ ರೆಡ್ಡಿ ಪ್ರಶ್ನೆ. <p>ಬೆಂಗಳೂರಿನ ಗುಪ್ತವಾರ್ತೆ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಮನ್ ಪನ್ನೇಕರ್ ಅವರನ್ನು ಬಳ್ಳಾರಿಯ ಹೊಸ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯೋಜಿಸಲಾಗಿದೆ. ಡಿ. 31ರಂದು ಹೊಸದಾಗಿ ಎಸ್ಪಿಯಾಗಿದ್ದ ಪವನ್ ನಿಜ್ಜೂರ್ ಅವರನ್ನು ಘರ್ಷಣೆ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿತ್ತು. </p><p>ಚಿತ್ರದುರ್ಗದ ಎಸ್ಪಿ ರಂಜಿತ್ ಬಂಡಾರು ಅವರನ್ನು ಉಸ್ತುವಾರಿ ಎಸ್ಪಿಯಾಗಿ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>